
ಐಪಿಎಲ್ ಗೆಲುವಿನ ‘ಕ್ರೆಡಿಟ್ ಪಡೆಯುವ ಹಪಾಹಪಿ’ ಕಾಲ್ತುಳಿತ ಘಟನೆಗೆ ಕಾರಣವೇ? ಸಿಎಂಗೆ ಸಿ.ಟಿ.ರವಿ 18 ಪ್ರಶ್ನೆ..!
ಬೆಂಗಳೂರು: RCB ಸಂಭ್ರಮಾಚರಣೆ ವೇಳೆ ಸಂಭವಿಸಿರುವ ಕಾಲ್ತುಳಿತ ಘಟನೆಯಲ್ಲಿ 11 ಮಂದಿ ಸಾವನ್ನಪ್ಪಿದ್ದು, ಈ ಭೀಕರ ದುರಂತಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಬಿಜೆಪಿ ಶಾಸಕ ಸಿ.ಟಿ.ರವಿ ಆರೋಪಿಸಿದ್ದಾರೆ.
ಕಾಲ್ತುಳಿತ ದುರಂತದ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನೀಡುತ್ತಿರುವ ಹೇಳಿಕೆ ಬಗ್ಗೆ ಸಿ.ಟಿ.ರವಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಐಪಿಎಲ್ ಟೂರ್ನಿಯಲ್ಲಿನ ಗೆಲುವಿನ 'ಕ್ರೆಡಿಟ್' ತೆಗೆದುಕೊಳ್ಳುವ ಹಪಾಹಪಿಯಿಂದಾಗಿ ಈ ದುರ್ಘಟನೆ ನಡೆದಿದೆ ಎಂದು ರವಿ ಅವರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಇದೇ ವೇಳೆ, ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತದ ಘಟನೆಯ ಕುರಿತು 18 ಪ್ರಶ್ನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಂದಿಟ್ಟಿರುವ ಸಿ.ಟಿ.ರವಿ, ಕೇವಲ ಒಂದು ಫ್ರಾಂಚೈಸಿ ಗೆಲುವುವನ್ನು ರಾಜ್ಯ ಸರ್ಕಾರವೇ ಸಂಭ್ರಮಿಸುವ ಅಗತ್ಯ ಏನಿತ್ತು? ಇದು ಸರ್ಕಾರದ ಆದ್ಯತೆಯಾಗಬೇಕಿತ್ತೇ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
ಸಿ.ಟಿ.ರವಿ ಅವರು ಸಿಎಂ ಅವರಲ್ಲಿ ಕೇಳಿರುವ 18 ಪ್ರಶ್ನೆಗಳು ಹೀಗಿವೆ:
ಸಾವಿರಾರು ಜನ ಸೇರುವ ನಿರೀಕ್ಷೆ ಇದ್...