Wednesday, June 25

Tag: Dr. Neeraj Patil London mayor

ಏ.30ರಂದು ಆಂಗ್ಲರ‌ ನಾಡಿನಲ್ಲಿ ಬಸವೇಶ್ವರ ಉತ್ಸವ.. ಬ್ರಿಟೀಷ್ ಕನ್ನಡಿಗರಿಂದ ಭರ್ಜರಿ ತಯಾರಿ..

ಏ.30ರಂದು ಆಂಗ್ಲರ‌ ನಾಡಿನಲ್ಲಿ ಬಸವೇಶ್ವರ ಉತ್ಸವ.. ಬ್ರಿಟೀಷ್ ಕನ್ನಡಿಗರಿಂದ ಭರ್ಜರಿ ತಯಾರಿ..

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ಲಂಡನ್: ಆಂಗ್ಲರ ನಾಡು ಲಂಡನ್ ಇದೀಗ ಜಗಜ್ಯೋತಿ ಬಸವೇಶ್ವರರ ಜಯಂತ್ಯೋತ್ಸವ ಸಡಗರದಲ್ಲಿದೆ. ಏಪ್ರಿಲ್ 30ರಂದು ಲಂಡನ್‌ನಲ್ಲಿರುವ ಬಸವೇಶ್ವರ ಪ್ರತಿಮೆಯ ಸ್ಥಳದಲ್ಲೇ ಬಸವೇಶ್ವರ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಇದು ಬ್ರಿಟೀಷ್ ಕನ್ನಡಿಗರ ನಡುವಿನ ಭಾರತ ವೈಭವಕ್ಕೆ ಸಾಕ್ಷಿಯಾಗಲಿದೆ ಎಂದು ಲಂಡನ್ ಮಾಜಿ ಮೇಯರ್ ಡಾ.ನೀರಜ್ ಪಾಟೀಲ್ ಹೇಳಿದ್ದಾರೆ. '30ನೇ ಏಪ್ರಿಲ್ 2025 ರಂದು ಮಧ್ಯಾಹ್ನ 12:00 ಗಂಟೆಗೆ, ನಾವು ಲಂಡನ್‌ನಲ್ಲಿ ಭಗವಾನ್ ಬಸವೇಶ್ವರರ 891 ನೇ ಜನ್ಮದಿನವನ್ನು ಆಚರಿಸುತ್ತೇವೆ. ಈ ಸಮಾರಂಭದಲ್ಲಿ ಯುನೈಟೆಡ್ ಕಿಂಗ್‌ಡಮ್‌ನಲ್ಲಿರುವ ಭಾರತೀಯ ಹೈಕಮಿಷನರ್ ಭಾಗಿಯಾಗಲಿದ್ದಾರೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.‌ UK ಯಲ್ಲಿ ಕನ್ನಡ ಸಂಸ್ಕೃತಿ ಮತ್ತು ಪರಂಪರೆಯನ್ನು ಸಂರಕ್ಷಿಸಲು ಮತ್ತು ಉತ್ತೇಜಿಸಲು ಶ್ರಮಿಸುತ್ತಿರುವ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಬ್ರಿಟಿಷ್ ಕನ್ನಡ ಸಮೂಹದ ಪ್ರಮುಖರ ಸಮಾಗಮವಾಗಲಿದೆ. ಇದು ಅನನ್ಯ ಹಾಗೂ ಅಪೂರ್ವ ಸನ್ನಿವೇಶಕ್ಕೆ ಸಾಕ್ಷಿಯಾಗಲಿದೆ ಎಂದವರು ಹೇಳಿದ್ದಾರೆ. ಬಸವೇಶ್ವರ ಸ್ಮಾರಕಕ್ಕೆ ಭೇಟಿ ನೀಡಲು ಮತ್ತು ಬಸವೇಶ್ವರ ದೇವರಿಗೆ ನಮನ ಸಲ್ಲಿಸಲು ಅವಕಾ...
ಆಂಗ್ಲರ ನಾಡಲ್ಲೂ ಕರುನಾಡ ವೈಭವ; ‘ಕನ್ನಡ ಡಿಂಡಿಮ’ಕ್ಕೆ ಸಾಕ್ಷಿಯಾದ ಲಂಡನ್ ಮಂದಿ

