Tuesday, June 24

Tag: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ಕಾರು ಬಗ್ಗೆ ಹೆಚ್ಡಿಕೆ ತಕರಾರು? ಕಾಂಗ್ರೆಸ್ ನಾಯಕ ರಮೇಶ್ ಬಾಬು ಟೀಕೆ

ಕಾರು ಬಗ್ಗೆ ಹೆಚ್ಡಿಕೆ ತಕರಾರು? ಕಾಂಗ್ರೆಸ್ ನಾಯಕ ರಮೇಶ್ ಬಾಬು ಟೀಕೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕೇಂದ್ರ ಬಿಜೆಪಿ ಸರ್ಕಾರಾದ ಬೃಹತ್ ಕೈಗಾರಿಕಾ ಸಚಿವರಾಗಿರುವ ಹೆಚ್.ಡಿ.ಕುಮಾರಸ್ವಾಮಿರವರು ಕರ್ನಾಟಕ ರಾಜ್ಯ ಸರ್ಕಾರ ತಮಗೆ ಶಿಷ್ಟಾಚಾರಕ್ಕೆ ಅನುಗುಣವಾಗಿ ನಿಗದಿತ ಸಮಯದಲ್ಲಿ ಹೊಸ ಕಾರನ್ನು ನೀಡಲಿಲ್ಲ ಎಂದು ಆರೋಪಿಸಿರುತ್ತಾರೆ. ಕೇಂದ್ರದಲ್ಲಿ ಸಂಪುಟ ದರ್ಜೆಯ ಸಚಿವ ಸ್ಥಾನ ಪಡೆದು ಆರು ತಿಂಗಳು ಕಳೆದರೂ ಇಲ್ಲಿಯವರೆಗೆ ರಾಜ್ಯದ ಅಭಿವೃದ್ಧಿಗೆ ಇವರು ನೀಡಿರುವ ಕೊಡುಗೆ ಶೂನ್ಯ. ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳಲು ಸಣ್ಣ ಸಣ್ಣ ವಿಷಯಗಳನ್ನು ಸಾರ್ವಜನಿಕವಾಗಿ ಪ್ರಸ್ತಾಪಿಸಿ ಪ್ರಚಾರ ಪಡೆಯಲು ಮುಂದಾಗಿದ್ದಾರೆ ಎಂದು ಕೆಪಿಸಿಸಿ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಟೀಕಿಸಿದ್ದಾರೆ. ರಾಜ್ಯ ಸರ್ಕಾರದ ವತಿಯಿಂದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಅಪೇಕ್ಷೆಯಂತೆ ಹೊಸ ಟೊಯೋಟಾ ಇನ್ನೋವಾ ಹೈಕ್ರಾಸ್ ವಾಹನ ಹಂಚಿಕೆ ಆಗಿದೆ. ಮಂಡ್ಯ ಜಿಲ್ಲಾಧಿಕಾರಿಗಳು ಹೊಸ ಕಾರನ್ನು ಪಡೆಯಲು ಕೇಂದ್ರ ಸಚಿವರನ್ನು ಕೋರಿದ್ದು, ಧನುರ್ಮಾಸದ ಕಾರಣ ನೀಡಿ ಸಂಕ್ರಾಂತಿ ನಂತರ ಹೊಸ ಕಾರು ಪಡೆಯುವುದಾಗಿ ತಿಳಿಸಿರುತ್ತಾರೆ. ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ 04-11-2024 ರಲ...
ಚನ್ನಪಟ್ಟಣ ರಣಾಂಗಣ; ಹೆಚ್‌ಡಿಕೆ ಪೂಜೆಯ ವೇಳೆ ಅಚ್ಚರಿಯ ಸನ್ನಿವೇಶ; ನಿಖಿಲ್ ಗೆಲುವಿನ ಶುಭ ಸೂಚನೆ ಎಂದ ಜೆಡಿಎಸ್ ನಾಯಕರು

ಚನ್ನಪಟ್ಟಣ ರಣಾಂಗಣ; ಹೆಚ್‌ಡಿಕೆ ಪೂಜೆಯ ವೇಳೆ ಅಚ್ಚರಿಯ ಸನ್ನಿವೇಶ; ನಿಖಿಲ್ ಗೆಲುವಿನ ಶುಭ ಸೂಚನೆ ಎಂದ ಜೆಡಿಎಸ್ ನಾಯಕರು

