Sunday, June 22

Tag: Basanagouda Patil Yatnal

ವಕ್ಫ್ ತಿದ್ದುಪಡಿ ಮಸೂದೆ: ತಮ್ಮ ಹೋರಾಟ ಬೆಂಬಲಿಸಿದವರಿಗೆ ಧನ್ಯವಾದ ಸಮರ್ಪಿಸಿದ ಯತ್ನಾಳ್

ವಕ್ಫ್ ತಿದ್ದುಪಡಿ ಮಸೂದೆ: ತಮ್ಮ ಹೋರಾಟ ಬೆಂಬಲಿಸಿದವರಿಗೆ ಧನ್ಯವಾದ ಸಮರ್ಪಿಸಿದ ಯತ್ನಾಳ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ವಕ್ಫ್ ತಿದ್ದುಪಡಿ ಮಸೂದೆಯು ಸಂಸತ್ತಿನಲ್ಲಿ ಅಂಗೀಕರವಾಗಿರುವ ಬಗ್ಗೆ ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ್ ಅವರ ಪ್ರತಿಕ್ರಿಯೆ ಗಮನಸೆಳೆದಿದ್ದಾರೆ. ಅತ್ತ, ಬಿಜೆಪಿ ನಾಯಕರು ಹರ್ಷ ವ್ಯಕ್ತಪಡಿಸಿದರೆ, ಇತ್ತ, ವಕ್ಫ್ ವಿರುದ್ದದ ಹೋರಾಟ ಬೆಂಬಲಿಸಿದವರಿಗೆ ಯತ್ನಾಳ್ ಧನ್ಯವಾದ ಸಮರ್ಪಿಸಿದ್ದಾರೆ. ಲೋಕಸಭೆ ಮತ್ತು ರಾಜ್ಯಸಭೆಗಳೆರಡರಲ್ಲೂ ಅಂಗೀಕಾರಗೊಂಡಿರುವ ವಕ್ಫ್ ತಿದ್ದುಪಡಿ ಮಸೂದೆಯು ವಕ್ಫ್ ಬೋರ್ಡ್ ನ ನಿರಂಕುಶ ನಡೆಗಳಿಗೆ ಕಡಿವಾಣ ಹಾಕಲಿದೆ. ವಕ್ಫ್ ಕಾಯ್ದೆಯ ತಿದ್ದುಪಡಿಗೆ ಗೆ ಜಂಟಿ ಸಂಸತ್ ಸಮಿತಿ ರಚಿಸಿ ತಿದ್ದುಪಡಿಗೆ ಸೂಚಿಸಿದ ಕೇಂದ್ರ ಸರ್ಕಾರಕ್ಕೂ, ಜೆ.ಪಿ.ಸಿ ಅಧ್ಯಕ್ಷರಿಗೂ, ಸದಸ್ಯರಿಗೂ ಸೇರಿದಂತೆ ತಿದ್ದುಪಡಿಗೆ ಕಾರಣೀಭೂತರಾದ ಎಲ್ಲರಿಗೂ ನನ್ನ ಅನಂತ ಧನ್ಯವಾದಗಳು ಎಂದು ಶಾಸಕ ಬಸನಗೌಡ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ. ತಿದ್ದುಪಡಿಯಿಂದ ರೈತರಿಗೆ, ಮಠಗಳಿಗೆ, ದೇವಸ್ಥಾನಗಳಿಗೆ, ಸರ್ಕಾರಿ ಭೂಮಿ ಹಾಗೂ ಜನ ಸಾಮಾನ್ಯರ ಭೂಮಿಯನ್ನು ವಕ್ಫ್ ಎಂದು ಘೋಷಿಸಲು ಸಾಧ್ಯವಿಲ್ಲ ಹಾಗೂ ಜಿಲ್ಲಾಡಳಿತ ಮತ್ತು ನ್ಯಾಯಾಲಯಗಳಷ್ಟೇ ಇದನ್ನು ತೀರ್ಮಾನಿಸಬಹುದು. ನಮ್ಮ ಸಾಮ...
ಯತ್ನಾಳ್‌ ಉಚ್ಛಾಟನೆಯ ಪ್ರತಿಧ್ವನಿ; ಬಿಜೆಪಿ ತೊರೆಯಲು ಪಂಚಮಸಾಲಿ ನಾಯಕರಿಗೆ ಸ್ವಾಮೀಜಿ ಕರೆ

