Tuesday, June 24

Tag: CM Siddaramaiah

ವಿವಾದದ ಬಿರುಗಾಳಿ ಎಬ್ಬಿಸಿದ ಸಿಎಂ ಹೇಳಿಕೆ: ಸಿದ್ದರಾಮಯ್ಯರಿಗೆ ‘ಪಾಕಿಸ್ತಾನ ರತ್ನ’ ಗ್ಯಾರೆಂಟಿ ಎಂದ ಸಾಮ್ರಾಟ್

ವಿವಾದದ ಬಿರುಗಾಳಿ ಎಬ್ಬಿಸಿದ ಸಿಎಂ ಹೇಳಿಕೆ: ಸಿದ್ದರಾಮಯ್ಯರಿಗೆ ‘ಪಾಕಿಸ್ತಾನ ರತ್ನ’ ಗ್ಯಾರೆಂಟಿ ಎಂದ ಸಾಮ್ರಾಟ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಪಹಲ್ಗಾಮ್ ದಾಳಿ ಕುರಿತಂತೆ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ವಿವಾದದ ಬಿರುಗಾಳಿ ಎಬ್ಬಿಸಿದೆ. ಸಿದ್ದರಾಮಯ್ಯ ಅವರ ಪ್ರತಿಕ್ರಿಯೆಯನ್ನು ಮುಂದಿಟ್ಟು ಪಾಕಿಸ್ತಾನದ ಸುದ್ದಿವಾಹಿನಿಗಳು ಭಾರತ ಬಗ್ಗೆ ಗೇಲಿ ಮಾಡಲಾರಂಭಿಸಿದೆ. Pak media highlights CM Siddaramaiah’s ‘no war’ remarks, K’taka BJP says ‘puppet of enemy nation’ ಪಾಕಿಸ್ತಾನದ ವಿರುದ್ಧ ಮೋದಿ ಸರ್ಕಾರ ರಾಜತಾಂತ್ರಿಕ ನಿರ್ಬಂಧಗಳನ್ನು ಹೇರಿದ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಪ್ರಸ್ತುತ ಪಾಕಿಸ್ತಾನದ ಜೊತೆಗೆ ಯುದ್ಧದ ಅನಿವಾರ್ಯತೆ ಎದುರಾಗಿಲ್ಲ ಎಂದು ಹೇಳಿದ್ದರು. ಈ ಹೇಳಿಕೆಯನ್ನು ಮುಂದಿಟ್ಟು ಸುದ್ದಿ ಬಿತ್ತರಿಸಿರುವ ಪಾಕಿಸ್ತಾನದ ಸುದ್ದಿ ವಾಹಿನಿಗಳು, ಪಾಕಿಸ್ತಾನ ವಿಚಾರದಲ್ಲಿ ಭಾರತದಲ್ಲಿ ಆಂತರಿಕ ಭಿನ್ನಮತ ಭುಗಿಲೆದ್ದಿದೆ ಎಂದು ಬಣ್ಣಿಸಿವೆ. Congress rushes to Pakistan’s rescue. Karnataka Chief Minister Siddaramaiah, who owes his position to Muslim votes, is being quoted across Pakistan for suggesting that we focus on...
‘ಶಕ್ತಿ’ ಗ್ಯಾರೆಂಟಿ ಜೊತೆಗೆ KSRTCಗೆ 2,000 ಹೊಸ ಬಸ್‌; ‘ನುಡಿದಂತೆ ನಡೆದ ಸಿಎಂ’ ಎಂದ ರಾಮಲಿಂಗ ರೆಡ್ಡಿ

‘ಶಕ್ತಿ’ ಗ್ಯಾರೆಂಟಿ ಜೊತೆಗೆ KSRTCಗೆ 2,000 ಹೊಸ ಬಸ್‌; ‘ನುಡಿದಂತೆ ನಡೆದ ಸಿಎಂ’ ಎಂದ ರಾಮಲಿಂಗ ರೆಡ್ಡಿ

