Wednesday, June 25

Tag: Chikkaballapura Railway Station

ಚಿಕ್ಕಬಳ್ಳಾಪುರ ರೈಲು ನಿಲ್ದಾಣಕ್ಕೆ ಕೈವಾರ ತಾತಯ್ಯ ಯೋಗಿ ನಾರೇಯಣ ನಾಮಕರಣ ಮಾಡಲು ಮನವಿ

ಚಿಕ್ಕಬಳ್ಳಾಪುರ ರೈಲು ನಿಲ್ದಾಣಕ್ಕೆ ಕೈವಾರ ತಾತಯ್ಯ ಯೋಗಿ ನಾರೇಯಣ ನಾಮಕರಣ ಮಾಡಲು ಮನವಿ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರ್ನಾಟಕ ಬಲಿಜ ಜಾಗೃತಿ ವೇದಿಕೆ ವತಿಯಿಂದ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವರಾದ ವಿ.ಸೋಮಣ್ಣರವರಿಗೆ ಚಿಕ್ಕಬಳ್ಳಾಪುರ ರೈಲ್ವೆ ನಿಲ್ದಾಣಕ್ಕೆ ಕಾಲಜ್ಞಾನಿ, ಮಹಾನ್ ಸಂತ ಕೈವಾರ ತಾತಯ್ಯ ಖ್ಯಾತಿಯ ಯೋಗಿ ನಾರೇಯಣ ರೈಲು ನಿಲ್ದಾಣ ಎಂದು ನಾಮಕರಣ ಮಾಡಬೇಕು ಎಂದು ಕರ್ನಾಟಕ ಬಲಿಜ ಜಾಗೃತಿ ವೇದಿಕೆ ಮನವಿ ಮಾಡಿದೆ. ಕರ್ನಾಟಕ ಬಲಿಜ ಜಾಗೃತಿ ವೇದಿಕೆ ಅಧ್ಯಕ್ಷ ಎಂ.ಮುನಿರಾಜುರವರು, ಕಾರ್ಯದರ್ಶಿ ಜಿ.ಜ್ಞಾನೇಶ್, ಕನ್ನಡ ಪರ ಹೋರಾಟಗಾರ ಖಾಜಾ ಹುಸೇನ್ ಅವರ ನಿಯೋಗ ಕೇಂದ್ರ ರೈಲ್ವೇ ಸಚಿವ ವಿ.ಸೋಮಣ್ಣ ಅವರನ್ನು ಭೇಟಿಯಾಗಿ ಮನವಿ ಪತ್ರ ನೀಡಿದೆ.. ಈ ಸಂದರ್ಭದಲ್ಲಿ ಮಾತನಾಡಿ ಸಚಿವ ವಿ.ಸೋಮಣ್ಣ ಸರ್ವರಿಗೂ ಅನ್ನ ಅಕ್ಷರ, ಆಶ್ರಯ ಮೂರು ಸಿದ್ದಾಂತದ ಮೇಲೆ ಸಾಧು ಸಂತರು ನಾಡಿನ ಜನರ ಒಳಿತಿಗೆ ಶ್ರಮಿಸಿದರು. ಸಾಧು ಸಂತರ ಕೊಡುಗೆಯಿಂದ ನಾಡು ಶ್ರೀಮಂತಿವಾಗಿದೆ. ಕೈವಾರ ತಾತಯ್ಯ ಶ್ರೀ ಯೋಗಿ ನಾರೇಯಣರವರು ಲೋಕಕಲ್ಯಾಣಕ್ಕಾಗಿ ಶ್ರಮಿಸಿದ ಮಹಾನ್ ಸಂತರು ಅವರ ಹೆಸರನ್ನು ಚಿರಸ್ಥಾಯಿಯಾಗಿ ಉಳಿಸಲು ಚಿಕ್ಕಬಳ್ಳಾಪುರ ರೈಲು ನಿಲ್ದಾಣಕ್ಕೆ ಹೆಸರು ನಾಮಕರಣಕ್ಕೆ ಪರಿಶೀಲನೆ ಮಾಡಿ ಕ್ರಮಕೈಗೊಳ್ಳಲಾಗುವುದು ಎ...