ಯತ್ನಾಳ್‌ ಉಚ್ಛಾಟನೆಯ ಪ್ರತಿಧ್ವನಿ; ಬಿಜೆಪಿ ತೊರೆಯಲು ಪಂಚಮಸಾಲಿ ನಾಯಕರಿಗೆ ಸ್ವಾಮೀಜಿ ಕರೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಧಾರವಾಡ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿರುವ ಹೈಕಮಾಂಡ್ ನಿರ್ಧಾರದ ವಿರುದ್ಧ ಪಂಚಮಸಾಲಿ ಸಮಾಜ ಸಿಡಿದೆದ್ದಿದೆ. ಯತ್ನಾಳ್ ಅವರ ಉಚ್ಚಾಟನೆ ಖಂಡಿಸಿ ಎಲ್ಲಾ ಲಿಂಗಾಯತ ಶಾಸಕರು ಬಿಜೆಪಿ ಬಿಟ್ಟು ಹೊರಬನ್ನಿ ಎಂದು ಕೂಡಲ ಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಕರೆ ನೀಡಿದ್ದಾರೆ. ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಿರುವ ಬಗ್ಗೆ ಧಾರವಾಡದಲ್ಲಿ ಪ್ರತಿಕ್ರಿಯಿಸಿರುವ ಶ್ರೀಗಳು, ಯತ್ನಾಳ್ ಉಚ್ಛಾಟನೆಗೆ ಬಿ.ಎಸ್‌.ಯಡಿಯೂರಪ್ಪ ಮತ್ತವರ ಕುಟುಂಬವೇ ಕಾರಣ ಎಂದು ದೂರಿದರು. ಯತ್ನಾಳ್‌ ಎಂದಿಗೂ ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ. ಕಾಣದ ಕೈಗಳು ಅವರನ್ನು ಉಚ್ಛಾಟನೆ ಮಾಡುವಂತೆ ಮಾಡಿವೆ. ಕುಟುಂಬ ರಾಜಕಾರಣ ಬೇಡ ಎನ್ನುವುದು ತಪ್ಪೇ? ಯತ್ನಾಳ್‌ ಏನೇ ಮಾತನಾಡಿದರೂ ಅವರು ಉತ್ತರ ಕರ್ನಾಟಕ, ಹಿಂದುತ್ವದ ಬಗ್ಗೆಯೇ ಮಾತನಾಡಿದ್ದಾರೆ ಎಂದು ತಮ್ಮ ಸಮೈದಾಯದ ಶಾಸಕನ ಬೆನ್ನಿಗೆ ನಿಂತಿರುವ ಶ್ರೀಗಳು, ಯತ್ನಾಳ್ ಉಚ್ಛಾಟನೆ ಆದೇಶವನ್ನು ಹೈಕಮಾಂಡ್ ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಪಂಚಮಸಾಲಿಗಳು ಬಿಜೆಪಿಯಿಂದ ಹೊರ ಬರಬೇಕು ಎಂದು ಕರೆ ನೀಡಿದರು. ಇದೇ ವ...
ಯತ್ನಾಳ್ ಉಚ್ಚಾಟನೆ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತರಿಗೆ ವಿಜಯೇಂದ್ರ ರವಾನಿಸಿದ ಸಂದೇಶ

ಯತ್ನಾಳ್ ಉಚ್ಚಾಟನೆ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತರಿಗೆ ವಿಜಯೇಂದ್ರ ರವಾನಿಸಿದ ಸಂದೇಶ