Others
ಬೆಂಗಳೂರು: ಶಕ್ತಿ ಯೋಜನೆ ಎಂಬುದು ಮಹಿಳಾ ಸಬಲೀಕರಣದೆಡೆಗಿನ ನಮ್ಮ ಸರ್ಕಾರದ ದಿಟ್ಟ ಹೆಜ್ಜೆಯಾಗಿದ್ದು, 2,000 ಹೊಸ ಬಸ್‌ಗಳ ಖರೀದಿ ಗೆ ಸರ್ಕಾರದ ಅನುಮತಿ ಸಿಕ್ಕಿದೆ. ಜೊತೆಗೆ ಸರ್ಕಾರದಿಂದ ಅನುದಾನ ಸಿಕ್ಕಿದ್ದು ಸಿಎಂ ಸಿದ್ದರಾಮಯ್ಯ ಅವರು ನುಡಿದಂತೆ ನಡೆಡಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಬಣ್ಣಿಸಿದ್ದಾರೆ. ಶಕ್ತಿ ಯೋಜನೆಯಿಂದಾಗಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ದಿನನಿತ್ಯ ಪ್ರಯಾಣಿಸುವವರ ಸಂಖ್ಯೆ ಲಕ್ಷಗಳಿಂದ ಕೋಟಿಗೆ ದಾಟಿದೆ. ಹಿಂದಿನ ಸರ್ಕಾರದಲ್ಲಿ ಸಾರಿಗೆ ಸಂಸ್ಥೆಗಳಲ್ಲಿ ಹೊಸ ಬಸ್ಸುಗಳ ಸೇರ್ಪಡೆಯಾಗಿರಲಿಲ್ಲ. ಹೊಸ ನೇಮಕಾತಿ ಕೂಡ ಸ್ಥಗಿತಗೊಂಡಿದ್ದರಿಂದ ಸಾರಿಗೆ ಸಂಸ್ಥೆಗಳು ತತ್ತರಿಸಿ ಹೋಗಿದ್ದ ಆ ಸಮಯದಲ್ಲಿ, ಶಕ್ತಿ ಯೋಜನೆ ಅನುಷ್ಠಾನ ಸುಲಭದ ಮಾತಾಗಿರಲಿಲ್ಲ, ನಿಜಕ್ಕೂ ಸವಾಲಾಗಿತ್ತು. ಆ ಸಮಯದಲ್ಲಿ ನಮ್ಮ ಸರ್ಕಾರವು 5800 ಹೊಸ ಬಸ್ಸುಗಳ ಸೇರ್ಪಡೆಗೆ ಹಾಗೂ 9000 ಹೊಸ ನೇಮಕಾತಿಗೆ ಅನುಮತಿ ಮತ್ತು 1000 ಅನುಕಂಪದ ಆಧಾರದ ನೇಮಕಾತಿಗಳು, ಈ ಸವಾಲನ್ನು ಸಕಾರಾತ್ಮಕವಾಗಿ ಎದುರಿಸಿ, ಪ್ರಯಾಣಿಕರಿಗೆ ಉತ್ತಮ ಸಾರಿಗೆ ಸೌಲಭ್ಯ ಒದಗಿಸಲು ಸಹಕಾರಿಯಾಯಿತು ಎ...
ಭಲೇ ಸಿಎಂ: ಉದಯಗಿರಿ ಗಲಭೆಕೋರರನ್ನು ಮಾತ್ರವಲ್ಲ, ಪ್ರಚೋದಿಸಿದವರನ್ನೂ ಬಂಧಿಸಲು ತಾಕೀತು

