Tuesday, March 17

ವೀಡಿಯೊ

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಯಾವ ರೀತಿ ತೆಗೆದುಹಾಕಲಾಗಿದೆ ಎಂಬ ಬಗ್ಗೆ ರಾಹುಲ್ ವಿವರಿಸಿದ್ದು ಹೀಗೆ

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಯಾವ ರೀತಿ ತೆಗೆದುಹಾಕಲಾಗಿದೆ ಎಂಬ ಬಗ್ಗೆ ರಾಹುಲ್ ವಿವರಿಸಿದ್ದು ಹೀಗೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ನವದೆಹಲಿ: ಮತಗಳ್ಳತನ ಬಗ್ಗೆ ಸರಣಿ ಆರೋಪಗಳನ್ನು ಮಾಡುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮತದಾರರ ಪಟ್ಟಿಯಿಂದ ಹೆಸರುಗಳನ್ನೂ ಯಾವ ರೀತಿ ತೆಗೆದುಹಾಕಲಾಗಿದೆ ಎಂಬ ಬಗ್ಗೆ ವಿವರಿಸಿರುವ ವೈಖರಿ ಗಮನಸೆಳೆದಿದೆ. In just 14 minutes, 12 voters were deleted under the name of Suryakant.One of them was Babita Chaudhary, her voice stolen without her knowledge.Suryakant himself didn’t even know his login was being used. Then who was behind it? Who had access? Who is running this organised… pic.twitter.com/XFjrAhsWku— Karnataka Congress (@INCKarnataka) September 18, 2025ಕೇವಲ 14 ನಿಮಿಷಗಳಲ್ಲಿ, ಸೂರ್ಯಕಾಂತ್ ಹೆಸರಿನಲ್ಲಿ 12 ಮತದಾರರನ್ನು ಅಳಿಸಲಾಗಿದೆ ಎಂದು ರಾಹುಲ್ ಗಾಂಧಿ ಬೊಟ್ಟು ಮಾಡಿದ್ದಾರೆ. ಒಬ್ಬರು ಬಬಿತಾ ಚೌಧರಿ, ಅವರ ಅರಿವಿಲ್ಲದೆ ಅವರ ಧ್ವನಿಯನ್ನು ಕದ್ದಿದ್ದಾರೆ. ಸೂರ್ಯಕಾಂತ್ ಅವರಿಗೂ ತಮ್ಮ ಲಾಗಿನ್ ಬಳಸಲಾಗುತ್ತಿದೆ ಎಂದು ತಿಳಿದಿರಲಿಲ್ಲ. ಹಾಗಾದರೆ ಇದರ ಹಿಂದೆ ಯಾರು ಇದ...
ಸೆಪ್ಟೆಂಬರ್ 28ರಿಂದ ‘ಬಿಗ್ ಬಾಸ್ ಕನ್ನಡ ಸೀಸನ್ 12’; ಕಿಚ್ಚನ ಗರಡಿ ಸೇರುವ ಸ್ಪರ್ಧಿಗಳ ಬಗ್ಗೆ ಕುತೂಹಲ