ಆಂಗ್ಲರ ನಾಡಲ್ಲೂ ಕರುನಾಡ ವೈಭವ; ‘ಕನ್ನಡ ಡಿಂಡಿಮ’ಕ್ಕೆ ಸಾಕ್ಷಿಯಾದ ಲಂಡನ್ ಮಂದಿ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
📝 ಡಾ.ನೀರಜ್ ಪಾಟೀಲ್, ಯುನೈಟೆಡ್ ಕಿಂಗ್‌ಡಮ್ ಸಾಗರೋತ್ತರ ರಾಷ್ಟ್ರ, ಆಂಗ್ಲರ ನಾಡಿನಲ್ಲೂ ಕನ್ನಡದ ಕಂಪು ಆವರಿಸಿದೆ. ಲಂಡನ್‌ಗೂ ಕರುನಾಡಿನ ಆರಾಧ್ಯ ದೈವ ವಿಶ್ವಗುರು ಬಸವೇಶ್ವರರನ್ನು ಕೊಂಡೊಯ್ದಿರುವ ಕನ್ನಡಿಗರು, ಇದೀಗ ಕನ್ನಡ ರಾಜ್ಯೋತ್ಸವವನ್ನೂ ನಾಡಭಕ್ತಿಯ ವೈಭವದೊಂದಿಗೆ ಆಚರಿಸಿದ್ದಾರೆ. ಕನ್ನಡ ರಾಜೋತ್ಸವದ ಮುನ್ನಾದಿನದಂದು, ಲಂಡನ್‌ನಲ್ಲಿರುವ ಕನ್ನಡಿಗರು ಕರುನಾಡಿನ ಶ್ರೀಮಂತ ಪರಂಪರೆ, ಭಾಷೆ ಮತ್ತು ಸಂಸ್ಕೃತಿ ವೈಭವದ ಪ್ರತೀಕವಾಗಿ ಆಚರಿಸಿದರು. ಪ್ರತೀ ವರ್ಷ ನವೆಂಬರ್ 1 ರಂದು ಲಂಡನ್‌ನಲ್ಲೂ ಅನಿವಾಸಿ ಕನ್ನಡಿಗರು ಕನ್ನಡ ರಾಜೋತ್ಸವ ಆಚರಿಸಿ ಕರ್ನಾಟಕ ರಚನೆಯನ್ನು ಸ್ಮರಿಸುತ್ತಾರೆ. ಇದು ವಿಶ್ವಾದ್ಯಂತ ಕನ್ನಡಿಗರಿಗೆ ಹೆಮ್ಮೆ ಮತ್ತು ಏಕತೆಯ ದಿನವಾಗಿದೆ. ಈ ಸಂದರ್ಭವು ಕರ್ನಾಟಕ ಮತ್ತು ಭಾರತವನ್ನು ತಮ್ಮ ಮನೆ ಎಂದು ಕರೆಯುವ ಪ್ರತಿಯೊಬ್ಬರ ಏಕತೆ, ಹೆಮ್ಮೆ ಮತ್ತು ಹಂಚಿಕೆಯ ಹೆಗ್ಗುರುತನ್ನು ಪ್ರತಿನಿಧಿಸುತ್ತದೆ. ಕರ್ನಾಟಕದ ವೈವಿಧ್ಯಮಯ ಸಂಪ್ರದಾಯಗಳು, ಕಲಾ ಪ್ರಕಾರಗಳು ಮತ್ತು ಭಾಷಾ ಪರಂಪರೆಗೆ ಗೌರವವಾಗಿ, ನಾವು ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಅಳವಡಿಸಿಕೊಳ್ಳಲು ಮತ್ತು ಉತ್...
ಲಂಡನ್‌ನ ಲ್ಯಾಂಬೆತ್ ಬಸವೇಶ್ವರ ಪ್ರತಿಮೆಗೆ ನಟಿ ಪೂಜಾಗಾಂಧಿ ದಂಪತಿ ಗೌರವ; ಮುಂಗಾರು ಮಳೆ ಬೆಡಗಿಗೆ ಸಾಗರೋತ್ತರ ಕನ್ನಡಿಗರ ಸನ್ಮಾನ