ಭಲೇ ಸಿಎಂ: ಉದಯಗಿರಿ ಗಲಭೆಕೋರರನ್ನು ಮಾತ್ರವಲ್ಲ, ಪ್ರಚೋದಿಸಿದವರನ್ನೂ ಬಂಧಿಸಲು ತಾಕೀತು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮೈಸೂರು: ಉದಯಗಿರಿ ಗಲಭೆಯಲ್ಲಿ ಕಲ್ಲುತೂರಿದವರನ್ನು ಮಾತ್ರವಲ್ಲ, ಪ್ರಚೋದಿಸಿದವರನ್ನೂ ಬಂಧಿಸಿ ಎಂದು ಸಿಎಂ ಸಿದ್ದರಾಮಯ್ಯ ಅವರು ಪೊಲೀಸರಿಗೆ ತಾಕೀತು ಮಾಡಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಮ್, ಉದಯಗಿರಿ ಘಟನೆಗೆ ಸಂಬಂಧಪಟ್ಟಂತೆ ಮೈಸೂರು ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ, ಮೈಸೂರು ಪೊಲೀಸ್ ಆಯುಕ್ತರು ಮತ್ತು ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಜೊತೆ ಚರ್ಚಿಸಿದ್ದಾಗಿ ತಿಳಿಸಿದ್ದಾರೆ. ತಪ್ಪಿತಸ್ಥರು ಯಾರೇ ಇದ್ದರೂ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಬೇಕು. ಕಾನೂನು ಕೈಗೆತ್ತಿಕೊಂಡ ಪ್ರತಿಯೊಬ್ಬರನ್ನೂ ಪತ್ತೆಹಚ್ಚಿ ತಕ್ಕ ಶಿಕ್ಷೆಯಾಗುವಂತೆ ಕ್ರಮ ವಹಿಸಬೇಕು. ಪೊಲೀಸ್ ಠಾಣೆ ಮೇಲೆ ಕಲ್ಲು ತೂರಿದವರು, ಅದಕ್ಕೆ ಪ್ರಚೋದನೆ ನೀಡಿದ ಎಲ್ಲರನ್ನೂ ಪತ್ತೆಹಚ್ಚಿ ಕಾನೂನು ಕ್ರಮಕ್ಕೆ ಒಳಪಡಿಸಬೇಕು, ಇದರ ಜೊತೆಗೆ ತಪ್ಪು ಮಾಡದವರಿಗೆ ಕೂಡ ತೊಂದರೆ ಆಗಬಾರದು ಎಂದವರು ಪ್ರತಿಪಾದಿಸಿದ್ದಾರೆ. ಮುಂದೆ ಇಂಥಾ ಘಟನೆಗಳು ಮರುಕಳಿಸದಂತೆ ಕಟ್ಟೆಚ್ಚರ ವಹಿಸಬೇಕು. ಕಾನೂನು ಸುವ್ಯವಸ್ಥೆಗೆ ಭಂಗ ತರುವ ಪ್ರಯತ್ನ ಮಾಡಿದ ಎಲ್ಲರನ್ನೂ ಕಾನೂನು ಕ್ರಮಕ್ಕೆ ಒಳಪಡಿಸಬೇಕ...
ಮೈಸೂರಿನ ಗಲಭೆ ವಿಚಾರದಲ್ಲಿ ಒಬ್ಬೊಬ್ಬರದ್ದು ಒಂದೊಂದು ಹೇಳಿಕೆ..!?

ಮೈಸೂರಿನ ಗಲಭೆ ವಿಚಾರದಲ್ಲಿ ಒಬ್ಬೊಬ್ಬರದ್ದು ಒಂದೊಂದು ಹೇಳಿಕೆ..!?

Focus, ಪ್ರಮುಖ ಸುದ್ದಿ, ರಾಜ್ಯ
ಹಾಸನ: ಕಾಂಗ್ರೆಸ್‌ ನಾಯಕರು ಮುಸ್ಲಿಮರ ಮತಗಳ ಋಣದಲ್ಲಿ ಇರುವುದರಿಂದ ಗಲಭೆ ವಿಚಾರದಲ್ಲಿ ಗಲಭೆಕೋರರ ಪರ ಹೇಳಿಕೆ ನೀಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಟೀಕಿಸಿದ್ದಾರೆ. ಆದಿಚುಂಚನಗಿರಿ ಮಠದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಸಾನಿಧ್ಯದಲ್ಲಿ ಸಕಲೇಶಪುರ ಪಟ್ಟಣದಲ್ಲಿ ನಡೆದ, ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಅನಾವರಣ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್,, ಮೈಸೂರಿನಲ್ಲಿ ನಡೆದ ಗಲಭೆಯ ವಿಚಾರದಲ್ಲಿ ಒಬ್ಬೊಬ್ಬರು ಒಂದೊಂದು ಹೇಳಿಕೆ ನೀಡುತ್ತಿದ್ದಾರೆ ಎಂದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಒಂದು ದಾರಿ ಹಿಡಿದರೆ, ಸಿಎಂ ಸಿದ್ದರಾಮಯ್ಯ ಮತ್ತೊಂದು ದಾರಿ ಹಿಡಿದಿದ್ದಾರೆ. ಪೊಲೀಸ್‌ ಠಾಣೆ ಮೇಲೆ ದಾಳಿ ಮಾಡಿ, ಪೊಲೀಸರನ್ನು ಗಾಯಗೊಳಿಸುವುದು ಹೊಸತಲ್ಲ. ಮೈಸೂರಿನ ಪೊಲೀಸರು ಮುಂಜಾಗ್ರತಾ ಕ್ರಮ ವಹಿಸದೇ ಇದ್ದಲ್ಲಿ ಇಡೀ ಪೊಲೀಸ್‌ ಠಾಣೆ ಧ್ವಂಸವಾಗುತ್ತಿತ್ತು. ಪೊಲೀಸರು ಬಹಳ ಮುನ್ನೆಚ್ಚರಿಕೆ ಕ್ರಮ ವಹಿಸಿದ್ದಾರೆ. ಮುಸ್ಲಿಮರ ಮತಗಳ ಭಿಕ್ಷೆಯ ಋಣದಲ್ಲಿ ಕಾಂಗ್ರೆಸ್‌ ಇರುವುದರಿಂದ, ಸಚಿವರು, ಮುಖ್ಯಮಂತ್ರಿ ಈ ರೀತಿ ವರ್ತಿಸುತ್ತಿದ್ದಾರೆ. ಕಾಂ...
ಮುಡಾ ಹಗರಣ ಬಗ್ಗೆ ಸಿಬಿಐ ತನಿಖೆಗ ಹೈಕೋರ್ಟ್ ನಕಾರ; ಸಿದ್ದರಾಮಯ್ಯಗೆ ಬಿಗ್ ರಿಲೀಫ್