Focus, Update, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಿದ ಬೆನ್ನಲ್ಲೇ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೀಡಿರುವ ಪ್ರತಿಕ್ರಿಯೆ ಗಮನಸೆಳೆದಿದೆ. ಪಕ್ಷದ ಕಾರ್ಯಕರ್ತರಿಗೆ ಅವರು ರವಾನಿಸಿರುವ ಸಂದೇಶ ಕೂಡಾ ಕುತೂಹಲದ ಕೇಂದ್ರಬಿಂದುವಾಗಿದೆ. ಭಾರತೀಯ ಜನತಾ ಪಾರ್ಟಿ, ಲಕ್ಷಾಂತರ ಕಾರ್ಯಕರ್ತರನ್ನು ಹೊಂದುವ ಮೂಲಕ ವಿಶ್ವದಲ್ಲಿ ಅಗ್ರಮಾನ್ಯತೆ ಪಡೆದಿರುವ ರಾಜಕೀಯ ಪಕ್ಷ, ಸಂಘ ಸಂಸ್ಕಾರ ಪಡೆದಿರುವ ಸಮರ್ಪಣಾ ಮನೋಭಾವದ ಕಾರ್ಯಕರ್ತರ ಬೆವರ ಪರಿಶ್ರಮದಿಂದ ಸಮೃದ್ಧ ವೃಕ್ಷದಂತೆ ಬೆಳೆದಿರುವ ಪಕ್ಷದಲ್ಲಿ ಶಿಸ್ತು-ತ್ಯಾಗಕ್ಕೆ ಮೊದಲ ಆದ್ಯತೆ ಎಂದು ವಿಜಯೇಂದ್ರ ಪ್ರತಿಪಾದಿಸಿದ್ದಾರೆ. ಪಕ್ಷದ ಹಿರಿಯರು ಹಾಗೂ ವರಿಷ್ಠರು ಈ ವಿಷಯದಲ್ಲಿ ಎಂದಿಗೂ ರಾಜಿ ಮಾಡಿಕೊಂಡಿರುವ ಉದಾಹರಣೆ ನಮ್ಮ ಮುಂದಿಲ್ಲ, ಸದ್ಯ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧದ ಶಿಸ್ತುಕ್ರಮವು ವರಿಷ್ಠರು ಸುದೀರ್ಘ ಅವಧಿಯಿಂದ ಸ್ಥಿತಿ-ಗತಿಗಳನ್ನು ಅವಲೋಕಿಸಿ ಅನಿವಾರ್ಯವಾಗಿ ತೆಗೆದುಕೊಂಡಿರುವ ಕ್ರಮವಾಗಿದೆ. ಪಕ್ಷದ ಬೆಳವಣಿಗೆಯಲ್ಲಿನ ಕಹಿ ಘಟನೆಗಳನ್ನು ಉಲ್ಲೇಖಿಸಿ ಪಕ್ಷದ ವರಿಷ್ಠರಿಗೆ ನಾನು ಎಂದೂ ದೂರುಗಳನ...
BJPಯಿಂದ ಫೈರ್ ಬ್ರಾಂಡ್ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ

BJPಯಿಂದ ಫೈರ್ ಬ್ರಾಂಡ್ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ಬಿಜೆಪಿಯ ಫೈರ್ ಬ್ರಾಂಡ್ ನಾಯಕ ಎಂದೇ ಗುರುತಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಹೈಕಮಾಂಡ್ ಉಚ್ಛಾಟನೆ ಮಾಡಿದೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಅವರ ಪುತ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರುದ್ಧ ಬಹಿರಂಗವಾಗಿಯೇ ವಾಗ್ದಾಳಿ ನಡೆಸುತ್ತಿದ್ದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​ ವಿರುದ್ಧ ಹೈಕಮಾಂಡ್ ಕೈಗೊಂಡಿರುವ ಈ ಕ್ರಮ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ಬಸನಗೌಡ ಪಟೀಲ್ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಬಿಜೆಪಿಯಿಂದ ಉಚ್ಚಾಟಿಸಲಾಗಿದೆ ಎಂದು ಪಕ್ಷದ ಶಿಸ್ತು ಸಮಿತಿ ಹೇಳಿದೆ....
ಬಿಜೆಪಿಗೆ ಅಪಾಯಕಾರಿ ಆಗಿದ್ದಕ್ಕೆ ಪ್ರಿಯಾಂಕ್ ಖರ್ಗೆ ಟಾರ್ಗೆಟ್: ಮಂಜುನಾಥ ಭಂಡಾರಿ ಎದಿರೇಟು

