
ಕೆ.ಹೆಚ್ ಪಾಟೀಲ್ ಅವರು ಮಹಾ ಮಾನವತಾವಾದಿ: ನಾಯಕರ ಸ್ಮರಣೆ
ಗದಗ: ಸಹಕಾರಿ ಧುರೀಣ, ಮಾಜಿ ಸಚಿವ ದಿವಂಗತ ಕೆ.ಹೆಚ್. ಪಾಟೀಲ್ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮ ಗದಗದಲ್ಲಿ ಭಾನುವಾರ ನಡೆಯಿತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ಈಶ್ವರ್ ಖಂಡ್ರೆ, ಹೆಚ್.ಕೆ.ಪಾಟೀಲ್ ಸಹಿತ ಅನೇಕ ನಾಯಕರು, ಗಣ್ಯರು ಈ ಸಮಾರಂಭದಲ್ಲಿ ಭಾಗಿಯಾಗಿದ್ದರು. ಸಹಕಾರಿ ಭೀಷ್ಮ ಎಂದೇ ಜನಜನಿತರಾಗಿರುವ ಕೆ.ಹೆಚ್. ಪಾಟೀಲ್ ಅವರನ್ನು ನಾಯಕರು ಮಹಾಮಾನವತಾವಾದಿ ಎಂದು ಬಣ್ಣಿಸಿದರು.
ಡಿಸಿಎಂ ಡಿ.ಕೆ. ಶಿವಕುಮಾರ್ ಮಾತನಾಡಿ, ಕೆ.ಹೆಚ್ ಪಾಟೀಲ್ ಅವರು ಮಹಾ ಮಾನವತಾವಾದಿಯಾಗಿದ್ದರು. ಜಾತಿ, ಧರ್ಮದ ತಾರತಮ್ಯವಿಲ್ಲದೆ ಸಹಕಾರಿ ಕ್ಷೇತ್ರದಲ್ಲಿ ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಮುನ್ನಡೆಸಿದವರು ಎಂದು ಸ್ಮರಿಸಿದರು. ಧೀಮಂತ ನಾಯಕ ಕೆ.ಹೆಚ್. ಪಾಟೀಲ್ ಅವರನ್ನು ಸ್ಮರಿಸಲು ನಾವು ಸೇರಿದ್ದೇವೆ. ಪಾಟೀಲರ ಬದುಕು, ಚಿಂತನೆ, ಆದರ್ಶ ಬೇರೆಯವರ ಬದುಕಿಗೆ ದಾರಿ ದೀಪವಾಗಲಿ. ನಾವು ಇತ್ತೀಚೆಗೆ ಮಹಾತ್ಮಾ ಗಾಂಧೀಜಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ನಡೆಸಿದ ಬೆಳಗಾವಿ ಅಧಿವೇಶನಕ್ಕೆ ಶತಮಾನೋತ್ಸವ ಆಚರಣೆ ...