Wednesday, June 25

Tag: Basavaraj Horatti

ರಾಜೀನಾಮೆ ನಿರ್ಧಾರದಿಂದ ಹಿಂದಕ್ಕೆ ಸರಿದ ಸಭಾಪತಿ ಹೊರಟ್ಟಿ

ರಾಜೀನಾಮೆ ನಿರ್ಧಾರದಿಂದ ಹಿಂದಕ್ಕೆ ಸರಿದ ಸಭಾಪತಿ ಹೊರಟ್ಟಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಹುಬ್ಬಳ್ಳಿ: ರಾಜೀನಾಮೆ ನಿರ್ಧಾರದಿಂದ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹಿಂದಕ್ಕೆ ಸರಿದಿದ್ದಾರೆ. ಪ್ರಸ್ತುತ ದಿನಗಳಲ್ಲಿ ಸದನದಲ್ಲಿ ಸಂಭಾಳಿಸಲು ಸಾಧ್ಯವಿಲ್ಲ ಎಂದು ಕೆಲವು ದಿನಗಳ ಹಿಂದೆ ಅಸಮಾಧಾನ ಹೊರಹಾಕಿದ್ದ​ ಮೇಲ್ಮನೆ ಸಭಾಪತಿ ಬಸವರಾಜ ಹೊರಟ್ಟಿ ರಾಜೀನಾಮೆಯ ಇಂಗಿತ ವ್ಯಕ್ತಪಡಿಸಿದ್ದರು. ಇದೀಗ ಆ ನಿರ್ಧಾರದಿಂದ ಹಿಂದೆ ಸರಿದಿರುವುದಾಗಿ ಹೊರಟ್ಟಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿರುವುದಾಗಿ ತಿಳಿಸಿದರು. ತಮ್ಮ ರಾಜೀನಾಮೆ ಸುದ್ದಿ ಹರಿದಾಡಿದ ಬಳಿಕ ರಾಜ್ಯಪಾಲರು, ಸಚಿವರು ಹಾಗೂ ಸಾಹಿತಿಗಳು ಮಾತನಾಡಿದ್ದಾರೆ. ಮಾರ್ಚ್ 27ರಂದು ಕುಳಿತು ಮಾತನಾಡೋಣ ಎಂದಿದ್ದರು ಹಾಗಾಗಿ ರಾಜೀನಾಮೆ ನಿರ್ಧಾರವನ್ನು ಕೈ ಬಿಟ್ಟಿದ್ದೇನೆ ಎಂದು ಹೊರಟ್ಟಿ ತಿಳಿಸಿದರು....
ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಲು ಹೊರಟ್ಟಿ ಇಂಗಿತ?

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಲು ಹೊರಟ್ಟಿ ಇಂಗಿತ?

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಲ್ಲಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ ಬೆಳಿಗ್ಗೆಯಷ್ಟೇ ಹುದ್ದೆ ತೊರೆಯುವ ಬಗ್ಗೆ ಹೊರಟ್ಟಿ ಮಾತನಾಡಿದ್ದರು. ಆ ಸುದ್ದಿಗೋಷ್ಠಿಯ ಬೆನ್ನಲ್ಲೇ ಅವರು ರಾಜೀನಾಮೆ ಸಲ್ಲಿಸಿದ್ದಾರೆ ಎಂಬ ಸುದ್ದಿ ಹರಿದಾಡಿದೆ‌. ಉಪ ಸಭಾಪತಿಗೆ ಪತ್ರ? ಈ ನಡುವೆ ವಿಧಾನಪರಿಷತ್ ಉಪಸಭಾಪತಿ ಪ್ರಾಣೇಶ್​ ಅವರಿಗೆ ಬಸವರಾಜ ಹೊರಟ್ಟಿಯವರು ಪತ್ರ ಬರೆದಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಭಾಪತಿ ಹೊರಟ್ಟಿ, ತಾವು ರಾಜೀನಾಮೆ ಪತ್ರ ಸಿದ್ದಪಡಿಸಿದ್ದೇನೆಯೇ ಹೊರತು ಅಧಿಕೃತವಾಗಿ ನೀಡಿಲ್ಲ ಎಂದಿದ್ದಾರೆ. ತಮ್ಮ ಕಚೇರಿ ಸಿಬ್ಬಂದಿಯಿಂದ ಸಹಿ ಇಲ್ಲದ ಪತ್ರ ಸೋರಿಕೆಯಾಗಿದೆ ಎಂದವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ....
‘ನನಗೆ ಮೊದಲು ಟಿಕೆಟ್ ಕೊಟ್ಟಿದ್ದು ಕೆ.ಹೆಚ್ ಪಾಟೀಲ್’: ರಾಜಕೀಯ ಗುರುವಿಗೆ ನಮಿಸಿದ ಡಿಕೆಶಿ

‘ನನಗೆ ಮೊದಲು ಟಿಕೆಟ್ ಕೊಟ್ಟಿದ್ದು ಕೆ.ಹೆಚ್ ಪಾಟೀಲ್’: ರಾಜಕೀಯ ಗುರುವಿಗೆ ನಮಿಸಿದ ಡಿಕೆಶಿ

Focus, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ಗದಗ: ಸಹಕಾರಿ ಧುರೀಣ, ಮಾಜಿ ಸಚಿವ ದಿವಂಗತ ಕೆ.ಹೆಚ್. ಪಾಟೀಲ್ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮ ಗದಗದಲ್ಲಿ ಭಾನುವಾರ ನಡೆಯಿತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ಈಶ್ವರ್ ಖಂಡ್ರೆ, ಹೆಚ್.ಕೆ.ಪಾಟೀಲ್ ಸಹಿತ ಅನೇಕ ನಾಯಕರು, ಗಣ್ಯರು ಈ ಸಮಾರಂಭದಲ್ಲಿ ಭಾಗಿಯಾಗಿದ್ದರು. ಸಹಕಾರಿ ಭೀಷ್ಮ ಎಂದೇ ಜನಜನಿತರಾಗಿರುವ ಕೆ.ಹೆಚ್. ಪಾಟೀಲ್ ಅವರ ಜನ್ಮ ಶತಮಾನೋತ್ಸವ ಸಂದರ್ಭದಲ್ಲಿ ಗದಗ್ ಕೋ-ಆಪರೇಟಿವ್ ಕಾಟನ್ ಸೇಲ್ಸ್ ಸೊಸೈಟಿಯ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ತಮ್ಮ ಆದರ್ಶ ನಾಯಕರಾಗಿದ್ದ ಕೆ.ಹೆಚ್.ಪಾಟೀಲ್ ಅವರನ್ನು ಸ್ಮರಿಸಿದ ಡಿ.ಕೆ.ಶಿವಕುಮಾರ್, ಸಹಕಾರ ರಂಗದ ಭೀಷ್ಮ ಕೆ.ಹೆಚ್.ಪಾಟೀಲ್ ಅವರ ಜನಪರ ಕಾಳಜಿಯ ನಿದರ್ಶನಗಳು ನಮ್ಮ ಮುಂದಿವೆ. ಅವರು ಚುನಾವಣೆಯಲ್ಲಿ ಸೋತಾಗ ಕುಗ್ಗದೆ, ಅಧಿಕಾರ ಸಿಕ್ಕಾಗ ಹಿಗ್ಗದೆ ದಕ್ಷತೆಯಿಂದ ಜನಪರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ದೃಢ ನಿರ್ಧಾರಗಳನ್ನು ಕೈಗೊಂಡು, ಸಹಕಾರಿ ರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು ಎಂದರು. ಕೆ.ಹೆಚ್...