ಲಂಡನ್‌ನ ಲ್ಯಾಂಬೆತ್ ಬಸವೇಶ್ವರ ಪ್ರತಿಮೆಗೆ ನಟಿ ಪೂಜಾಗಾಂಧಿ ದಂಪತಿ ಗೌರವ; ಮುಂಗಾರು ಮಳೆ ಬೆಡಗಿಗೆ ಸಾಗರೋತ್ತರ ಕನ್ನಡಿಗರ ಸನ್ಮಾನ

Others
ಲಂಡನ್: ಸ್ಯಾಂಡಲ್‌ವುಡ್ ನಟಿ ಪೂಜಾ ಗಾಂಧಿ ಮತ್ತು ವಿಜಯ ಘೋರ್ಪಡೆ ದಂಪತಿ ಲಂಡನ್‌ನಲ್ಲಿ ಶ್ರೀ ಬಸವೇಶ್ವರ ವಿಗ್ರಹ ಸ್ಥಳಕ್ಕೆ ಭೇಟಿ ಕನ್ನಡಿಗರ ಜೊತೆ ಸಮಾಲೋಚನೆ ನಡೆಸಿ ಗಮನಸೆಳೆದರು. ಬ್ರಿಟಿಷ್ ಇಂಡಿಯನ್ ಮತ್ತು ಕನ್ನಡ ಸಮುದಾಯದ ಸದಸ್ಯರು ಕೂಡ ಈ ಸಂದರ್ಭದಲ್ಲಿ ಭಾಗವಹಿಸಿದ್ದರು. ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್ ಮತ್ತು ಯುಕೆ ಮೂಲದ ಬಸವ ಸಮಿತಿ ಸಂಯುಕ್ತವಾಗಿ ಆಯೋಜಿಸಿ ಕಾರ್ಯಕ್ರಮದಲ್ಲಿ ನಟಿ ಪೂಜಾ ಗಾಂಧಿ ದಂಪತಿ ಭಾಗವಹಿಸಿದರು. UK ಕನ್ನಡ ಬಳಗ ಮತ್ತು ಕನ್ನಡಿಗರು UK ಸಂಸ್ಥೆಗಳೂ ಈ ಕಾರ್ಯಕ್ರಮದಲ್ಲಿ ಮಹತ್ವದ ಸಹಭಾಗಿಗಳಾಗಿದ್ದವು. ಲ್ಯಾಂಬೆತ್‌ನ ಮಾಜಿ ಮೇಯರ್ ಡಾ. ನೀರಜ್ ಪಾಟೀಲ್ ಅವರು ಪೂಜಾ ಗಾಂಧಿ ದಂಪತಿಯನ್ನು ಅಭಿನಂದಿಸಿದರು. 'ಕನ್ನಡಿಗರು UK' ಅಧ್ಯಕ್ಷ ಗಣಪತಿ ಭಟ್, ಯುಕೆ ಮೂಲದ ಬಸವ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರು ಅಭಿಜಿತ್ ಸಲೀಮತ್, ಮಿರ್ಗಿ ರಂಗನಾಥ್ ಮತ್ತು ಶರಣ್ ಭೇಮಳ್ಳಿ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಸಾಮಾಜಿಕ ಹರಿಕಾರ ಜಗಜ್ಯೋತಿ ಬಸವೇಶ್ವರರಿಗೆ ಗೌರವ ಸಮರ್ಪಿಸಿದ ನಟಿ ಪೂಜಾ ಗಾಂಧಿ, 12ನೇ ಶತಮಾನದಲ್ಲಿ ಬಸವಣ್ಣನವರು ಮಾನವ ಹಕ್ಕುಗಳು, ಲಿಂಗ ಸಮಾನತ...
ಬಾಂಗ್ಲಾದೇಶ ಹಿಂಸಾಚಾರ ಬಗ್ಗೆ ಬ್ರಿಟೀಷ್ ಲೇಬರ್ ಪಾರ್ಟಿ ಕಳವಳ; ಶೀಘ್ರ ಶಾಂತಿ ಸ್ಥಾಪನೆಗೆ ಡಾ.ನೀರಜ್ ಪಾಟೀಲ್ ಕರೆ

