Wednesday, June 25

Tag: BJP-JDS workers KPCC Working President Manjunath Bhandary

ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ನತ್ತ ಮುಖ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ

ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ನತ್ತ ಮುಖ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬಿಜೆಪಿ, ಜೆಡಿಎಸ್‌ನ ದ್ವಂದ್ವ ನಿಲುವಿನ ಪಾದಯಾತ್ರೆಯಿಂದ ಬೇಸತ್ತ ಹಳೇ ಮೈಸೂರು ಭಾಗದ ಆ ಎರಡೂ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ನತ್ತ ಮುಖ‌ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಹೇಳಿಕೆ ನೀಡಿದ್ದಾರೆ. ಬಿಜೆಪಿ, ಜೆಡಿಎಸ್ ನ ಮೈಸೂರು ಚಲೋ ಪಾದಯಾತ್ರೆಯ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು, ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಮುಂಚಿನ ದಿನ ರಾತ್ರಿ ಹೇಳಿಕೆ ನೀಡಿದ್ದ, ಪೆನ್ ಡ್ರೈವ್ ಪ್ರಕರಣದಲ್ಲಿ ತಮ್ಮ ಕುಟುಂಬದ ಸರ್ವ ನಾಶ ಮಾಡಿದವನ ಸಭೆಗೆ ನಾನು ಹೋಗಬೇಕೇ ಎಂದು ರಾತ್ರಿ ಪ್ರಶ್ನಿಸಿದ್ದ ಎಚ್.ಡಿ.ಕುಮಾರಸ್ವಾಮಿ ಅವರು, ಬೆಳಗಾಗುವುದರೊಳಗೆ ತಮ್ಮ ನಿಲುವು ಬದಲಿಸಿದ್ದಾರೆ. ದಿಢೀರ್ ಆಗಿ ಬಂದು ಪಾದಯಾತ್ರೆಯ ನೇತ್ರತ್ವ ವಹಿಸಿದ್ದಾರೆ. ಮಂತ್ರಿ ಪದವಿಯಿಂದ ಕಿತ್ತು ಹಾಕುವುದಾಗಿ ಅಮಿತ್ ಶಾ ಬೆದರಿಕೆ ಹಾಕಿರಬೇಕು. ಸಿಕ್ಕ ಒಂದು ಸಚಿವ ಪದವಿ ಕೈಬಿಡುವ ಭಯದಲ್ಲಿ ಕುಮಾರಸ್ವಾಮಿ ಅವರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ಮಂಜುನಾಥ ಭಂಡಾರಿ ಅವರು ಟೀಕಿಸಿದ್ದಾರೆ. ಇಂಥ ದ್ವಂದ್ವ ನಿಲುವಿನ ವ್ಯಕ್ತಿಯನ್ನು ನಂಬುವುದು ಹೇಗೆ..? ...