ಸೆಪ್ಟೆಂಬರ್ 28ರಿಂದ ‘ಬಿಗ್ ಬಾಸ್ ಕನ್ನಡ ಸೀಸನ್ 12’; ಕಿಚ್ಚನ ಗರಡಿ ಸೇರುವ ಸ್ಪರ್ಧಿಗಳ ಬಗ್ಗೆ ಕುತೂಹಲ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ಬೆಂಗಳೂರು: ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ’ ಅಭಿಮಾನಿಗಳಿಗೆ ಖುಷಿಯ ಸುದ್ದಿ. ಈಗಾಗಲೇ 11 ಸೀಸನ್‌ಗಳನ್ನು ಯಶಸ್ವಿಯಾಗಿ ಮುಗಿಸಿರುವ ಈ ಶೋ, ಶೀಘ್ರದಲ್ಲೇ 12ನೇ ಸೀಸನ್ ಪ್ರೇಕ್ಷಕರ ಮುಂದೆ ಬರಲಿದೆ. ಸೆಪ್ಟೆಂಬರ್ 28, ಭಾನುವಾರದಂದು ಗ್ರ್ಯಾಂಡ್ ಓಪನಿಂಗ್ ನಡೆಯಲಿದ್ದು, ಈ ಬಾರಿ ಬಿಗ್ ಬಾಸ್ ಮನೆ ಪ್ರವೇಶಿಸುವ ಸ್ಪರ್ಧಿಗಳು ಯಾರು ಎಂಬ ಕುತೂಹಲ ಉಂಟಾಗಿದೆ. View this post on Instagram A post shared by Colors Kannada Official (@colorskannadaofficial)ಕಿಚ್ಚ ಸುದೀಪ್ ಅವರು ನಿರೂಪಣೆಗೆ ಸಜ್ಜಾಗಿದ್ದು, ಶೋವನ್ನು ‘ಕಲರ್ಸ್ ಕನ್ನಡ’ ವಾಹಿನಿಯಲ್ಲಿ ಪ್ರಸಾರ ಮಾಡಲಾಗುತ್ತಿದೆ. ಸುದೀಪ್ ಅವರ ಹುಟ್ಟುಹಬ್ಬದ ಪ್ರಯುಕ್ತ ಪ್ರೋಮೋ ಬಿಡುಗಡೆ ಆಗಿದ್ದು, ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ.ಪ್ರೋಮೋದಲ್ಲಿ – “ರಿಯಾಲಿಟಿ ಶೋಗಳ ಬಾಸ್, ರಿಯಲ್ ಎಂಟರ್‌ಟೈನ್‌ಮೆಂಟ್‌ಗೆ ಒಂದೇ ಅಡ್ರೆಸ್. ಬಿಗ್ ಬಾಸ್ ಕನ್ನಡ ಸೀಸನ್ 12 ಗ್ರ್ಯಾಂಡ್ ಓಪನಿಂಗ್ ಸೆಪ್ಟೆಂಬರ್ 28ಕ್ಕೆ” ಎಂದು ಘೋಷಿಸಲಾಗಿದೆ.ಅದರಲ್ಲೇ ಸುದೀಪ್ ಅವರು “ನನ್ನ...
1000 ನೃತ್ಯಗಾರರೊಂದಿಗೆ ರಾಮ್ ಚರಣ್ ‘ಪೆಡ್ಡಿ’ ಹಾಡಿನ ಚಿತ್ರೀಕರಣ..

1000 ನೃತ್ಯಗಾರರೊಂದಿಗೆ ರಾಮ್ ಚರಣ್ ‘ಪೆಡ್ಡಿ’ ಹಾಡಿನ ಚಿತ್ರೀಕರಣ..

