Wednesday, June 25

Tag: DCM d.k.shivakumar

ಜಿಲ್ಲಾ ಅಧ್ಯಕ್ಷರಿಗೆ ಶಕ್ತಿ ತುಂಬಲು ಎಐಸಿಸಿಯಿಂದ ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

ಜಿಲ್ಲಾ ಅಧ್ಯಕ್ಷರಿಗೆ ಶಕ್ತಿ ತುಂಬಲು ಎಐಸಿಸಿಯಿಂದ ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ, "ಎಐಸಿಸಿಯು ಪಕ್ಷದ ಜಿಲ್ಲಾ ಅಧ್ಯಕ್ಷರಿಗೆ ಶಕ್ತಿ ತುಂಬಿ ಸಂಘಟನೆಗೆ ಹೊಸ ಸ್ವರೂಪ ನೀಡಲು ಮುಂದಾಗಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿರುವ ಜಿಲ್ಲಾ ಅಧ್ಯಕ್ಷರುಗಳ ಸಭೆ ವೇಳೆ ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಸೇರಿ ಎಲ್ಲಾ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಸಭೆ ನಡೆಸಿದ್ದಾರೆ. ಪಕ್ಷವು ಸರ್ಕಾರಕ್ಕಿಂತ ದೊಡ್ಡದು, ಹೀಗಾಗಿ ಹೈಕಮಾಂಡ್ ನಾಯಕರು ಜಿಲ್ಲಾ ಅಧ್ಯಕ್ಷರಿಗೆ ವಿಶೇಷ ಕಾರ್ಯಕ್ರಮ ನೀಡಿದ್ದಾರೆ ಎಂದರು. "ಈ ಸಭೆ ವೇಳೆ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಮಾಡುವ ಸಂದರ್ಭದಲ್ಲಿ ನಿಮ್ಮ ಅಭಿಪ್ರಾಯ ಪಡೆಯಲಾಯಿತೇ?, ನಿಮ್ಮನ್ನು ವಿಶ್ವಾಸಕ್ಕೆ ಪಡೆದರೆ ಎಂದು ಕೇಳಿದ್ದಾರೆ. ಜಿಲ್ಲಾ ಅಧ್ಯಕ್ಷರಿಗೆ ಶಕ್ತಿ ತುಂಬುವ ಕೆಲಸ ಮಾಡಿದ್ದಾರೆ" ಎಂದು ಹೇಳಿದರು. "ಸದಸ್ಯತ್ವ ಅಭಿಯಾನ ಹೇಗೆ ಮಾಡಬೇಕು, ಮತದಾರರ ಪಟ್ಟಿ ಪರಿಶೀಲನೆ, ಬಿಎಲ್ ಓಗಳ...
ಸಂವಿಧಾನ ಬದಲಿಸುವ ಮಾತುಗಳನ್ನಾಡುತ್ತಾ ಬಂದವರು ಬಿಜೆಪಿಯವರು: ಹಳೆಯ ಸನ್ನಿವೇಶಗಳನ್ನು ಮುನ್ನೆಲೆಗೆ ತಂದ ರಮೇಶ್ ಬಾಬು..

ಸಂವಿಧಾನ ಬದಲಿಸುವ ಮಾತುಗಳನ್ನಾಡುತ್ತಾ ಬಂದವರು ಬಿಜೆಪಿಯವರು: ಹಳೆಯ ಸನ್ನಿವೇಶಗಳನ್ನು ಮುನ್ನೆಲೆಗೆ ತಂದ ರಮೇಶ್ ಬಾಬು..