ಬಿಜೆಪಿಗೆ ಅಪಾಯಕಾರಿ ಆಗಿದ್ದಕ್ಕೆ ಪ್ರಿಯಾಂಕ್ ಖರ್ಗೆ ಟಾರ್ಗೆಟ್: ಮಂಜುನಾಥ ಭಂಡಾರಿ ಎದಿರೇಟು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬಿಜೆಪಿ ಸರ್ಕಾರದ ಹಗರಣಗಳನ್ನು ಬಯಲಿಗೆಳೆಯುವ ಮೂಲಕ ಅವರಿಗೆ ಅತ್ಯಂತ ಅಪಾಯಕಾರಿಯಾಗಿ ಪರಿಣಮಿಸಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಮಣಿಸುವ ಸಲುವಾಗಿ ಬಿಜೆಪಿ ಪಕ್ಷವು ಅವರ ಮೇಲೆ ಸಲ್ಲದ ಆರೋಪ ಹೊರಿಸುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಆರೋಪಿಸಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿಗರಿಗೆ ಭಾರಿ ಥ್ರೆಟ್‌ ಆಗಿ ಪರಿಣಮಿಸಿದ್ದಾರೆ. ಏಕೆಂದರೆ ಬಿಜೆಪಿಗರ ಎಲ್ಲ ಭ್ರಷ್ಟಾಚಾರ, ಅನಾಚಾರಗಳನ್ನು ಅವರು ಬಯಲಿಗೆಳೆದಿದ್ದಾರೆ. ಮಾತ್ರವಲ್ಲ ಭ್ರಷ್ಟಾಚಾರ ಪ್ರಕರಣಗಳನ್ನು ತಾರ್ಕಿಕ ಅಂತ್ಯ ಕಾಣಿಸಲು ಪ್ರಿಯಾಂಕ್ ಖರ್ಗೆ ಅವರು ಹೋರಾಟ ಮಾಡಿದ್ದಾರೆ. ಪಿಎಸ್ಐ ಹಗರಣ, 40% ಕಮೀಷನ್‌, ಬಿಟ್ ಕಾಯಿನ್ ಹಗರಣ, ಕೋವಿಡ್ ಹಗರಣ ಹೀಗೆ ಎಲ್ಲವನ್ನೂ ಬಯಲಿಗೆಳೆದು, ಅವುಗಳನ್ನು ತನಿಖೆಯಾಗುವಂತೆ ಮಾಡಿದರು. ಮಾತ್ರವಲ್ಲ ಶಿಕ್ಷೆಯಾಗುವುದಕ್ಕೆ ಕಾರಣರಾಗಿದ್ದಾರೆ. ಅವರು ಕೇವಲ ಗಾಳಿಯಲ್ಲಿ ಗುಂಡು ಹಾರಿಸಿಲ್ಲ. ಪ್ರತಿ ಭ್ರಷ್ಟಾಚಾರವನ್ನೂ ಅಂಕಿ ಅಂಶ, ದಾಖಲೆ ಸಹಿತ ಬೀದಿಗೆ ತಂದರು. ಮತ್ತು ಪ್ರಬಲವಾಗಿ ಹೋರಾಟ ಮಾಡಿದವರು. ಹಾಗಾಗಿ ಅನಗತ್ಯವಾಗಿ ಈಗ ಸಚಿನ್‌ ಆತ್ಮಹತ್ಯೆ...