
‘ಆಶಾ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್.. ಏಪ್ರಿಲ್ನಿಂದ ವೇತನ ಹೆಚ್ಚಳ.. ಸಿಎಂ ಭರವಸೆ ನಂತರ ಧರಣಿ ಅಂತ್ಯ
ಬೆಂಗಳೂರು; ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್'ನಲ್ಲಿ ನಡೆಯುತ್ತಿದ್ದ ಆಶಾ ಕಾರ್ಯಕರ್ತೆಯರ ಅನಿರ್ಧಿಷ್ಟಾವಧಿ ಧರಣಿ ಅಂತ್ಯಗೊಂಡಿದೆ. ಸಿಎಂ ಸಿದ್ದರಾಮಯ್ಯ ಅವರ ಭರವಸೆ ಹಿನ್ನೆಲೆಯಲ್ಲಿ ಹೋರಾಟವನ್ನು ಅಂತ್ಯಗೊಳಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ (AIUTUC) ಅಧ್ಯಕ್ಷ ಕೆ. ಸೋಮಶೇಖರ್ ಯಾದಗಿರಿ ಹಾಗೂ ರಾಜ್ಯ ಕಾರ್ಯದರ್ಶಿ ಡಿ.ನಾಗಲಕ್ಷ್ಮೀ ತಿಳಿಸಿದ್ದಾರೆ.
ಮುಖ್ಯಮಂತ್ರಿಗಳ ಮಧ್ಯಪ್ರವೇಶದಲ್ಲಿ 10,000 ಮಾಸಿಕ ಗೌರವ ಧನ ನಿಗದಿ ಸೇರಿದಂತೆ ಪ್ರಮುಖ ಬೇಡಿಕೆಗಳ ಈಡೇರಿಕೆ ಭರವಸೆಯು ಆಶಾಗಳ ಅನಿರ್ದಿಷ್ಟಾವಧಿ ಹೋರಾಟಕ್ಕೆ ದೊರೆತ ಅಭೂತಪೂರ್ವ ಯಶಸ್ಸು ಎಂದವರು ಹೇಳಿದ್ದಾರೆ. ಮಾಸಿಕ ರೂ.10,000 ನಿಶ್ಚಿತ ಗೌರವಧನದ ಜೊತೆಗೆ ಹೆಚ್ಚುವರಿ ಕೆಲಸಕ್ಕೆ ಹೆಚ್ಚುವರಿ ಪ್ರೋತ್ಸಾಹಧನ ದೊರೆಯುವ ಖಾತ್ರಿ, ನಿವೃತ್ತಿ ಪರಿಹಾರ ನೀಡುವ ಕುರಿತು ಮುಂದಿನ ದಿನಗಳಲ್ಲಿ ಪರಿಶೀಲನೆ, ಗಂಭೀರ ಕಾಯಿಲೆಗಳಿಗೆ ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿ ದಾಖಲಾದ ಸಂದರ್ಭದಲ್ಲಿ ಮೂರು ತಿಂಗಳ ವೇತನ ಸಹಿತ ರಜೆ ಕುರಿತು ಪರಿಶೀಲನೆ ಸಹಿ...