ಮುಡಾ ಹಗರಣ ಬಗ್ಗೆ ಸಿಬಿಐ ತನಿಖೆಗ ಹೈಕೋರ್ಟ್ ನಕಾರ; ಸಿದ್ದರಾಮಯ್ಯಗೆ ಬಿಗ್ ರಿಲೀಫ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಧಾರವಾಡ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ -ಮುಡಾ ಹಗರಣ ಕುರಿತಂತೆ ತನಿಖೆಯನ್ನು ಸಿಬಿಐಗೆ ನೀಡಲು ನಿರಾಕರಿಸಿ ಹೈಕೋರ್ಟ್ ಆದೇಶಿಸಿದೆ. ಈ ಕುರಿತಂತೆ ಹೈಕೋರ್ಟ್​ನ ಧಾರವಾಡ ಪೀಠ ಪ್ರಕಟಿಸಿರುವ ತೀರ್ಪು ಗಮನಸೆಳೆದಿದೆ. ಮುಡಾ ನಿವೇಶನ ಅಕ್ರಮ ಕುರಿತಂತೆ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ಅವರು ಲೋಕಾಯುಕ್ತ ತನಿಖೆಯಲ್ಲಿ ವಿಶ್ವಾಸ ಇಲ್ಲಾವಾಗಿದ್ದು, ಸಿಬಿಐ ತನಿಖೆಗೆ ಆದೇಶ ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ಕುರಿತಂತೆ ವಿಚಾರಣೆ ನಡೆಸಿದ್ದ ಹೈಕೋರ್ಟ್ ಇಂದು ತೀರ್ಪು ಪ್ರಕಟಿಸಿದೆ. ಇಂಗ್ಲಿಷ್ ಭಾಷೆಯಲ್ಲೂ "ಉದಯ ನ್ಯೂಸ್" ಲಭ್ಯ  Karnataka HC quashes plea seeking CBI probe against CM Siddaramaiah in MUDA case 3 ಲಕ್ಷ 26 ಸಾವಿರ ಮೊತ್ತದ ಜಮೀನು ಸ್ವಾಧೀನಕ್ಕೆ ಬದಲಾಗಿ ದುಬಾರಿ ನಿವೇಶನ ಹಂಚಿಕೆ ಮಾಡಲಾಗಿದೆ. ಅಸ್ತಿತ್ವದಲ್ಲೇ ಇಲ್ಲದ ಜಮೀನು ಭೂಪರಿವರ್ತನೆ ಮಾಡಲಾಗಿದೆ ಎಂದು ಆರೋಪಿಸಿದ್ದ ಸ್ನೇಹಮಯಿ ಕೃಷ್ಣ ಅವರು, ಈ ಕುರಿತ ಕ್ಯಾಬಿನೆಟ್ ಟಿಪ್ಪಣಿ, ಮುಖ್ಯ ಕಾರ್ಯದರ್ಶಿ ಟಿಪ್ಪಣಿಯೂ ಸಿಎಂ ಪತ್ನಿಗೆ ಅನುಕೂಲವಾಗುವಂತೆ ಮಾಡಲಾಗಿದೆ ಎಂದು ಹೈಕೋರ್ಟ್ ಗಮನಸೆ...
ಬಾಣಂತಿಯರ ಸರಣಿ ಸಾವಿನ ರೀತಿ ನಿರ್ಲಕ್ಷ್ಯ, ಎಡವಟ್ಟುಗಳು HMPV ಸೋಂಕು ನಿಯಂತ್ರಣದಲ್ಲಿ ಬೇಡ; ಸರ್ಕಾರಕ್ಕೆ BJP 10 ಸಲಹೆಗಳು