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ, ಸಿನಿಮಾ
ಹೈದರಾಬಾದ್: ತೆಲುಗು ತಾರೆ ರಾಮ್ ಚರಣ್ ನಾಯಕನಾಗಿ ಬುಚಿ ಬಾಬು ಸನಾ ನಿರ್ದೇಶನದ ಬಹುನಿರೀಕ್ಷಿತ ‘ಪೆಡ್ಡಿ’ ಚಿತ್ರದ ತಂಡ ಭವ್ಯ ಹಾಡಿನ ಚಿತ್ರೀಕರಣವನ್ನು ಆರಂಭಿಸಿದೆ.ವಿನಾಯಕ ಚತುರ್ಥಿಯ ಸಂದರ್ಭದಲ್ಲಿ, ಹೆಚ್ಚಿನವರು ರಜೆಯನ್ನು ಆರಿಸಿಕೊಂಡಾಗ, ‘ಪೆಡ್ಡಿ’ ತಂಡವು ಹಬ್ಬದ ಉತ್ಸಾಹದ ನಡುವೆಯೇ ಮೈಸೂರಿನಲ್ಲಿ ಭರ್ಜರಿಯಾಗಿ ಕಾರ್ಯಾರಂಭ ಮಾಡಿದೆ. ಜನಪ್ರಿಯ ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಸಂಯೋಜಿಸಿರುವ ಈ ಗೀತೆಯಲ್ಲಿ ಸಾವಿರಕ್ಕೂ ಹೆಚ್ಚು ನೃತ್ಯಗಾರರು ಪಾಲ್ಗೊಂಡಿದ್ದಾರೆ.https://youtu.be/fYSGt_ld00A?si=KljQ1unRZy7smjSuಆಸ್ಕರ್‌ ಪ್ರಶಸ್ತಿ ವಿಜೇತ ಸಂಗೀತ ಸಂಯೋಜಕ ಎ.ಆರ್. ರೆಹಮಾನ್ ರಾಮ್ ಚರಣ್ ಪಾತ್ರದ ಪರಿಚಯಕ್ಕೆ ತಕ್ಕ ಮಾಸ್‌ ಹಾಡನ್ನು ರಚಿಸಿದ್ದು, ಅದ್ಧೂರಿ ಪ್ರಮಾಣದಲ್ಲಿ ಚಿತ್ರೀಕರಣ ನಡೆಯುತ್ತಿದೆ. ಈ ಹಾಡು ಚಿತ್ರದಲ್ಲಿನ ಪ್ರಮುಖ ಆಕರ್ಷಣೆಯಾಗಲಿದೆ ಎಂದು ತಂಡ ಭರವಸೆ ನೀಡಿದೆ.ಕನ್ನಡದ ಸೂಪರ್‌ಸ್ಟಾರ್ ಶಿವ ರಾಜ್‌ಕುಮಾರ್ “ಗೌರ್ನೈಡು” ಪಾತ್ರದಲ್ಲಿ ಕಾಣಿಸಿಕೊಳ್ಳಲಿರುವುದಾಗಿ ನಿರ್ಮಾಪಕರು ಅವರ ಜನ್ಮದಿನದಂದು ಘೋಷಿಸಿದ್ದರು. ಜಾನ್ವಿ ಕಪೂರ್ ನಾಯಕಿಯಾಗಿ, ಜ...

ಚಾಮುಂಡಿ ಬೆಟ್ಟ ಹೇಳಿಕೆ: ಡಿಕೆಶಿ ವಿರುದ್ಧ ಬಿಜೆಪಿ ಆಕ್ರೋಶ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: “ಚಾಮುಂಡಿ ಬೆಟ್ಟ ಹಿಂದೂಗಳಿಗೆ ಸೇರಿದ್ದಲ್ಲ” ಎಂಬ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಯ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರ ಆಕ್ರೋಶ ವ್ಯಕ್ತವಾಗಿದೆ.ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿ, “ರಾಜ್ಯದ ಮೂರು ಸಾವಿರಕ್ಕೂ ಹೆಚ್ಚಿನ ದೇವಸ್ಥಾನಗಳು ಹಿಂದೂಗಳ ಆಸ್ತಿ. ಈ ದೇವಸ್ಥಾನಗಳು ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಬಂದುದರಿಂದ ಹಿಂದೂಗಳಿಗೆ ಸೇರಿದ ಆಸ್ತಿ ಅಲ್ಲವೇ? ಮುಜರಾಯಿ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳು ಹಿಂದೂ ಸಮುದಾಯದವಲ್ಲ ಎಂದರೆ ಸಮಸ್ತ ಹಿಂದೂಗಳಿಗೆ ಯಾವ ಸಂದೇಶ ನೀಡುತ್ತಿದ್ದೀರಿ? ಕಾಂಗ್ರೆಸ್ ನಾಯಕರು ಹಿಂದೂಗಳ ಅಪಮಾನ ಮಾಡುವುದನ್ನು ಮೊದಲು ನಿಲ್ಲಿಸಬೇಕು,” ಎಂದು ಕಿಡಿಕಾರಿದ್ದಾರೆ. ರಾಜ್ಯದ 3 ಸಾವಿರಕ್ಕಿಂತಲೂ ಹೆಚ್ಚಿನ ದೇವಸ್ಥಾನಗಳು ಹಿಂದೂಗಳ ಆಸ್ತಿ. ದೇವಸ್ಥಾನಗಳು ಮುಜರಾಯಿ ಇಲಾಖೆಯ ವ್ಯಾಪ್ತಿಗೆ ವಹಿಸಲಾಗಿದೆ. ಮುಜರಾಯಿ ವ್ಯಾಪ್ತಿಯಲ್ಲಿ ಇದ್ದ ಮಾತ್ರಕ್ಕೆ ಹಿಂದೂ ದೇವಸ್ಥಾನಗಳು ಹಿಂದೂಗಳ ಆಸ್ತಿಯಲ್ಲವೇ? ಈ ಮೂಲಕ ರಾಜ್ಯದ ಸಮಸ್ತ ಹಿಂದೂಗಳಿಗೆ ಯಾವ ಸಂದೇಶ ನೀಡುತ್ತಿದ್ದೀರಿ? ಕಾಂಗ್ರೆಸ್ಸಿಗರೇ, ಹಿಂದೂಗಳ ಅಪ...
4000 ವಿದ್ಯಾರ್ಥಿಗಳು 5000 ದೀಪಗಳಿಂದ ಬೃಹತ್ ‘ಗಣೇಶನ ಆಕೃತಿ’ ರಚನೆ