ಬಾಂಗ್ಲಾದೇಶ ಹಿಂಸಾಚಾರ ಬಗ್ಗೆ ಬ್ರಿಟೀಷ್ ಲೇಬರ್ ಪಾರ್ಟಿ ಕಳವಳ; ಶೀಘ್ರ ಶಾಂತಿ ಸ್ಥಾಪನೆಗೆ ಡಾ.ನೀರಜ್ ಪಾಟೀಲ್ ಕರೆ

ದೇಶ-ವಿದೇಶ, ಪ್ರಮುಖ ಸುದ್ದಿ
📝 ಜಯ ಪ್ರಕಾಶ್ ಲಂಡನ್: ಭೀಕರ ಹಿಂಸಾಚಾರದಿಂದ ಬಾಂಗ್ಲಾದೇಶ ತ್ತರಿಸಿದೆ. ಉದ್ಯೋಗ ನೀತಿ ವಿರುದ್ದ ವಿದ್ಯಾರ್ಥಿಗಳು ಹಾಗೂ ವಿರೋಧ ಪಕ್ಷಗಳು ದಂಗೆ ಎದ್ದಿದ್ದು ನಿರಂತರ ಹಿಂಸಾಚಾರದಿಂದಾಗಿ ನೂರಾರು ಮಂದಿ ಬಲಿಯಾಗಿದ್ದಾರೆ. ಈ ಹಿಂಸಾಚರದಿಂದ ಬೆಚ್ಚಿದ ಶೇಖ್ ಹಸೀನಾ ಅವರು ಪ್ತಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ಭಾರತಕ್ಕೆ ಪಲಾಯನವಾಗಿದ್ದಾರೆ. ಬಾಂಗ್ಲಾದೇಶದ ಈ ಪರಿಸ್ಥಿತಿ ಬಗ್ಗೆ ಲಂಡನ್‌‌ನಲ್ಲಿರುವ ಬ್ರಿಟಿಷ್ ಲೇಬರ್ ಪಾರ್ಟಿ ಕಳವಳ ವ್ಯಕ್ತಪಡಿಸಿದೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಬ್ರಿಟಿಷ್ ಲೇಬರ್ ಪಾರ್ಟಿ ನಾಯಕರೂ ಆದ, ಭಾರತ ಮೂಲದ ಮಾಜಿ ಲಂಡನ್ ಮೇಯರ್ ಡಾ.ನೀರಜ್ ಪಾಟೀಲ್, ಬಾಂಗ್ಲಾದೇಶದಲ್ಲಿ ಶೀಘ್ರ ಶಾಂತಿ ಮರುಸ್ಥಾಪಿಸಲು ವಿಶ್ವ ಸಮುದಾಯ ಸಹಕಾರ ನೀಡಬೇಕಿದೆ ಎಂದು ಪ್ರತಿಪಾದಿಸಿದ್ದಾರೆ. ಬಾಂಗ್ಲಾದೇಶ ಸಂಸತ್ತು ವಿಸರ್ಜನೆಯಾಗಿದೆ, ಅದರ ಪ್ರಧಾನಿ ಈಗ ದೆಹಲಿಯಲ್ಲಿದ್ದಾರೆ. ಮುಂದಿನ ಮೂರು ತಿಂಗಳೊಳಗೆ ಚುನಾಯಿತ ಸರ್ಕಾರವನ್ನು ಮರುಸ್ಥಾಪಿಸುವ ಭರವಸೆಯೊಂದಿಗೆ ಮಿಲಿಟರಿ ಸ್ವಾಧೀನವಿದೆ. ಇದು ವಿಕಸನಗೊಳ್ಳುತ್ತಿರುವ ಪರಿಸ್ಥಿತಿಯಾಗಿದೆ ಮತ್ತು ಬ್ರಿಟಿಷ್ ವಿದೇಶಾಂಗ ಕಚೇರಿ ಕೂಡಾ ಕಳವ...