ಬಾಣಂತಿಯರ ಸರಣಿ ಸಾವಿನ ರೀತಿ ನಿರ್ಲಕ್ಷ್ಯ, ಎಡವಟ್ಟುಗಳು HMPV ಸೋಂಕು ನಿಯಂತ್ರಣದಲ್ಲಿ ಬೇಡ; ಸರ್ಕಾರಕ್ಕೆ BJP 10 ಸಲಹೆಗಳು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದಲ್ಲಿ ಇಬ್ಬರು ಶಿಶುಗಳಿಗೆ HMPV ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿರುವ ಹಿನ್ನಲೆಯಲ್ಲಿ ರಾಜ್ಯದ ಜನರಲ್ಲಿ ಆತಂಕ ಮನೆಮಾಡಿದ್ದು, ಸರ್ಕಾರ ಇದನ್ನ ಅತ್ಯಂತ ಗಂಬೀರವಾಗಿ ಪರಿಗಣಿಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಸಲಹೆ ನೀಡಿದ್ದಾರೆ. ಕಳೆದ ಐದಾರು ತಿಂಗಳುಗಳಿಂದ ನಿರಂತರವಾಗಿ ಸಂಭವಿಸುತ್ತಿರುವ ಬಾಣಂತಿ ಮಹಿಳೆಯರು ಮತ್ತು ನವಜಾತ ಶಿಶುಗಳ ಸರಣಿ ಸಾವನ್ನ ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿರುವ ರಾಜ್ಯ ಸರ್ಕಾರ, HMPV ವೈರಾಣು ಸೋಂಕು ಹರಡುವುದನ್ನು ನಿಯಂತ್ರಣ ಮಾಡಲು ಸಮರ್ಥವೇ ಎಂಬ ಅನುಮಾನ ಸಹಜವಾಗಿ ಸಾರ್ವಜನಿಕರಲ್ಲಿ ಮೂಡಿದೆ ಎಂದವರು ಗಮನಸೆಳೆದಿದ್ದಾರೆ. ಕೇವಲ ಕಾಟಾಚಾರಕ್ಕೆ ಸಭೆಗಳನ್ನು ಮಾಡಿ, ಮಾರ್ಗಸೂಚಿ ಬಿಡುಗಡೆ ಮಾಡಿದರೆ ಸಾಲದು. ಸರ್ಕಾರ ಈ ಕೂಡಲೇ ಸಮರ್ಥ ಸಚಿವರನ್ನು ಒಳಗೊಂಡ ಟಾಸ್ಕ್ ಫೋರ್ಸ್ ರಚನೆ ಮಾಡಬೇಕು. ಸರ್ಕಾರಕ್ಕೆ ಮತ್ತು ಟಾಸ್ಕ್ ಫೋರ್ಸ್ ಗೆ ತಾಂತ್ರಿಕ ಮಾರ್ಗದರ್ಶನ ನೀಡಲು ಒಂದು ತಜ್ಞರ ವೈದ್ಯರ ಸಮಿತಿ ರಚನೆ ಮಾಡಬೇಕು. ಸಣ್ಣ ಮಕ್ಕಳು, ಹಿರಿಯ ನಾಗರಿಕರು, ರೋಗನಿರೋಧಕ ಶಕ್ತಿ ಕಡಿಮೆ ಇರುವವರು, ಈಗಾಗಲೇ ಶ್ವಾಸಕೋಶ ಸಮಸ್...
‘ಸತ್ಯಮೇವ ಜಯತೆ’; ಸಿದ್ದರಾಮಯ್ಯ ಕುರಿತು ಬೆಳವಣಿಗೆಯ ಕುತೂಹಲ