4000 ವಿದ್ಯಾರ್ಥಿಗಳು 5000 ದೀಪಗಳಿಂದ ಬೃಹತ್ ‘ಗಣೇಶನ ಆಕೃತಿ’ ರಚನೆ

Focus, ಆಧ್ಯಾತ್ಮ, ದೇಗುಲ ದರ್ಶನ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ಕೊಪ್ಪಳ: ಗಂಗಾವತಿ ತಾಲೂಕಿನ ಶ್ರೀರಾಮನಗರದ ನಮ್ಮ ಶ್ರೀ ವಿದ್ಯಾನಿಕೇತನ ಪಬ್ಲಿಕ್ ಶಾಲೆಯಲ್ಲಿ ಗಣೇಶೋತ್ಸವದ ಅಂಗವಾಗಿ “4000 ವಿದ್ಯಾರ್ಥಿಗಳು 5000 ದೀಪಗಳಿಂದ ಬೃಹತ್ ಗಾತ್ರದ ಗಣೇಶನ ಆಕೃತಿಯನ್ನು ರಚಿಸಿ ದೀಪಗಳನ್ನು ಬೆಳಗಿಸಿ ಗಣೇಶನಿಗೆ ವೈಶಿಷ್ಟ್ಯಪೂರ್ಣವಾದ ಅಹ್ವಾನವನ್ನು ನೀಡಲಾಯಿತು.5,000 ದೀಪಗಳು, 4,000 ವಿದ್ಯಾರ್ಥಿಗಳಿಂದ ಬೃಹತ್ ಗಣೇಶ ಆಕೃತಿ ರಚನೆ!! ಗಂಗಾವತಿ ತಾಲೂಕಿನ ಶ್ರೀರಾಮನಗರದ ವಿದ್ಯಾನಿಕೇತನ ಪಬ್ಲಿಕ್ ಶಾಲೆಯ ಮಕ್ಕಳು ವಿನಾಯಕನ ಹಬ್ಬವನ್ನು ವಿಭಿನ್ನ ರೀತಿಯಲ್ಲಿ ಸ್ವಾಗತಿಸುವ ಮೂಲಕ ಗಮನ ಸೆಳೆದಿದ್ದಾರೆ.#Ballari #Koppala pic.twitter.com/big3vBbG7l— Ballari Tweetz (@TweetzBallari) August 25, 2025ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಅತ್ಯಂತ ಸಂಭ್ರಮ ಸಂತೋಷದಿAದ ಪಾಲ್ಗೊಂಡು ವಿನಾಯಕನಿಗೆ ಜೈಕಾರವನ್ನು ಹಾಕಿ ದೀಪಗಳಿಂದ ಗಣೇಶನ ಆಕೃತಿಯನ್ನು ಮೂಡಿಸಿದರು.ಶಾಲೆಯ ಪೂರ್ವ ಪ್ರಾಥಮಿಕದಿಂದ ಎಂಟನೆಯ ತರಗತಿಯ ಸುಮಾರು 2000ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಪರಿಸರ ಸ್ನೇಹಿ ಗಣೇಶನ ಮೂರ್ತಿಗಳನ್ನು ಮಾಡಿಸಲಾಯಿತು. ವಿದ್ಯಾರ್ಥಿಗಳಲ...
ತಾಯ್ನಾಡಿಗೆ ವಾಪಸ್ಸಾದ ಶುಭಾಂಶು ಶುಕ್ಲಾಗೆ ಅದ್ಧೂರಿ ಸ್ವಾಗತ