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಹಾಸನ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯು ರಾಜಕೀಯ ಪ್ರತಿಷ್ಠೆಯ ಕಣ ಮಾತ್ರವಲ್ಲ, ನಿಖಿಲ್ ಕುಮಾರಸ್ವಾಮಿಯ ರಾಜಕೀಯ ಭವಿಷ್ಯದ ನಿರ್ಣಯವೂ ಹೌದು. ಹಾಗಾಗಿ ಎನ್‌ಡಿಎ ಮಿತ್ರ ಪಕ್ಷಗಳು ಈ ಚುನಾವಣೆಯಲ್ಲಿ ಗೆಲ್ಲಲು ರಣತಂತ್ರ ರೂಪಿಸುತ್ತಿವೆ. ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ಸಿ.ಪಿ. ಯೋಗೇಶ್ವರ್ ನಡುವೆ ನೇರ ಹಣಾಹಣಿ ಎರ್ಪಟ್ಟಿದ್ದು ಕದನ ಕೌತುಕ ಸೃಷ್ಟಿಸಿದೆ. ಈ ನಡುವೆ ಎಚ್.ಡಿ.ಕುಮಾರಸ್ವಾಮಿ ಕುಟುಂಬ ತಮ್ಮ ಪುತ್ರನ ಗೆಲುವಿಗಾಗಿ ಟೆಂಪಲ್ ರನ್ ಕೈಗೊಂಡಿದ್ದು, ಪೂಜೆಯ ವೇಳೆ ಅಚ್ಚರಿಯ ಪ್ರಸಂಗವೊಂದು ನಡೆದಿದೆ. ದೇವರ ವಿಗ್ರಹದ ಬಲಗಡೆಯಿಂದ ಹೂವು ಬಿದ್ದಿದ್ದು, ಈ ಬಗ್ಗೆ ಬಗೆಬಗೆಯ ಚರ್ಚೆ ಶುರುವಾಗಿದೆ. ಕುಮಾರಸ್ವಾಮಿಯವರು ಭಾನುವಾರ ಪತ್ನಿ ಅನಿತಾ ಹಾಗೂ ಸೊಸೆ, ಮೊಮ್ಮಗು ಜೊತೆಗೆ ಹಾಸನಾಂಬೆ ಜಾತ್ರೆಯಲ್ಲಿ ಭಾಗವಹಿಸಿದರು. ಬಳಿಕ ಸಿದ್ದೇಶ್ವರ ಸ್ವಾಮಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಪೂಜೆ ನೆರವೇರಿತ್ತಿರುವಾಗಲೇ ವಿಗ್ರಹದ ಬಲಗಡೆಯಿಂದ ಹೂ ಬಿದ್ದಿದೆ. ದೇವರ ಮೇಲಿಂದ ಹೂವು ಬಿದ್ದಾಗ ಪತ್ನಿ ಅನಿತಾ ಅವರು ಪುಳಕಿತರಾಗಿ ಪ್ರತ...
ಕೃಷ್ಣ ಬೈರೇಗೌಡ ಅವರು ಅಸಹಾಯಕ ಸಚಿವ? ಏನಿದು ಟ್ವೀಟಾಸ್ತ್ರ?

ಕೃಷ್ಣ ಬೈರೇಗೌಡ ಅವರು ಅಸಹಾಯಕ ಸಚಿವ? ಏನಿದು ಟ್ವೀಟಾಸ್ತ್ರ?

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ದದ ಡಿನೋಟಿಫಿಕೇಷನ್ ಆರೋಪ ಮಾಡಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ ಬಗ್ಗೆ ಜಾತ್ಯತೀತ ಜನತಾ ದಳ ಗರಂ ಆಗಿದೆ. ಯಾರನ್ನೋ ಮೆಚ್ಚಿಸಲು ಪ್ರೆಸ್ ಮೀಟ್ ಮಾಡಿದ್ದಾರೆ ಎಂದು ಸಚಿವ ಕೃಷ್ಣ ಬೈರೇಗೌಡ ವಿರುದ್ಧ ಜೆಡಿಎಸ್ ಪಕ್ಷ ಟೀಕಾಸ್ತ್ರ ಪ್ರಯೋಗಿಸಿದೆ. ಈ ಕುರಿತಂತೆ ಟ್ವೀಟ್ ಮಾಡಿರುವ ಜೆಡಿಎಸ್, ಸಚಿವ ಕೃಷ್ಣ ಬೈರೇಗೌಡ ಅವರ ಅಸಹಾಯಕತೆಗೆ ಮರುಕವಿದೆ ಎಂದು ಟೀಕಿಸಿದೆ. ಸಚಿವ ಕೃಷ್ಣ ಬೈರೇಗೌಡ ಅವರ ಅಸಮರ್ಥತೆಯಿಂದ ರಾಜ್ಯದಲ್ಲಿ ಕಂದಾಯ ಇಲಾಖೆ ಹಳ್ಳ ಹಿಡಿದಿದೆ. ಸಬ್ ರಿಜಿಸ್ಟ್ರಾರ್ ಕಚೇರಿಗಳು ಭ್ರಷ್ಟಾಚಾರದ ಕೊಂಪೆಯಾಗಿದ್ದು, ಲಂಚವಿಲ್ಲದೇ ಅಲ್ಲಿ ಯಾವುದೇ ಕಡತಗಳು ಮೇಲೇಳುವುದಿಲ್ಲ ಎಂದು ಆರೋಪಿಸಿರುವ ಜೆಡಿಎಸ್, ಯಾರನ್ನೋ ಮೆಚ್ಚಿಸಲು ಪ್ರೆಸ್ ಮೀಟ್ ಮಾಡುವುದನ್ನು ಬಿಟ್ಟು, ಕಂದಾಯ ಇಲಾಖೆಯಲ್ಲಿನ ಭ್ರಷ್ಟಾಚಾರಕ್ಕೆ ಮೊದಲು ಕಡಿವಾಣ ಹಾಕಿ ಎಂದು ಎದಿರೇಟು ನೀಡಿದೆ. ಗುಂಡಿ ಮುಚ್ಚಿ ಎಂದು ಅಸಹಾಯಕರಾಗಿ ಟ್ವೀಟ್ ಮಾಡಿದ್ರಲ್ಲ, ಆ ರಸ್ತೆ ಗುಂಡಿ ಮುಚ್ಚಿದ್ರಾ..? ಮೊದಲು ಮತಹಾಕಿದ ನಿಮ್ಮ ಕ್ಷೇತ್ರದ ಜನರ ಸಮಸ್ಯೆಗಳ ಬಗ್ಗೆ ಗಮನಹರಿಸಿ ಎಂದು ಸಚ...