‘ಸತ್ಯಮೇವ ಜಯತೆ’; ಸಿದ್ದರಾಮಯ್ಯ ಕುರಿತು ಬೆಳವಣಿಗೆಯ ಕುತೂಹಲ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ಸೈಟು ಹಂಚಿಕೆ ಅಕ್ರಮ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ ಅನುಮತಿ ನೀಡಿರುವ ಬೆಳವಣಿಗೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಕೋಲಾಹಲಕ್ಕೆ ಕಾರಣವಾಗಿದೆ. ಈ ವಿಚಾರದಲ್ಲಿ ಆಡಳಿತ ಪ್ರತಿಪಕ್ಷಗಳ ನಡುವೆ ಸಂಘರ್ಷ ಏರ್ಪಟ್ಟಿದೆ. ಒಂದೆಡೆ ಈ ಪ್ರಾಸಿಕ್ಯೂಷನ್ ಅನಿಮತಿಗೆ ತಡೆ ಕೋರಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಆಗಸ್ಟ್ 29ಕ್ಕೆ ಮುಂದೂಡಿದೆ. ಇನ್ನೊಂದೆಡೆ, ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ಆದೇಶವನ್ನು ಆಗಸ್ಟ್ 29ಕ್ಕೆ ಮುಂದೂಡುವಂತೆ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚಿಸಿದೆ. ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ಸತ್ಯಮೇವ ಜಯತೆ ಎಂದು ಪ್ರತಿಕ್ರಿಯಿಸಿದ್ದಾರೆ. ಸಾಮಾಜಿಕ ಜಾಲತಾಣ 'X'ನಲ್ಲಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಸಂವಿಧಾನ ಮತ್ತು ನ್ಯಾಯಾಂಗ ವ್ಯವಸ್ಥೆಯ ಮೇಲೆ ಅಪಾರ ನಂಬಿಕೆಯಿಟ್ಟಿರುವ, ಈ ನೆಲದ ಕಾನೂನನ್ನು ಗೌರವಿಸುವ ಓರ್ವ ಪ್ರಜೆಯಾಗಿ ಸುಳ್ಳು ಪ್ರಕರಣದಲ್...
ಸಿಎಂ ವಿರುದ್ದದ ಪ್ರಾಸಿಕ್ಯೂಷನ್; ಹೈಕೋರ್ಟ್‌ನಲ್ಲಿ ತಡೆ ಸಿಗುವ ವಿಶ್ವಾಸದಲ್ಲಿ ಕಾಂಗ್ರೆಸ್ ನಾಯಕರು

ಸಿಎಂ ವಿರುದ್ದದ ಪ್ರಾಸಿಕ್ಯೂಷನ್; ಹೈಕೋರ್ಟ್‌ನಲ್ಲಿ ತಡೆ ಸಿಗುವ ವಿಶ್ವಾಸದಲ್ಲಿ ಕಾಂಗ್ರೆಸ್ ನಾಯಕರು

