Wednesday, June 25

Tag: BJP-JDS ‘Mysore Chalo’ PADAYATRE condemns MUDA scam

ದೇವೇಗೌಡರ ಕಟುಂಬದ ವಿರುದ್ದ ಮಾಡಿದ್ದ ಆರೋಪವನ್ನು ಹಿಂಪಡೆಯುತ್ತೀರ? BSYಗೆ ರಮೇಶ್ ಬಾಬು ಮಾರ್ಮಿಕ ಪ್ರಶ್ನೆ..!

ದೇವೇಗೌಡರ ಕಟುಂಬದ ವಿರುದ್ದ ಮಾಡಿದ್ದ ಆರೋಪವನ್ನು ಹಿಂಪಡೆಯುತ್ತೀರ? BSYಗೆ ರಮೇಶ್ ಬಾಬು ಮಾರ್ಮಿಕ ಪ್ರಶ್ನೆ..!

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮುಡಾ ಸೈಟ್ ಹಗರಣ ಇದೀಗ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಸಂಘರ್ಷವನ್ನು ಹುಟ್ಟುಹಾಕಿದೆ. ಸಿಎಂ ಸಿದ್ದರಾಮಯ್ಯ ವಿರುದ್ದ ಆರೋಪ ಕೇಳಿದ ತಕ್ಷಣ ಅವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿ ನಾಯಕರ ನಿಲುವಿನ ಬಗ್ಗೆ ಪ್ರದೇಶ ಕಾಂಗ್ರೆಸ್ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಕಿಡಿ ಕಾರಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಆರೋಪ ಕೇಳಿಬಂದ ತಕ್ಷಣ ಅವರ ರಾಜೀನಾಮೆಗೆ ಆಗ್ರಹಿಸುತ್ತಿರುವ ಮಾಜಿ ಸಿಎಂ ಯಡಿಯೂರಪ್ಪ ಅವರು ತಾವೇ ಈ ಹಿಂದೆ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ವಿರುದ್ದ ಮಾಡಿರುವ ಆರೋಪಗಳನ್ನು‌ ಹಿಂಪಡೆಯುತ್ತಾರ ಹಾಗೂ ಅಶೋಕ್ ಅವರ ಭೂ ಅಕ್ರಮ ಬಗ್ಗೆ ತನಿಖೆಗೆ ಒತ್ತಾಯಿಸುತ್ತಾರ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಮಾಜಿ ಶಾಸಕರೂ ಆಗಿರುವ ರಮೇಶ್ ಬಾಬು ಅವರು ಈ ಸಂಬಂಧ ಬಿಡುಗಡೆ ಮಾಡಿರುವ ಮಾಧ್ಯಮ ಹೇಳಿಕೆ ಗಮನಸೆಳೆದಿದೆ. ಕರ್ನಾಟಕದಲ್ಲಿ ಜನನಾಯಕರಾಗಿ ಬೆಳೆದವರಲ್ಲಿ ಮಾಜಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪನವರೂ ಒಬ್ಬರು. ಜನನಾಯಕರು ಸಂದರ್ಭಕ್ಕೆ ಪೂರಕವಾಗಿ ತಮ್ಮ ನಿಲುವು ಮತ್ತು ಹೇಳಿಕೆಗಳನ್ನು ಬದಲಾಯಿಸಿದರೆ ಅವರು ...
’10 ವರ್ಷ ಬಿಡಿ, 10 ತಿಂಗಳು ಕೂಡ ಆಡಳಿತ ನಡೆಸಲು ಸಾಧ್ಯವಿಲ್ಲ’; ಸಿದ್ದು ವಿರುದ್ಧ ಹೆಚ್ಡಿಕೆ ವಾಗ್ದಾಳಿ

’10 ವರ್ಷ ಬಿಡಿ, 10 ತಿಂಗಳು ಕೂಡ ಆಡಳಿತ ನಡೆಸಲು ಸಾಧ್ಯವಿಲ್ಲ’; ಸಿದ್ದು ವಿರುದ್ಧ ಹೆಚ್ಡಿಕೆ ವಾಗ್ದಾಳಿ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕಾಂಗ್ರೆಸ್ ಪಕ್ಷದ ಪಾಪದ ಕೊಡ ತುಂಬಿದೆ. ಇನ್ನು 10 ವರ್ಷ ಬಿಡಿ, 10 ತಿಂಗಳು ಕೂಡ ಅವರು ಆಡಳಿತ ನಡೆಸಲು ಸಾಧ್ಯವಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಮತ್ತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಕೆಂಗೇರಿಯಲ್ಲಿ ಶನಿವಾರ ಬಿಜೆಪಿ- ಜೆಡಿಎಸ್ 'ಮೈಸೂರು ಚಲೋ' ಪಾದಯಾತ್ರೆಯ ಉದ್ಘಾಟನಾ ಸಂದರ್ಭದಲ್ಲಿ ಮಾತನಾಡಿದ ಕುಮಾರಸ್ವಾಮಿ, ಕಾಂಗ್ರೆಸ್ ಪಕ್ಷದ ಸರಕಾರವು ಆಡಳಿತದಲ್ಲಿ ಹಿಂದೆಂದೂ ಕಾಣದ ಭ್ರಷ್ಟಾಚಾರದಲ್ಲಿ ತೊಡಗಿದೆ. ಈ ಸರಕಾರ, ಸಿದ್ದರಾಮಯ್ಯನವರನ್ನು ಕಿತ್ತೊಗೆಯಲು ಈ ಪಾದಯಾತ್ರೆ ಮಾಡುತ್ತಿದ್ದೇವೆ ಎಂದರು. ವಾಲ್ಮೀಕಿ ನಿಗಮ, ಮುಡಾ ಹಗರಣ ಸಿದ್ದರಾಮಯ್ಯನವರ ಗಮನಕ್ಕೆ ಬಾರದೆ ನಡೆದಿದೆಯೇ ಎಂದು ಪ್ರಶ್ನಿಸಿದ ಹೆಚ್ಡಿಕೆ, ಮುಖ್ಯಮಂತ್ರಿಗಳು ಕೆಂಪಣ್ಣ ಆಯೋಗದ ಮುಚ್ಚಿಟ್ಟ ಪುಸ್ತಕವನ್ನು ತೆರೆದಿಡಲು ಒತ್ತಾಯಿಸಿದರು. ಪಾದಯಾತ್ರೆ ತಡೆಯಲು ಕಾಂಗ್ರೆಸ್ಸಿನವರು ಬಿಡದಿಯಲ್ಲಿ ಕಾರ್ಯಕ್ರಮ ಮಾಡಿದ್ದಾರೆ. ನಮ್ಮ ಆಸ್ತಿ ಕುರಿತ ಕಾಂಗ್ರೆಸ್ಸಿನ ಅಧ್ಯಕ್ಷರ ಪ್ರಶ್ನೆಗಳಿಗೆ ಬಿಡದಿಯಲ್ಲಿ ಉತ್ತರ ಕೊಡುತ್ತೇನೆ. ಅವರ ಅಕ್ರಮಗಳನ್ನೂ ತಿಳಿಸುತ್ತೇನೆ ಎಂದು ಕುಮಾರಸ್ವಾಮಿ ತಿಳಿಸಿದ...