Wednesday, June 25

Tag: ಬೆಳಗಾವಿ ಸುವರ್ಣ ವಿಧಾನಸೌಧ

ಸಿ.ಟಿ.ರವಿಗೆ ಬೆದರಿಕೆ ಪತ್ರ; ಬೆದರಿಸುತ್ತಿರುವವರು ಕಾಂಗ್ರೆಸ್ ಪಕ್ಷದ ಭಾಗವೇ ಆಗಿದ್ದಾರೆ ಎಂದ ಬಿಜೆಪಿ ಸಾರಥಿ

ಸಿ.ಟಿ.ರವಿಗೆ ಬೆದರಿಕೆ ಪತ್ರ; ಬೆದರಿಸುತ್ತಿರುವವರು ಕಾಂಗ್ರೆಸ್ ಪಕ್ಷದ ಭಾಗವೇ ಆಗಿದ್ದಾರೆ ಎಂದ ಬಿಜೆಪಿ ಸಾರಥಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಪ್ರತಿಪಕ್ಷ ಶಾಸಕರಿಗೆ ಬೆದರಿಕೆಗಳು ಎದುರರಾಗುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಳವಳ ವ್ಯಕ್ತಪಡಿಸಿದ್ದಾರೆ. ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರಿಗೆ ಬೆದರಿಕೆ ಪತ್ರ ರವಾನೆಯಾಗಿರುವ ಕುರಿತಂತೆ ಪ್ರತಿಕ್ರಿಯಿಸಿರುವ ವಿಜಯೇಂದ್ರ, ಬಿಜೆಪಿ ಶಾಸಕರಿಗೆ ಆತಂಕವಾಗಿ ಕಾಡುತ್ತಿರುವವರು ಕಾಂಗ್ರೆಸ್ ಪಕ್ಷದ ಭಾಗವೇ ಆಗಿದ್ದಾರೆ ಎಂದು ವಿಶ್ಲೇಷಿಸಿದ್ದಾರೆ. ಸಿ.ಟಿ.ರವಿ ಅವರಿಗೆ ರವಾನೆಯಾಗಿರುವ ಬೆದರಿಕೆ ಪತ್ರದ ಪ್ರತಿಯನ್ನು ಸಾಮಾಜಿಕ ಜಾಲತಾಣ 'X;ನಲ್ಲಿ ಟ್ಯಾಗ್ ಮಾಡಿ ಪೋಸ್ಟ್ ಹಾಕಿರುವ ಬಿ.ವೈ.ವಿಜಯೇಂದ್ರ, ಬೆಳಗಾವಿಯ ಸುವರ್ಣ ಸೌಧದಲ್ಲಿ ನಮ್ಮ ಪಕ್ಷದ ಪ್ರಮುಖರಾದ ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ ಅವರ ಮೇಲೆ ಪ್ರಜಾಪ್ರಭುತ್ವವನ್ನು ನಾಚಿಸುವ ರೀತಿಯಲ್ಲಿ ದೌರ್ಜನ್ಯ ಹಾಗೂ ಹಲ್ಲೆಗೆ ಯತ್ನ ನಡೆಯಿತು. ಅದರ ನಂತರವೂ ಅವರ ವಿರುದ್ಧ ನಿರಂತರ ಬೆದರಿಕೆ ಒಡ್ಡಲಾಗುತ್ತಿದೆ. ಅದರ ಮುಂದುವರಿದ ಭಾಗವಾಗಿ ನಿನ್ನೆ ಅವರಿಗೆ ಬೆದರಿಕೆ ಪತ್ರ ರವಾನೆಯಾಗಿರುವುದು ಅತ್ಯಂತ ಆತಂಕಕಾರಿ ವಿಷಯವಾಗಿದೆ ಎಂದಿದ್ದಾರೆ. ಸಿ.ಟಿ.ರವಿ ಅವರನ್ನು ಗುರ...