Tuesday, June 24

ಪಹಲ್ಗಮ್ ದಾಳಿ ಬೆನ್ನಲ್ಲೇ ಪಾಕಿಸ್ತಾನಕ್ಕೆ ಮೋದಿ ಮಾಸ್ಟರ್ ಸ್ಟ್ರೋಕ್

ನವದೆಹಲಿ: ಜಮ್ಮುಕಾಶ್ಮೀರದ ಪಹಲ್ಗಾಮ್ ಬಳಿ ಮಂಗಳವಾರ ಉಗ್ರರು ನಡೆಸಿದ ದಾಳಿ ಬೆನ್ನಲ್ಲೇ ಭಾರತ ಸರ್ಕಾರ ಪಾಕಿಸ್ತಾನ ವಿರುದ್ಧ ರಾಜತಾಂತ್ರಿಕ ಯುದ್ಧ ಘೋಷಿಸಿದೆ. ಪಹಲ್ಗಮ್ ದಾಳಿಯಲ್ಲಿ ಪಾಕಿಸ್ತಾನ ಕೈವಾಡ ಇರುವುದು ಗೊತ್ತಾಗುತ್ತಿದ್ದಂತೆಯೇ ಮೋದಿ ಸರ್ಕಾರ ಪ್ರಮುಖ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದೆ.

ಈ ಸಂಬಂಧ ಪ್ರಧಾನಿ ಉಪಸ್ಥಿತಿಯಲ್ಲಿ ಬುಧವಾರ ಭದ್ರತೆ ಕುರಿತ ಸಂಪುಟ ಉಪಸಮಿತಿ ಸಭೆ ನಡೆಯಿತು. ಪಾಕ್ ಜೊತೆಗಿನ ರಾಜತಾಂತ್ರಿಕ ಸಂಬಂಧ ಮೊಟಕುಗೊಳಿಸುವ ತೀರ್ಮಾನ ಕೈಗೊಳ್ಳಲಾಯಿತು.

ಪ್ರಮುಖ ಘೋಷಣೆಗಳು:

  • ಪಾಕ್ ಜೊತೆಗಿನ ಸಿಂಧೂ ನದಿ ನೀರು ಒಪ್ಪಂದ ಅಮಾನತು.

  • ಪಾಕಿಸ್ತಾನಿ ಪ್ರಜೆಗಳಿಗೆ ಭಾರತದ ವೀಸಾ ರದ್ದು

  • ಭಾರತದಲ್ಲಿರುವ ಪಾಕಿಸ್ತಾನಿ ರಾಯಭಾರ ಕಚೇರಿ ಮುಚ್ಚುವುದು.

  • ಭಾರತ ತೊರೆಯಲು ಪಾಕಿಸ್ತಾನಿಯಾರಿಗೆ 48 ಗಂಟೆಗಳ ಗಡುವು.

  • ಅಟ್ಟಾರಿ ಗಡಿ ಚೆಕ್‌ಪೋಸ್ಟ್ ಮುಚ್ಚುವುದು.