
ಬಾಣಂತಿಯರ ಸರಣಿ ಸಾವಿನ ರೀತಿ ನಿರ್ಲಕ್ಷ್ಯ, ಎಡವಟ್ಟುಗಳು HMPV ಸೋಂಕು ನಿಯಂತ್ರಣದಲ್ಲಿ ಬೇಡ; ಸರ್ಕಾರಕ್ಕೆ BJP 10 ಸಲಹೆಗಳು
ಬೆಂಗಳೂರು: ರಾಜ್ಯದಲ್ಲಿ ಇಬ್ಬರು ಶಿಶುಗಳಿಗೆ HMPV ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿರುವ ಹಿನ್ನಲೆಯಲ್ಲಿ ರಾಜ್ಯದ ಜನರಲ್ಲಿ ಆತಂಕ ಮನೆಮಾಡಿದ್ದು, ಸರ್ಕಾರ ಇದನ್ನ ಅತ್ಯಂತ ಗಂಬೀರವಾಗಿ ಪರಿಗಣಿಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಸಲಹೆ ನೀಡಿದ್ದಾರೆ.
ಕಳೆದ ಐದಾರು ತಿಂಗಳುಗಳಿಂದ ನಿರಂತರವಾಗಿ ಸಂಭವಿಸುತ್ತಿರುವ ಬಾಣಂತಿ ಮಹಿಳೆಯರು ಮತ್ತು ನವಜಾತ ಶಿಶುಗಳ ಸರಣಿ ಸಾವನ್ನ ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿರುವ ರಾಜ್ಯ ಸರ್ಕಾರ, HMPV ವೈರಾಣು ಸೋಂಕು ಹರಡುವುದನ್ನು ನಿಯಂತ್ರಣ ಮಾಡಲು ಸಮರ್ಥವೇ ಎಂಬ ಅನುಮಾನ ಸಹಜವಾಗಿ ಸಾರ್ವಜನಿಕರಲ್ಲಿ ಮೂಡಿದೆ ಎಂದವರು ಗಮನಸೆಳೆದಿದ್ದಾರೆ.
ಕೇವಲ ಕಾಟಾಚಾರಕ್ಕೆ ಸಭೆಗಳನ್ನು ಮಾಡಿ, ಮಾರ್ಗಸೂಚಿ ಬಿಡುಗಡೆ ಮಾಡಿದರೆ ಸಾಲದು. ಸರ್ಕಾರ ಈ ಕೂಡಲೇ ಸಮರ್ಥ ಸಚಿವರನ್ನು ಒಳಗೊಂಡ ಟಾಸ್ಕ್ ಫೋರ್ಸ್ ರಚನೆ ಮಾಡಬೇಕು. ಸರ್ಕಾರಕ್ಕೆ ಮತ್ತು ಟಾಸ್ಕ್ ಫೋರ್ಸ್ ಗೆ ತಾಂತ್ರಿಕ ಮಾರ್ಗದರ್ಶನ ನೀಡಲು ಒಂದು ತಜ್ಞರ ವೈದ್ಯರ ಸಮಿತಿ ರಚನೆ ಮಾಡಬೇಕು. ಸಣ್ಣ ಮಕ್ಕಳು, ಹಿರಿಯ ನಾಗರಿಕರು, ರೋಗನಿರೋಧಕ ಶಕ್ತಿ ಕಡಿಮೆ ಇರುವವರು, ಈಗಾಗಲೇ ಶ್ವಾಸಕೋಶ ಸಮಸ್...