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮುಡಾ ಅಕ್ರಮ ಆರೋಪ ಕುರಿತಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ಕ್ರಮಕ್ಕೆ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯಪಾಲರು ನಿಯಮ ಪಾಲಿಸದೆ ಇದ್ದರೂ ಅನುಮತಿ ನೀಡಿದ್ದಾರೆ. ಹಾಗಾಗಿ ಈ ಪ್ರಕರಣ ನ್ಯಾಯಾಲಯದಲ್ಲಿ ನಿಲ್ಲುವುದಿಲ್ಲ. ಪ್ರಕರಣ ವಿಚಾರಣೆಗೆ ಹೋದ ತಕ್ಷಣ ಇದಕ್ಕೆ ತಡೆಯಾಜ್ಞೆ ಸಿಗುತ್ತದೆ ಎಂದು ಬಿ.ಎಲ್. ಶಂಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಲ್. ಶಂಕರ್, ರಾಜಕೀಯ ಪ್ರೇರಿತ ನಡೆಯುವುದಕ್ಕೆ ಸಾಕಷ್ಟು ಉದಾಹರಣೆಗಳು ದೊರೆಯುತ್ತವೆ. ಎಲ್ಲಾ ನಿಯಮಗಳನ್ನು ಪಾಲಿಸಿ ಪ್ರಕರಣಕ್ಕೆ ಅನುಮತಿ ನೀಡಿ ಎಂದು ಕೇಳಿದಾಗ ರಾಜ್ಯಪಾಲರು ಅನುಮತಿ ನೀಡಿರಲಿಲ್ಲ. ಆದರೆ ಈಗ ನಿಯಮ ಪಾಲಿಸದೆ ಇದ್ದರೂ ಅನುಮತಿ ನೀಡಿದ್ದಾರೆ ಎಂದು ದೂರಿದ್ದಾರೆ. ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ತನಿಖೆಗೆ ಅನುಮತಿ ನೀಡಿ ಎಂದು ಈ ಹಿಂದೆ ಕೇಳಿರುವ ನಾಲ್ಕು ಪ್ರಕರಣಗಳು ನಿಮ್ಮ ಮುಂದೆ ಬಾಕಿ ಇವೆ. ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ, ಜನಾರ್ದನ್ ರೆಡ್ಡಿ ಅವರ ಮೇಲೆ...
ಬೆಂಗಳೂರಿನಲ್ಲಿ ಭೂಸ್ವಾದೀನಪಡಿಸಿದರೆ ಎಕರೆಗೆ 12.1 ಕೋ.ರೂ., ಮೈಸೂರಿನಲ್ಲಿ 62 ಕೋ.ರೂ.; ಇದು ಹೇಗೆ ಸಾಧ್ಯ?

ಬೆಂಗಳೂರಿನಲ್ಲಿ ಭೂಸ್ವಾದೀನಪಡಿಸಿದರೆ ಎಕರೆಗೆ 12.1 ಕೋ.ರೂ., ಮೈಸೂರಿನಲ್ಲಿ 62 ಕೋ.ರೂ.; ಇದು ಹೇಗೆ ಸಾಧ್ಯ?

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು; ರಾಜಧಾನಿ ಬೆಂಗಳೂರಿನಲ್ಲಿ ಭೂಸ್ವಾದೀನಪಡಿಸಿದರೆ ಎಕರೆಗೆ 12.1 ಕೋಟಿ ರೂಪಾಯಿ, ಮೈಸೂರಿನಲ್ಲಿ 62 ಕೋಟಿ ರೂಪಾಯಿ.  ಇದು ಹೇಗೆ ಸಾಧ್ಯ? ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಬಿಜೆಪಿ ನಾಯಕ, ಮಾಜಿ ಸಚಿವ ಸುರೇಶ್ ಕುಮಾರ್ ಪ್ರಶ್ನಿಸಿದ್ದಾರೆ. ಮುಡಾ ಹಗರಣ ಕುರಿತಂತೆ ಸಿಎಂ ಹೇಳಿಕೆಗಳಿಗೆ ಪ್ರತಿಕ್ರಿಯಿಸಿ ಹೇಳಿಕೆ ಬಿಡುಗಡೆ ಮಾಡಿರುವ ಸುರೇಶ್ ಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮೈಸೂರಿನಲ್ಲಿ "ಜನಾಂದೋಲನ" ನಡೆಯುತ್ತಿರುವ ಈ ಸಂದರ್ಭದಲ್ಲಿ ಅತ್ಯಂತ ಮಹತ್ವದ ಕೋರಿಕೆಯನ್ನು ಸರ್ಕಾರದ ಮುಂದಿಟ್ಟಿದ್ದಾರೆ. ಕೆಐಎಡಿಬಿ ಬೆಂಗಳೂರು ಉತ್ತರ ತಾಲೂಕಿನ ಹೆಬ್ಬಾಳ ಮತ್ತು ಹೆಬ್ಬಾಳ ಅಮಾನಿಕೆರೆ ಗ್ರಾಮಗಳಲ್ಲಿ ಸ್ವಾಧೀನಪಡಿಸಿಕೊಂಡಿರುವ ಪ್ರತಿ ಎಕರೆ ಭೂಮಿಗೆ 12.10 ಕೋಟಿ ರೂ. ದರ ನಿಗದಿಪಡಿಸಿದೆ.ಇದು ಮಾರುಕಟ್ಟೆ ದರಕ್ಕಿಂತ ತುಂಬಾ ಕಡಿಮೆ ಎಂದು ಭಾವಿಸುತ್ತೇನೆ. ಆದರೆ ತಮ್ಮ ಮೈಸೂರಿನ ಹೊರವಲಯದ ಕೆಸರೆ ಗ್ರಾಮದಲ್ಲಿ 3.16 ಎಕರೆ ಜಮೀನಿನ ಬೆಲೆ 62 ಕೋಟಿ ರೂಪಾಯಿ ಎಂಬುದು ನಿಮ್ಮ ಹೇಳಿಕೆಯಿಂದಲೇ ತಿಳಿದುಬಂದಿದೆ ಎಂದು ಸಿದ್ದರಾಮಯ್ಯ ಅವರನ್ನು ಕುಟುಕಿದ್ದಾರೆ ಮುಖ್ಯಮಂತ್ರ...
ಬೆಂಗಳೂರಿನಲ್ಲಿ DL ಹೊಂದಿರದ ಚಾಲಕರ ಅವಾಂತರ..!  ಅವಘಡಗಳಿಗೆ ಬ್ರೇಕ್ ಹಾಕಿ ಎಂದು ಸಿಎಂಗೆ ರಮೇಶ್ ಬಾಬು ಪತ್ರ

