Wednesday, June 25

Tag: Hennuru Police Station

ಸಚಿವ ಭೈರತಿ ಹೆಸರಲ್ಲಿ ಯುವಕರ ಪುಂಡಾಟ;  ಕೇರಳ ಮೂಲದ ವ್ಯಕ್ತಿಯ ಆಸ್ತಿಗಾಗಿ ಕಿತ್ತಾಟ; ಪೊಲೀಸರ ಮೇಲೂ ಗೃಹ ಇಲಾಖೆಗೆ ದೂರು

ಸಚಿವ ಭೈರತಿ ಹೆಸರಲ್ಲಿ ಯುವಕರ ಪುಂಡಾಟ;  ಕೇರಳ ಮೂಲದ ವ್ಯಕ್ತಿಯ ಆಸ್ತಿಗಾಗಿ ಕಿತ್ತಾಟ; ಪೊಲೀಸರ ಮೇಲೂ ಗೃಹ ಇಲಾಖೆಗೆ ದೂರು

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನೆಲೆಸಿದ್ದ ಕೇರಳ ಮೂಲದ ದಂಪತಿಗಳನ್ನು ದೂರಮಾಡಿ ಅಸ್ತಿ ಕಬಳಿಸಲು ಸಚಿವ ಭೈರತಿ ಸುರೇಶ್ ಅಪ್ತರೆಂದು ಹೇಳಿಕೊಂಡು ಯುವಕರ ಗುಂಪು ದಾಂಧಲೆ ನಡೆಸಿರುವ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ. ರೌಡಿಗಳ ಅಟ್ಟಹಾಸಕ್ಕೆ ಪೊಲೀಸರೂ ಸಾಥ್ ನೀಡಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಈ ಬಗ್ಗೆ ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ. ಡಿಜಿಪಿ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೂ ಸೋಮವಾರ ದೂರು ಸಲ್ಲಿಕೆಯಾಗಿದೆ. ದಂಪತಿಗಳ ನಡುವಿನ ವಿರಸದ ಪ್ರಕರಣದ ಲಾಭ ಪಡೆಯಲು ರೌಡಿ ಗುಂಪು ಹೆಣ್ಣೂರು ಬಳಿ ನಿವೇಶನವೊಂದಕ್ಕೆ ಏಕಾಏಕಿ ನುಗ್ಗಿ ಪುಂಡಾಟ ಪ್ರದರ್ಶಿಸಿದೆ. ಹೆಣ್ಣೂರು ಗೋಪಿ ಮತ್ತು ಇಪ್ಪತ್ತು ಅಪರಿಚಿತ ವ್ಯಕ್ತಿಗಳ ದಾಂಧಲೆಯನ್ನು ಪ್ರತಿಭಟಿಸಿದ ಜಮೀನು ಮಾಲೀಕ ಶಾಜಿ ಜೋಸೆಫ್ ಅವರ ಕೊಲೆಗೆ ಯತ್ನ ನಡೆದಿದೆ. ಅಷ್ಟೇ ಅಲ್ಲ, ಮಾರಣಾಂತಿಕ ದಾಳಿ ನಡೆಸುವ ರಾಟ್‌ವೀಲರ್ ನಾಯಿಯನ್ನೂ ಕರೆತಂದು ದಾಳಿಗೆ ಯತ್ನಿಸಿದ್ದಾರೆಂದೂ ಸಂತ್ರಸ್ತರು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಹೆಣ್ಣೂರು ಸಮೀಪ ವಾಸವಿರುವ ಸಾಜಿ ಜೋಸೆಫ್ ಹಾಗೂ ಸಿನಿ ಸಾಜಿ ದಂಪತಿ ನಡುವೆ ವೈವಾಹಿಕ ಕಲಹಗಳ...