
ಮುಡಾ ಹಗರಣ; ಇದೀಗ ರಾಜಭವನ-ಸರ್ಕಾರ ನಡುವೆ ಸಂಘರ್ಷ; ರಾಜ್ಯಪಾಲರ ಶೋಕಾಸ್ ನೊಟೀಸ್ ಹಿಂಪಡೆಯುವಂತೆ ಒತ್ತಾಯಿಸಲು ಸಂಪುಟ ತೀರ್ಮಾನ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ವಿವಾದದ ಬಿರುಗಾಳಿ ಎಬ್ಬಿಸಿರುವ ಮುಡಾ ಹಗರಣ ವಿಚಾರದಲ್ಲಿ ಈವರೆಗೂ ಕಾಂಗ್ರೆಸ್-ಬಿಜೆಪಿ ನಡುವೆ ನಡೆಯುತ್ತಿದ್ದ ಸಂಘರ್ಷ ಇದೀಗ ರಾಜಭವನ-ಸರ್ಕಾರ ನಡುವಿನ ಕಲಹದತ್ತ ತಿರುಗಿದಂತಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಹಗರಣ ಕುರಿತಂತೆ ಪ್ರಾಸಿಕ್ಯೂಷನ್ ಅನುಮತಿ ಕೋರಿ ಸಲ್ಲಿಕೆಯಾಗಿರುವ ಅರ್ಜಿ ಹಿನ್ನೆಲೆ ರಾಜ್ಯಪಾಲರು ಸಿಎಂಗೆ ನೀಡಿರುವ ನೊಟೀಸ್ ಇದೀಗ ವಿದ್ಯಮಾನಗಳ ಕೇಂದ್ರಬಿಂದುವಾಗಿದ್ದು, ಈ ವಿಚಾರದಲ್ಲಿ ಇಂದು (ಆ.1) ನಡೆದ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಧಾರವೊಂದು ರಾಜಭವನ ಮತ್ತು ಸರ್ಕಾರದ ನಡುವಿನ ಸಂಘರ್ಷಕ್ಕೆ ಹಾದಿ ಮಾಡಿಕೊಟ್ಟಂತಿದೆ.
ಅಷ್ಟಕ್ಕೂ ಸಂಪುಟದ ತೀರ್ಮಾನ ಏನು..?
ರಾಜ್ಯಪಾಲರು ನೀಡಿರುವ ನೊಟೀಸ್ ಸಿದ್ದರಾಮಯ್ಯ ಅವರನ್ನು ಆತಂಕಕ್ಕೀಡು ಮಾಡಿದರೆ, ಆಡಳಿತರೂಢ ಕಾಂಗ್ರೆಸ್ ಪಕ್ಷಕ್ಕೂ ಮುಜುಗರದ ಪರಿಸ್ಥಿತಿಯನ್ನು ತಂದೊಡ್ಡಿದೆ. ಇಂದು ವೇಳೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದೇ ಆದಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡುವ ಪರಿಸ್ಥಿತಿಯೂ ಎದುರಾಗಬಹುದು. ಈ ಹಿನ್ನೆಲೆಯ...