ತಾಯ್ನಾಡಿಗೆ ವಾಪಸ್ಸಾದ ಶುಭಾಂಶು ಶುಕ್ಲಾಗೆ ಅದ್ಧೂರಿ ಸ್ವಾಗತ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ನವದೆಹಲಿ: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಐತಿಹಾಸಿಕ ಭೇಟಿ ನೀಡಿದ ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ಭಾನುವಾರ ತಾಯ್ನಾಡಿಗೆ ವಾಪಸ್ಸಾಗಿದ್ದಾರೆ. ಮಧ್ಯರಾತ್ರಿ 1:30ರ ವೇಳೆಗೆ ಅಮೆರಿಕದಿಂದ ದೆಹಲಿಗೆ ಆಗಮಿಸಿದ ಶುಭಾಂಶು ಶುಕ್ಲಾ ಅವರಿಗೆ ಇಂದಿರಾ ಗಾಂಧಿ ಏರ್‌ಪೋರ್ಟ್‌ನಲ್ಲಿ ಅದ್ದೂರಿ ಸ್ವಾಗತ ನೀಡಲಾಯಿತು. #WATCH | Delhi: Group Captain Shubhanshu Shukla arrives back in India. He is welcomed by Union MoS for Science & Technology, Dr Jitendra Singh and Delhi CM Rekha Gupta.He was the pilot of NASA's Axiom-4 Space Mission, which took off from NASA's Kennedy Space Centre in Florida,… pic.twitter.com/FTpP1NaY0O— ANI (@ANI) August 16, 2025ಕೇಂದ್ರ ಸಚಿವ ಜಿತೇಂದ್ರ ಸಿಂಗ್, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ, ಶುಭಾಂಶು ಶುಕ್ಲಾ ಅವರು ಶುಭಾಂಶು ಶುಕ್ಲಾರನ್ನು ಬರಮಾಡಿಕೊಂಡರು. ಐಎಸ್‍ಎಸ್‍ನಲ್ಲಿ 18 ದಿನಗಳನ್ನು ಕಳೆದ ನಂತರ ಗಗನಯಾತ್ರಿ ಕಳೆದ ತಿಂಗಳು ಭೂಮಿಗೆ ಮರ...
ಟೀಸರ್: ನಿವಿನ್–ನಯನ ಜೋಡಿ ಹೊಸ ಕಮಿಡಿ ಆಕ್ಷನ್‌ ಚಿತ್ರ ‘ಡಿಯರ್ ಸ್ಟೂಡೆಂಟ್ಸ್’

ಟೀಸರ್: ನಿವಿನ್–ನಯನ ಜೋಡಿ ಹೊಸ ಕಮಿಡಿ ಆಕ್ಷನ್‌ ಚಿತ್ರ ‘ಡಿಯರ್ ಸ್ಟೂಡೆಂಟ್ಸ್’