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಆಗಾಗ್ಗೆ ಸಂವಿಧಾನ ಬದಲಾವಣೆಯ ಬಗ್ಗೆ ಮಾತನಾಡುತ್ತಿರುವ ಬಿಜೆಪಿ ನಾಯಕರು, ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರತ್ತ ಬೆರಳು ತೋರಿಸುವ ಮುನ್ನ ತಮ್ಮನ್ನು ತಾವೇ ನೋಡಿಕೊಳ್ಳಲಿ ಎಂದು ವಿಧಾನ ಪರಿಷತ್ತಿನ ಮಾಜಿ ಸದಸ್ಯ, ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಧ್ಯಗಳಿಗೆ ಪ್ರತಿಕ್ರಿಯೆ ನೀಡಿರುವ ರಮೇಶ್ ಬಾಬು, ಅನಾದಿ ಕಾಲದಿಂದಲೂ ಬಿಜೆಪಿ-ಆರೆಸ್ಸೆಸ್ ನಾಯಕರು ಸಂವಿಧಾನ ಬದಲಾವಣೆ ಬಾಗೆ ಹೇಳಿಕೊಂಡಿರುವ ಸನ್ನಿವೇಶಗಳ ಬಗ್ಗೆ ಗಮನಸೆಳೆದರು. ಸಂಘ ಪರಿವಾರದ ಮೂಲಭೂತ ಸಿದ್ಧಾಂತಗಳಿಗೆ ಅನುಗುಣವಾಗಿ ನಮ್ಮ ದೇಶದ ಸಂವಿಧಾನವನ್ನು ಬದಲಾಯಿಸುವ ಹಿಡನ್ ಅಜೆಂಡ ಹೊಂದಿರುವ ಬಿಜೆಪಿ, ಸಮಯಕ್ಕೆ ಅನುಗುಣವಾಗಿ ತನ್ನ ಬಣ್ಣ ಬದಲಾಯಿಸಿಕೊಂಡು ರಾಜಕೀಯ ಹೇಳಿಕೆಗಳನ್ನು ನೀಡುತ್ತಿದೆ. ಜನಸಂಘದ ಕಾಲದಿಂದಲೂ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿರುವ ಬಿಜೆಪಿ ಆಯಾ ಸಂದರ್ಭದಲ್ಲಿ ಸಂಘ ಪರಿವಾರದ ವೇದಿಕೆಗಳಲ್ಲಿ, ನಾಯಕರ ಹೇಳಿಕೆಗಳಲ್ಲಿ ನಿರಂತರವಾಗಿ ನಮ್ಮ ದೇಶದ ಸಂವಿಧಾನವನ್ನು ಮನುಸ್ಮೃತಿಗೆ ಅನುಗುಣವಾಗಿ ಮೂಲಭೂತವಾದಕ್ಕೆ ಪೂರಕವಾಗಿ ಬದಲಾವಣೆ ಮಾಡುವ ಹೇ...
ಮೈಸೂರಿನ ಗಲಭೆ ವಿಚಾರದಲ್ಲಿ ಒಬ್ಬೊಬ್ಬರದ್ದು ಒಂದೊಂದು ಹೇಳಿಕೆ..!?

ಮೈಸೂರಿನ ಗಲಭೆ ವಿಚಾರದಲ್ಲಿ ಒಬ್ಬೊಬ್ಬರದ್ದು ಒಂದೊಂದು ಹೇಳಿಕೆ..!?

Focus, ಪ್ರಮುಖ ಸುದ್ದಿ, ರಾಜ್ಯ
ಹಾಸನ: ಕಾಂಗ್ರೆಸ್‌ ನಾಯಕರು ಮುಸ್ಲಿಮರ ಮತಗಳ ಋಣದಲ್ಲಿ ಇರುವುದರಿಂದ ಗಲಭೆ ವಿಚಾರದಲ್ಲಿ ಗಲಭೆಕೋರರ ಪರ ಹೇಳಿಕೆ ನೀಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಟೀಕಿಸಿದ್ದಾರೆ. ಆದಿಚುಂಚನಗಿರಿ ಮಠದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಸಾನಿಧ್ಯದಲ್ಲಿ ಸಕಲೇಶಪುರ ಪಟ್ಟಣದಲ್ಲಿ ನಡೆದ, ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಅನಾವರಣ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್,, ಮೈಸೂರಿನಲ್ಲಿ ನಡೆದ ಗಲಭೆಯ ವಿಚಾರದಲ್ಲಿ ಒಬ್ಬೊಬ್ಬರು ಒಂದೊಂದು ಹೇಳಿಕೆ ನೀಡುತ್ತಿದ್ದಾರೆ ಎಂದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಒಂದು ದಾರಿ ಹಿಡಿದರೆ, ಸಿಎಂ ಸಿದ್ದರಾಮಯ್ಯ ಮತ್ತೊಂದು ದಾರಿ ಹಿಡಿದಿದ್ದಾರೆ. ಪೊಲೀಸ್‌ ಠಾಣೆ ಮೇಲೆ ದಾಳಿ ಮಾಡಿ, ಪೊಲೀಸರನ್ನು ಗಾಯಗೊಳಿಸುವುದು ಹೊಸತಲ್ಲ. ಮೈಸೂರಿನ ಪೊಲೀಸರು ಮುಂಜಾಗ್ರತಾ ಕ್ರಮ ವಹಿಸದೇ ಇದ್ದಲ್ಲಿ ಇಡೀ ಪೊಲೀಸ್‌ ಠಾಣೆ ಧ್ವಂಸವಾಗುತ್ತಿತ್ತು. ಪೊಲೀಸರು ಬಹಳ ಮುನ್ನೆಚ್ಚರಿಕೆ ಕ್ರಮ ವಹಿಸಿದ್ದಾರೆ. ಮುಸ್ಲಿಮರ ಮತಗಳ ಭಿಕ್ಷೆಯ ಋಣದಲ್ಲಿ ಕಾಂಗ್ರೆಸ್‌ ಇರುವುದರಿಂದ, ಸಚಿವರು, ಮುಖ್ಯಮಂತ್ರಿ ಈ ರೀತಿ ವರ್ತಿಸುತ್ತಿದ್ದಾರೆ. ಕಾಂ...
ಪ್ರತಿ ತಿಂಗಳ 2ನೇ ಮತ್ತು 4ನೇ ಶನಿವಾರ ಕನಕಪುರ, ಬೆಂಗಳೂರು ದಕ್ಷಿಣ ಜಿಲ್ಲೆಯ ಜನರಿಗಾಗಿ ಮೀಸಲು: ಡಿಕೆಶಿ

