Wednesday, June 25

Tag: Driving Licence

ಬೆಂಗಳೂರಿನಲ್ಲಿ DL ಹೊಂದಿರದ ಚಾಲಕರ ಅವಾಂತರ..!  ಅವಘಡಗಳಿಗೆ ಬ್ರೇಕ್ ಹಾಕಿ ಎಂದು ಸಿಎಂಗೆ ರಮೇಶ್ ಬಾಬು ಪತ್ರ

ಬೆಂಗಳೂರಿನಲ್ಲಿ DL ಹೊಂದಿರದ ಚಾಲಕರ ಅವಾಂತರ..!  ಅವಘಡಗಳಿಗೆ ಬ್ರೇಕ್ ಹಾಕಿ ಎಂದು ಸಿಎಂಗೆ ರಮೇಶ್ ಬಾಬು ಪತ್ರ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬಿಬಿಎಂಪಿಯ ವ್ಯಾಪ್ತಿಯಲ್ಲಿ ಚಾಲನಾ ಪರವಾನಿಗಿ (DL ) ಇಲ್ಲದೆ ಲಾರಿ ಚಾಲಕರು ಅಪಘಾತಗಳನ್ನು ಎಸಗುತ್ತಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೆಪಿಸಿಸಿ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಮುಖ್ಯಮಂತ್ರಿಯನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರ ಗಮನಸೆಳೆದಿದೆ. 07-08-2024 ರಂದು ಬೆಂಗಳೂರಿನ ಡಾಬಸ್ ಪೇಟೆಯ ಬಳಿ ನಡೆದ ರಸ್ತೆ ಅಪಘಾತದಲ್ಲಿ ಗರ್ಭಿಣಿ ಮಹಿಳೆ ಮತ್ತು ಗರ್ಭದೊಳಗೆ ಇದ್ದ ಮಗು ಮೃತ ಪಟ್ಟಿದ್ದು, ಟಿಪ್ಪರ್ ಲಾರಿಯ ಚಾಲಕ ಪರಾರಿಯಾಗಿರುತ್ತಾನೆ. ಒಂದು ವಾರದ ಹಿಂದೆ ಬೆಂಗಳೂರಿನ ಕೆ.ಆರ್ ಸರ್ಕಲ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಇಂಜಿನಿಯರ್‌ಗಳು ಮೃತ ಪಟ್ಟಿದ್ದು, ಬಿಬಿಎಂಪಿ ಕಸದ ಲಾರಿ ಚಾಲಕ ಪರಾರಿಯಾಗಿರುತ್ತಾನೆ. ಇತ್ತೀಚಿಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ರಸ್ತೆ ಅಪಘಾತಗಳಲ್ಲಿ ಬಹುತೇಕ ಲಾರಿ ಚಾಲಕರ ಚಾಲನಾ ಪರವಾನಿಗಿ ಇರುವುದಿಲ್ಲ ಎಂದು ರಮೇಶ್ ಬಾಬು ಅವರು ತಮ್ಮ ಪತ್ರದಲ್ಲಿ ಸರ್ಕಾರದ ಗಮನಸೆಳೆದಿದ್ದಾರೆ. ಬೆಂಗಳೂರಿನಲ್ಲಿ ಕಸ ಸಾಗಾಣೆ ಮಾಡುವ ಲಾರ...