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ, ಸಿನಿಮಾ
ಚೆನ್ನೈ: ನಿವಿನ್ ಪೌಲಿ–ನಯನತಾರಾ ಅಭಿನಯದ ಡಿಯರ್ ಸ್ಟೂಡೆಂಟ್ಸ್ ಚಿತ್ರದ ಟೀಸರ್ ಬಿಡುಗಡೆಯಾಗಿ ಪ್ರೇಕ್ಷಕರಲ್ಲಿ ಕುತೂಹಲ ಹೆಚ್ಚಿಸಿದೆ. ಜಾರ್ಜ್ ಫಿಲಿಪ್ ರಾಯ್ ಮತ್ತು ಸಂದೀಪ್ ಕುಮಾರ್ ನಿರ್ದೇಶನದ ಈ ಚಿತ್ರ ಹಾಸ್ಯ–ಆಕ್ಷನ್‌ ಮಿಶ್ರಣವಾಗಿದೆ.https://www.youtube.com/watch?v=x8P484NvOnkಟೀಸರ್‌ನಲ್ಲಿ, ಬೇಕರಿ ಮಾಲೀಕರಾದ ಹರಿ (ನಿವಿನ್) ಮತ್ತು ಗ್ರಾಹಕರಂತೆ ಬಂದು ಕುಳಿತ ನಯನತಾರಾ ನಡುವಿನ ಮನರಂಜನೀಯ ಸಂಭಾಷಣೆ ಪ್ರೇಕ್ಷಕರನ್ನು ನಗೆಗಡಲಿಗೆ ತಳ್ಳುತ್ತದೆ. ಆದರೆ ತಕ್ಷಣವೇ ನಯನತಾರಾ ಪೊಲೀಸ್ ಅಧಿಕಾರಿಯೆಂದು ಬಹಿರಂಗವಾಗುವ ತಿರುವು ಕಥೆಗೆ ಹೊಸ ಮಜಾ ನೀಡುತ್ತದೆ.ಶಾಲಾ ವಿದ್ಯಾರ್ಥಿಗಳ ಕಥಾಹಂದರದ ಮೇಲೆ ಸಾಗುವ ಈ ಚಿತ್ರದಲ್ಲಿ ಹಾಸ್ಯದ ಜೊತೆ ಸಾಕಷ್ಟು ಆಕ್ಷನ್‌ ದೃಶ್ಯಗಳೂ ಇವೆ. ಛಾಯಾಗ್ರಹಣ: ಅನಿಲ್ ಸಿ. ಚಂದ್ರನ್–ಶಿನೋಜ್, ಸಂಗೀತ: ಜಸ್ಟಿನ್ ವರ್ಗೀಸ್, ಹಿನ್ನೆಲೆ ಸಂಗೀತ: ಸಿಬಿ ಮ್ಯಾಥ್ಯೂ ಅಲೆಕ್ಸ್ ಹೀಗೆ ಹಲವ ಪ್ರತಿಭೆಗಳ ಸಮ್ಮಿಲನ ಇದರಲ್ಲಿದೆ....
ಆಪ್ ಸಿಂಧೂರ್ ಪಾಕಿಸ್ತಾನ ನಿದ್ರೆ ಭಂಗ; ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಘರ್ಜನೆ

