Wednesday, June 25

Tag: Anekal Alliance University – Womens Day – Bharathi Vishnuvardhan- Dr.Manjunath

‘ನಮ್ಮತನ ಮಾರ್ಚ್ 8ಕ್ಕೆ ಮಾತ್ರ ಸೀಮಿತವಾಗಿರಬಾರದು’: ಭಾರತಿ ವಿಷ್ಣು ವರ್ಧನ್

‘ನಮ್ಮತನ ಮಾರ್ಚ್ 8ಕ್ಕೆ ಮಾತ್ರ ಸೀಮಿತವಾಗಿರಬಾರದು’: ಭಾರತಿ ವಿಷ್ಣು ವರ್ಧನ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಆನೇಕಲ್: ಮಹಿಳೆಯರು ವಿಶ್ವದಾದ್ಯಂತ ಅನೇಕ ರಂಗಗಳಲ್ಲಿ ಯಶಸ್ವಿಯಾಗಿ ತಮ್ಮ ಛಾಪು ಮೂಡಿಸಿದ್ದು ನಮ್ಮತನವನ್ನು ಮಾರ್ಚ್ 8ಕ್ಕೆ ಮಾತ್ರ ಸೀಮಿತಗೊಳಿಸ ಬಾರದು. ಸಾಗರ ತಳ, ವಿಶಾಲ ಭೂಮಿ, ಆಗಸ ದಾಟಿ ಮುನ್ನಡೆಯಬೇಕೆಂದು ಪಂಚಭಾಷಾ ತಾರೆ ಪದ್ಮಶ್ರೀ ಡಾ. ಭಾರತಿ ವಿಷ್ಣು ವರ್ಧನ್ ಕರೆ ನೀಡಿದರು. ಆನೇಕಲ್ ಸಮೀಪ ಅಲಯಂನ್ಸ್ ವಿಶ್ವವಿದ್ಯಾಲಯ ಏರ್ಪಡಿಸಿದ್ದ, ವಿಶ್ವ ಮಹಿಳಾ ಮಹಿಳಾ ದಿನಾಚರಣೆಯ ಅಂಗವಾಗಿ ಸಮಾಜದ ವಿವಿಧ ಸ್ಥರಗಳಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಸಾಧಕಿ ಮಹಿಳೆಯರಿಗೆ ಮಹಿಳಾ ಸ್ಪಂದನ ಅವಾರ್ಡ್ ವಿತರಿಸಿ ಮಾತನಾಡಿದ ಅವರು, ತಾಯಿಯಾಗಿ, ಸಹೋದರಿಯಾಗಿ, ಮಗಳಾಗಿ ವಿವಿಧ ಹಂತಗಳಲ್ಲಿ ಹೆಣ್ಣು ಪರಿಪೂರ್ಣತೆಯಿಂದ ತನ್ನ ಪಾತ್ರವನ್ನು ಯಶಸ್ವಿಯಾಗಿ ನಿರ್ವಹಿಸುತ್ತಾಳೆ. ತ್ಯಾಗಮಯಿಯಾದ ಆಕೆ ತನ್ನ ಕುಟುಂಬ ದೇಶ ಕ್ಕಾಗಿ ಕೊಡುಗೆಯನ್ನೂ ನೀಡಿ ಇತರರ ಗೆಲುವನ್ನು ತನ್ನದೆಂದು ಪರಿಭಾವಿಸಿ ತೃಪ್ತಿ ಪಡುತ್ತಾಳೆ. ಮಹಿಳೆಯರು ಇದ್ದೆಡೆ ಗೌರವ ಶಕ್ತಿ ಇದ್ದು ಪ್ರಭಾವಿತಳಾಗಿ ಕಾಣುತ್ತಾಳೆ ಎಂದರು. ಶಿಕ್ಷಣ, ಅರೋಗ್ಯ, ಉದ್ಯೋಗ, ಕೃಷಿ, ಉದ್ಯಮ ಸೇರುದಂತೆ ಹಲವು ವಿಭಾಗದ 30ಕ್ಕೂ ಹೆಚ್ಚು ಸಾಧಕರನ್ನು ಸನ್ಮಾನಿಸ...