Wednesday, June 25

Tag: ರಾಮಲಿಂಗಾ ರೆಡ್ಡಿ

ಸಿಎಂ ಸ್ಥಾನಕ್ಕೆ ಅರ್ಹತೆ ಇದ್ದರೂ ಆಸೆ ಇಲ್ಲ: ರಾಮಲಿಂಗಾರೆಡ್ಡಿ

ಸಿಎಂ ಸ್ಥಾನಕ್ಕೆ ಅರ್ಹತೆ ಇದ್ದರೂ ಆಸೆ ಇಲ್ಲ: ರಾಮಲಿಂಗಾರೆಡ್ಡಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಕಾಂಗ್ರೆಸ್ ಪಕ್ಷದಲ್ಲಿ ನನ್ನ ಅನುಭವ, ಸೇವೆ ಹಾಗೂ ಹಿರಿತನದಿಂದ ಮುಖ್ಯಮಂತ್ರಿ ಸ್ಥಾನಕ್ಕೆ ಎಲ್ಲಾ ರೀತಿಯ ಅರ್ಹತೆ ನನಗಿದೆ. ಆದರೆ ಆ ಸ್ಥಾನದ ಆಕಾಂಕ್ಷಿ ನಾನಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ನಮ್ಮ ಪಕ್ಷದಲ್ಲಿ ಹೈಕಮಾಂಡ್ ಪ್ರಬಲವಾಗಿದೆ. ಯಾವುದೇ ಸಮಸ್ಯೆಗಳನ್ನೂ ಸಮರ್ಥವಾಗಿ ನಿಭಾಯಿಸಲಿದೆ. ಪ್ರತಿಯೊಬ್ಬ ರಾಜಕಾರಣಿಗೂ ರಾಜಕೀಯದಲ್ಲಿ ಮೇಲ್ಮಟ್ಟದ ಹುದ್ದೆಗಳನ್ನು ಅಲಂಕರಿಸಬೇಕೆಂಬ ಆಕಾಂಕ್ಷೆ ಇರುತ್ತದೆ ಅದು ಸಹಜ. ಆದರೆ ಅದಕ್ಕೆ ಸಮಯ ಕೂಡಿಬರಬೇಕಿದೆ. ಸದ್ಯಕ್ಕೆ ರಾಜ್ಯದಲ್ಲಿ ಸಿಎಂ ಸ್ಥಾನವೂ ಖಾಲಿ ಇಲ್ಲ, ಕೆಪಿಸಿಸಿ ಅಧ್ಯಕ್ಷ ಸ್ಥಾನವೂ ಖಾಲಿ ಇಲ್ಲ. ಹಾಗಾಗಿ ಆ ಸ್ಥಾನಗಳ ಬಗ್ಗೆ ಅಪೇಕ್ಷೆ ವ್ಯಕ್ತಪಡಿಸುವುದು ಸರಿಯಲ್ಲ. ನಮ್ಮ ಹೈಕಮಾಂಡ್ ಈ ವಿಷಯಗಳಲ್ಲಿ ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳಲಿದೆ ಎಂದರು. ನಾನಂತೂ ಯಾವುದೇ ಹುದ್ದೆಯ ಆಕಾಂಕ್ಷಿ ಅಲ್ಲ. ಪಕ್ಷದ ವಿಚಾರದಲ್ಲಿ ಏನೇ ಇದ್ದರೂ ನಾಲ್ಕು ಗೋಡೆಗಳ ಮಧ್ಯೆ ಹೇಳಬೇಕು. ಏನಾದರೂ ಇದ್ದರೆ ಸುರ್ಜೆವಾಲಾ ಅವರಿಗೆ ಹೇಳಲಿ ಎಂದು ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು. ಬಿಜೆಪಿ ಪಕ್ಷದಲ್ಲಿ ರಾಜ್ಯಾಧ್ಯಕ್ಷ ಸ್ಥಾನದ ...
ರಾಮಲಿಂಗಾ ರೆಡ್ಡಿ ಅವರು ಇನ್ನು ಕನಿಷ್ಠ 10 ವರ್ಷಗಳ ಅವಧಿಗೆ ಮುಜರಾಯಿ ಸಚಿವರಾಗಿರಬೇಕು ಅರ್ಚಕರ ಸಮಾವೇಶದಲ್ಲಿ ಮೂಡಿಬಂದ ಕೂಗು‌

ರಾಮಲಿಂಗಾ ರೆಡ್ಡಿ ಅವರು ಇನ್ನು ಕನಿಷ್ಠ 10 ವರ್ಷಗಳ ಅವಧಿಗೆ ಮುಜರಾಯಿ ಸಚಿವರಾಗಿರಬೇಕು ಅರ್ಚಕರ ಸಮಾವೇಶದಲ್ಲಿ ಮೂಡಿಬಂದ ಕೂಗು‌

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಡೆದ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ, ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟದ ಬೃಹತ್ ಸಮಾವೇಶ ಗಮನಸೆಳೆಯಿತು. ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರ ಕೊಡುಗೆಗಳ ಬಗ್ಗೆ ಅರ್ಚಕ ಸಮೂಹ ಮೆಚ್ಚುಗೆ ವ್ಯಕ್ತಪಡಿಸಿತು. ಈ ಒಕ್ಕೂಟದ ನೇತೃತ್ವದಲ್ಲಿ ಕರ್ನಾಟಕ ರಾಜ್ಯದ ಎ, ಬಿ ಮತ್ತು ಸಿ ವರ್ಗದ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರ, ಆಗಮಿಕರ ಹಾಗೂ ಉಪಾಧಿವಂತರುಗಳ ಕಷ್ಟ ಕಾರ್ಪಣ್ಯಗಳಿಗಾಗಿ ಅವರ ದುಃಖ ದುಮ್ಮಾನಗಳಿಗೆ ಸ್ಪಂದಿಸಿ ಸದಾ ಅವರ ಏಳಿಗೆಗಾಗಿ ಸುಮಾರು 50 ವರ್ಷಗಳಿಂದ ಸರ್ಕಾರದೊಡನೆ ಹೋರಾಡುತ್ತಿರುವ ಹಿಂದು ಧಾರ್ಮಿಕ ಸರ್ವ ಸಮಾಜದ ದೇವಾಲಯಗಳ ನೌಕರರನ್ನು ಒಳಗೊಂಡಿರುವ ಸಂಸ್ಥೆಯಾಗಿರುತ್ತದೆ. ಸೋಮವಾರ ನಡೆದ ಸಮಾವೇಶದಲ್ಲಿ ರಾಜ್ಯದ ಹಲವು ಜಿಲ್ಲೆಗಳಿಂದ ಆಗಮಿಸಿದ್ದ ಅರ್ಚಕರುಗಳು ಕಿಕ್ಕಿರಿದು ನೆರೆದಿದ್ದರು. ಸಮಾವೇಶದಲ್ಲಿ ಮಾತನಾಡಿದ ಧಾರ್ಮಿಕ ಮುಖಂಡರು, ಧಾರ್ಮಿಕ, ಸಾಂಸ್ಕೃತಿಕ ಸಾಮಾಜಿಕ ನೆಲೆಯಲ್ಲಿ ನಮ್ಮ ಮುಜರಾಯಿ ಇಲಾಖೆಯಲ್ಲಿ ಹಿಂದೆಂದೂ ಕಾಣದ ಅಭಿವೃದ್ಧಿಯ ಪರ್ವ ಪ್ರಾರಂಭವಾಗಿರುವುದು ಶುಭ ಸಂಕೇತ ಎಂದು ಗುಣಗಾನ ಮಾಡಿ...