ಆಪ್ ಸಿಂಧೂರ್ ಪಾಕಿಸ್ತಾನ ನಿದ್ರೆ ಭಂಗ; ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಘರ್ಜನೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ನವದೆಹಲಿ: ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಪಾಕಿಸ್ತಾನದ ನಿದ್ರೆಯನ್ನು ಭಂಗಪಡಿಸಿದ್ದು, ಅಲ್ಲಿನ ವಿನಾಶದ ಪ್ರಮಾಣ ಅಗಾಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಘೋಷಿಸಿದರು.https://www.youtube.com/watch?v=9opHntwpzpw“ಭಾರತ ಇನ್ನು ಮುಂದೆ ಪರಮಾಣು ಬ್ಲ್ಯಾಕ್‌ಮೇಲ್‌ಗೆ ತಲೆಬಾಗುವುದಿಲ್ಲ. ಶತ್ರುಗಳು ದುಸ್ಸಾಹಸ ಮಾಡಿದರೆ, ನಮ್ಮ ಸಶಸ್ತ್ರ ಪಡೆಗಳು ಸೂಕ್ತ ಉತ್ತರ ನೀಡುತ್ತವೆ. ರಕ್ತ ಮತ್ತು ನೀರು ಒಟ್ಟಿಗೆ ಹರಿಯುವುದಿಲ್ಲ ಎಂದು ಭಾರತ ನಿರ್ಧರಿಸಿದೆ” ಎಂದು ಅವರು ಎಚ್ಚರಿಸಿದರು.ಪಹಲ್ಗಾಂಮ್ ಭಯೋತ್ಪಾದಕ ದಾಳಿಯ ನಂತರ ನಡೆದ ಆಪ್ ಸಿಂಧೂರ್‌ನಲ್ಲಿ, ಭಾರತೀಯ ಸೈನಿಕರು ಶತ್ರು ಪ್ರದೇಶದೊಳಗೆ ನೂರಾರು ಕಿಲೋಮೀಟರ್ ನುಗ್ಗಿ ಭಯೋತ್ಪಾದಕರ ಕೇಂದ್ರ ಕಚೇರಿಯನ್ನು ಧ್ವಂಸ ಮಾಡಿದ ಉದಾಹರಣೆ ನೀಡಿದ ಮೋದಿ, “ನಮ್ಮ ಧೈರ್ಯಶಾಲಿ ಸೈನಿಕರು ಶತ್ರುಗಳಿಗೆ ಕಲ್ಪನೆಗೂ ಮೀರಿದ ಶಿಕ್ಷೆ ನೀಡಿದ್ದಾರೆ” ಎಂದರು.“ಭಯೋತ್ಪಾದಕರು ಮತ್ತು ಅವರಿಗೆ ಆಶ್ರಯ ನೀಡುವವರಲ್ಲಿ ವ್ಯತ್ಯಾಸವಿಲ್ಲ. ಇಬ್ಬರೂ ಮಾನವೀಯತೆಗೆ ಸಮಾನ ಅಪಾಯ” ಎಂದು ಸ್ಪಷ್ಟಪಡಿಸಿದ ಪ್ರಧಾನಿ, ...
140 ಕೋಟಿ ಜನರ ಸಂಕಲ್ಪದ ಹಬ್ಬವಾಗಿ ಸ್ವಾತಂತ್ರ್ಯೋತ್ಸವ