ಬೆಂಗಳೂರಿನಲ್ಲಿ DL ಹೊಂದಿರದ ಚಾಲಕರ ಅವಾಂತರ..!  ಅವಘಡಗಳಿಗೆ ಬ್ರೇಕ್ ಹಾಕಿ ಎಂದು ಸಿಎಂಗೆ ರಮೇಶ್ ಬಾಬು ಪತ್ರ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬಿಬಿಎಂಪಿಯ ವ್ಯಾಪ್ತಿಯಲ್ಲಿ ಚಾಲನಾ ಪರವಾನಿಗಿ (DL ) ಇಲ್ಲದೆ ಲಾರಿ ಚಾಲಕರು ಅಪಘಾತಗಳನ್ನು ಎಸಗುತ್ತಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೆಪಿಸಿಸಿ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಮುಖ್ಯಮಂತ್ರಿಯನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರ ಗಮನಸೆಳೆದಿದೆ. 07-08-2024 ರಂದು ಬೆಂಗಳೂರಿನ ಡಾಬಸ್ ಪೇಟೆಯ ಬಳಿ ನಡೆದ ರಸ್ತೆ ಅಪಘಾತದಲ್ಲಿ ಗರ್ಭಿಣಿ ಮಹಿಳೆ ಮತ್ತು ಗರ್ಭದೊಳಗೆ ಇದ್ದ ಮಗು ಮೃತ ಪಟ್ಟಿದ್ದು, ಟಿಪ್ಪರ್ ಲಾರಿಯ ಚಾಲಕ ಪರಾರಿಯಾಗಿರುತ್ತಾನೆ. ಒಂದು ವಾರದ ಹಿಂದೆ ಬೆಂಗಳೂರಿನ ಕೆ.ಆರ್ ಸರ್ಕಲ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಇಂಜಿನಿಯರ್‌ಗಳು ಮೃತ ಪಟ್ಟಿದ್ದು, ಬಿಬಿಎಂಪಿ ಕಸದ ಲಾರಿ ಚಾಲಕ ಪರಾರಿಯಾಗಿರುತ್ತಾನೆ. ಇತ್ತೀಚಿಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ರಸ್ತೆ ಅಪಘಾತಗಳಲ್ಲಿ ಬಹುತೇಕ ಲಾರಿ ಚಾಲಕರ ಚಾಲನಾ ಪರವಾನಿಗಿ ಇರುವುದಿಲ್ಲ ಎಂದು ರಮೇಶ್ ಬಾಬು ಅವರು ತಮ್ಮ ಪತ್ರದಲ್ಲಿ ಸರ್ಕಾರದ ಗಮನಸೆಳೆದಿದ್ದಾರೆ. ಬೆಂಗಳೂರಿನಲ್ಲಿ ಕಸ ಸಾಗಾಣೆ ಮಾಡುವ ಲಾರ...