ಪ್ರತಿ ತಿಂಗಳ 2ನೇ ಮತ್ತು 4ನೇ ಶನಿವಾರ ಕನಕಪುರ, ಬೆಂಗಳೂರು ದಕ್ಷಿಣ ಜಿಲ್ಲೆಯ ಜನರಿಗಾಗಿ ಮೀಸಲು: ಡಿಕೆಶಿ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪ್ರತಿ ತಿಂಗಳು 2 ನೇ ಮತ್ತು 4 ನೇ ಶನಿವಾರ ಕನಕಪುರಕ್ಕೆ ಭೇಟಿ ನೀಡಲಿದ್ದಾರೆ. ಆ ದಿನಗಳಂದು ಬೆಂಗಳೂರು ದಕ್ಷಿಣ ಜಿಲ್ಲೆಯ ಜನರ ಸಮಸ್ಯೆ, ಅಹವಾಲುಗಳನ್ನು ಆಲಿಸಲಿದ್ದಾರೆ. ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ನಾನಾ ವಿಧಾನಸಭಾ ಕ್ಷೇತ್ರಗಳ ಜನರು ತಮ್ಮನ್ನು ಭೇಟಿ ಮಾಡಲು ಬೆಂಗಳೂರಿಗೆ ಬರುವುದು ಬೇಡ. ತೊಂದರೆ ತೆಗೆದುಕೊಳ್ಳುವುದು ಬೇಡ. ನಾನೇ ಕನಕಪುರಕ್ಕೆ ಬಂದು ನಿಮ್ಮ ಕಷ್ಟ-ಸುಖ ವಿಚಾರಿಸಿ, ಅಹವಾಲು ಸ್ವೀಕರಿಸಲಿದ್ದೇನೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ....
ಬಿಜೆಪಿ-ಜೆಡಿಎಸ್‌ನಿಂದ ಬಡಜನರ ವಿರುದ್ದ ಪಾದಯಾತ್ರೆ?

ಬಿಜೆಪಿ-ಜೆಡಿಎಸ್‌ನಿಂದ ಬಡಜನರ ವಿರುದ್ದ ಪಾದಯಾತ್ರೆ?

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
  ಮಂಡ್ಯ: ಬಿಜೆಪಿ, ಜೆಡಿಎಸ್ ಪಾದಯಾತ್ರೆ ಮಾಡುತ್ತಿರುವುದು ನನ್ನ ಹಾಗೂ ಸಿದ್ದರಾಮಯ್ಯ ಅವರ ವಿರುದ್ಧವಲ್ಲ. ಈ ರಾಜ್ಯದ ಬಡಜನರ ವಿರುದ್ದ ಪಾದಯಾತ್ರೆ ಮಾಡುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಮಂಡ್ಯದಲ್ಲಿ ಮಂಗಳವಾರ ಕಾಂಗ್ರೆಸ್ ಆಯೋಜಿಸಿದ್ದ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಡಿ.ಕೆ.ಶಿ, ಬಿಜೆಪಿ-ಜೆಡಿಎಸ್ ನಾಯಕರ ವಿರುದ್ದ ವಾಗ್ದಾಳಿ ನಡೆಸಿದರು. “ಬಿಜೆಪಿ, ಜೆಡಿಎಸ್ ಪಾದಯಾತ್ರೆಗೆ ಧಮ್ ಇಲ್ಲ. ಹೀಗಾಗಿ ಮಾಧ್ಯಮಗಳಲ್ಲಿ ಕೇವಲ ನನ್ನ ಮತ್ತು ಕುಮಾರಸ್ವಾಮಿ ಅವರ ವಿಚಾರವನ್ನೇ ಮಾಧ್ಯಮಗಳು ತೆಗೆದುಕೊಳ್ಳುತ್ತಿವೆ” ಪಾದಯಾತ್ರೆ ಬಗ್ಗೆ ಲೇವಡಿ ಮಾಡಿದರು. “ಬಿಜೆಪಿ, ಜೆಡಿಎಸ್ ಪಾದಯಾತ್ರೆ ಮಾಡುತ್ತಿರುವುದು ನನ್ನ ಹಾಗೂ ಸಿದ್ದರಾಮಯ್ಯ ಅವರ ವಿರುದ್ಧವಲ್ಲ. ಈ ರಾಜ್ಯದ ಬಡಜನರ ವಿರುದ್ದ ಪಾದಯಾತ್ರೆ ಮಾಡುತ್ತಿದ್ದಾರೆ. ಈ ರಾಜ್ಯದ ಜನ ಕಾಂಗ್ರೆಸ್ ಗೆ ಶೇ. 43 ರಷ್ಟು ಮತ ನೀಡಿ 136 ಸ್ಥಾನ ನೀಡಿದ್ದಾರೆ. ಮಂಡ್ಯದಲ್ಲಿ 7 ಸ್ಥಾನ ಕೊಟ್ಟಿದ್ದಾರೆ. ಐದು ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದ್ದೇವೆ. ಇದನ್ನು ನಿಲ್ಲಿಸಲು ಸರ್ಕಾರ ಬೀಳಿಸುವ ಹುನ್ನಾರ ಮ...