
ಉತ್ತರಾಖಂಡ: ಗೌರಿಕುಂಡ್ ಬಳಿ ಹೆಲಿಕಾಪ್ಟರ್ ಪತನಗೊಂಡಿದೆ. ಡೆಹ್ರಾಡೂನ್ ನಿಂದ ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಗೌರಿಕುಂಡದ ಬಳಿ ಪತನಗೊಂಡಿದೆ.
ಭಾನುವಾರ ಮುಂಜಾನೆ ಸಂಭವಿಸಿದ ಈ ದುರ್ಘಟನೆಯಲ್ಲಿ ಪೈಲಟ್ ಸೇರಿ 7 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
#WATCH | Rudraprayag, Uttarakhand: Today, a helicopter operating a flight on the sector Shri Kedarnath to Guptkashi was involved in an accident. A total of 07 people were on board this helicopter, who died on the spot. Rescue teams were immediately dispatched under the direction… pic.twitter.com/DFSa7glmrI
— ANI (@ANI) June 15, 2025
ಆರ್ಯನ್ ಅವಿಯೇಷನ್ ಕಂಪನಿಗೆ ಸೇರಿದ ಹೆಲಿಕಾಪ್ಟರ್ 6 ಪ್ರಯಾಣಿಕರನ್ನು ಹೊತ್ತು ಗುಪ್ತಕಾಶಿಗೆ ತೆರಳುತ್ತಿತ್ತು. ಈ ವೇಳೆ ಗೌರಿಕುಂಡ್ ಬಳಿ ಬೆಳಗಿನ ಜಾವ 5.30ರ ಸುಮಾರಿಗೆ ಪತನವಾಗಿದೆ. ಪೈಲಟ್ ಸೇರಿ ಒಟ್ಟು 7 ಮಂದಿ ಇದ್ದರು ಎನ್ನಲಾಗಿದ್ದು, ಎಲ್ಲರೂ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ಹವಾಮಾನ ವೈಪರೀತ್ಯದಿಂದಾಗಿ ದುರ್ಘಟನೆ ಸಂಭವಿಸಿದೆ ಎಂದು ವರದಿಗಳು ತಿಳಿಸಿವೆ.