140 ಕೋಟಿ ಜನರ ಸಂಕಲ್ಪದ ಹಬ್ಬವಾಗಿ ಸ್ವಾತಂತ್ರ್ಯೋತ್ಸವ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ನವದೆಹಲಿ: ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಪಾಕಿಸ್ತಾನದ ನಿದ್ರೆಯನ್ನು ಭಂಗಪಡಿಸಿದ್ದು, ಅಲ್ಲಿನ ವಿನಾಶದ ಪ್ರಮಾಣ ಅಗಾಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಘೋಷಿಸಿದರು.https://www.youtube.com/watch?v=9opHntwpzpw“ಭಾರತ ಇನ್ನು ಮುಂದೆ ಪರಮಾಣು ಬ್ಲ್ಯಾಕ್‌ಮೇಲ್‌ಗೆ ತಲೆಬಾಗುವುದಿಲ್ಲ. ಶತ್ರುಗಳು ದುಸ್ಸಾಹಸ ಮಾಡಿದರೆ, ನಮ್ಮ ಸಶಸ್ತ್ರ ಪಡೆಗಳು ಸೂಕ್ತ ಉತ್ತರ ನೀಡುತ್ತವೆ. ರಕ್ತ ಮತ್ತು ನೀರು ಒಟ್ಟಿಗೆ ಹರಿಯುವುದಿಲ್ಲ ಎಂದು ಭಾರತ ನಿರ್ಧರಿಸಿದೆ” ಎಂದು ಅವರು ಎಚ್ಚರಿಸಿದರು.ಪಹಲ್ಗಾಂಮ್ ಭಯೋತ್ಪಾದಕ ದಾಳಿಯ ನಂತರ ನಡೆದ ಆಪ್ ಸಿಂಧೂರ್‌ನಲ್ಲಿ, ಭಾರತೀಯ ಸೈನಿಕರು ಶತ್ರು ಪ್ರದೇಶದೊಳಗೆ ನೂರಾರು ಕಿಲೋಮೀಟರ್ ನುಗ್ಗಿ ಭಯೋತ್ಪಾದಕರ ಕೇಂದ್ರ ಕಚೇರಿಯನ್ನು ಧ್ವಂಸ ಮಾಡಿದ ಉದಾಹರಣೆ ನೀಡಿದ ಮೋದಿ, “ನಮ್ಮ ಧೈರ್ಯಶಾಲಿ ಸೈನಿಕರು ಶತ್ರುಗಳಿಗೆ ಕಲ್ಪನೆಗೂ ಮೀರಿದ ಶಿಕ್ಷೆ ನೀಡಿದ್ದಾರೆ” ಎಂದರು.“ಭಯೋತ್ಪಾದಕರು ಮತ್ತು ಅವರಿಗೆ ಆಶ್ರಯ ನೀಡುವವರಲ್ಲಿ ವ್ಯತ್ಯಾಸವಿಲ್ಲ. ಇಬ್ಬರೂ ಮಾನವೀಯತೆಗೆ ಸಮಾನ ಅಪಾಯ” ಎಂದು ಸ್ಪಷ್ಟಪಡಿಸಿದ ಪ್ರಧಾನಿ, ...
ಭೀಕರ ದುರಂತ; ನಿಂತಿದ್ದ ವಿಮಾನದ ಮೇಲೆ ಮತ್ತೊಂದು ವಿಮಾನ ಪತನ

ಭೀಕರ ದುರಂತ; ನಿಂತಿದ್ದ ವಿಮಾನದ ಮೇಲೆ ಮತ್ತೊಂದು ವಿಮಾನ ಪತನ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಕಾಲಿಸ್ಪೆಲ್ (ಅಮೆರಿಕಾ): ಅಮೆರಿಕದ ಮಾಂಟಾನಾ ರಾಜ್ಯದ ಕಾಲಿಸ್ಪೆಲ್ ನಗರ ವಿಮಾನ ನಿಲ್ದಾಣದಲ್ಲಿ ಭೀಕರ ದುರಂತ ನಡೆದಿದೆ. ನಿಂತಿದ್ದ ವಿಮಾನದ ಮೇಲೆ ಮತ್ತೊಂದು ಸಣ್ಣ ವಿಮಾನ ಅಪ್ಪಳಿಸಿದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 🚨 BREAKING: A plane has just crashed into another plane at Kalispell Airport in Montana, creating a massive fireball, per KOAXNo word on casuaIties yet, but a MAJOR rescue operation is underway.Pray for the occupants of each plane 🙏🏻 pic.twitter.com/Ej4Eq1Du8y— Nick Sortor (@nicksortor) August 11, 2025 ಅಧಿಕಾರಿಗಳ ಪ್ರಕಾರ, ಘಟನೆಯಲ್ಲಿ ಯಾರಿಗೂ ಗಂಭೀರ ಗಾಯಗಳಾಗಿಲ್ಲ. ನಾಲ್ವರನ್ನು ಹೊತ್ತೊಯ್ಯುತ್ತಿದ್ದ ಸಿಂಗಲ್ ಎಂಜಿನ್ ವಿಮಾನವು ಮಧ್ಯಾಹ್ನ 2 ಗಂಟೆ ಸುಮಾರಿಗೆ ಇಳಿಯುವಾಗ ನಿಯಂತ್ರಣ ತಪ್ಪಿ ಪತನಗೊಂಡಿದೆ.ಅಗ್ನಿಶಾಮಕ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದರು. ಅಪಘಾತದ ಕಾರಣವನ್ನು ಪತ್ತೆಹಚ್ಚಲು ತನಿಖೆ ಆರಂಭಿ...