Monday, June 23

Tag: KPCC General Secretary Padmaraj Ramaiah

‘ವಿಶ್ವಶಾಂತಿ’ಯೇ ಫ್ರಾನ್ಸಿಸ್ ಮಂತ್ರ..! ‘ನಾರಾಯಣಗುರುಗಳ ಸಂದೇಶ ಪ್ರಸ್ತುತ’ ಎಂದು ಪೋಪ್ ಪ್ರತಿಪಾದಿಸಿದ್ದರು

‘ವಿಶ್ವಶಾಂತಿ’ಯೇ ಫ್ರಾನ್ಸಿಸ್ ಮಂತ್ರ..! ‘ನಾರಾಯಣಗುರುಗಳ ಸಂದೇಶ ಪ್ರಸ್ತುತ’ ಎಂದು ಪೋಪ್ ಪ್ರತಿಪಾದಿಸಿದ್ದರು

Others
ಮಂಗಳೂರು: 'ವಿಶ್ವಶಾಂತಿ'ಯೇ ಪೋಪ್ ಫ್ರಾನ್ಸಿಸ್ ಅವರ ಮಂತ್ರವಾಗಿತ್ತು. ಅವರು 'ನಾರಾಯಣಗುರುಗಳ ಸಂದೇಶ ಪ್ರಸ್ತುತ' ಎಂದು ಪ್ರತಿಪಾದಿಸಿದ್ದರು ಎಂದು ಬಿಲ್ಲವ ಸಮುದಾಯದ ಮುಖಂಡರೂ ಆದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್.ಪೂಜಾರಿ ಸ್ಮರಿಸಿದ್ದಾರೆ. ಪೋಪ್ ಫ್ರಾನ್ಸಿಸ್ ನಿಧನಕ್ಕೆ ಶೋಕ ವ್ಯಕ್ತ ಪಡಿಸಿರುವ ಪದ್ಮರಾಜ್, ಕ್ರೈಸ್ತ ಸಮುದಾಯದ ಪ್ರಭಾವಿ ಧರ್ಮಗುರು ಹಾಗೂ ರೋಮನ್ ಕೆಥೊಲಿಕ್ ಚರ್ಚ್ ಮುಖ್ಯಸ್ಥರೂ ಆಗಿರುವ ಪೋಪ್ ಫ್ರಾನ್ಸಿಸ್ ಅವರು ವಿಶ್ವ ಶಾಂತಿಗಾಗಿ ನೀಡಿರುವ ಕೊಡುಗೆ ಅಪಾರ ಎಂದು ಬಣ್ಣಿಸಿದ್ದಾರೆ. ವ್ಯಾಟಿಕನ್ ನಗರದ ಶಿವಗಿರಿ ಮಠದಲ್ಲಿ ಆಯೋಜಿಸಿದ್ದ ಸರ್ವಧರ್ಮ ಸಭೆಯಲ್ಲಿ ಪೋಪ್ ಅವರು ತಮ್ಮ ಆಶೀರ್ವಚನದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳನ್ನು ಸ್ಮರಿಸಿದ್ದರು. ರಾಷ್ಟ್ರಗಳು ಮತ್ತು ವ್ಯಕ್ತಿಗಳ ನಡುವೆ ಅಸಹಿಷ್ಣುತೆ ಮತ್ತು ದ್ವೇಷ ಹೆಚ್ಚುತ್ತಿರುವ ಈ ಕಾಲದಲ್ಲಿ ಗುರುಗಳ ಸಂದೇಶವು ಬಹಳ ಪ್ರಸ್ತುತ. ಪ್ರತಿಯೊಬ್ಬ ಮಾನವರೂ ಒಂದೇ ಕುಟುಂಬ ಎಂದು ಪ್ರತಿಪಾದಿಸಿದ ಸಂತರಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳು ಅಗ್ರಸ್ಥಾನದಲ್ಲಿ ಬರುತ್ತಾರೆ ಎಂದು ಪ್ರತಿಪಾದಿಸಿದ್ದರು. ಈ ಪ್ರಪಂಚದ...
ನೆಲ್ಲಿದಡಿಗುತ್ತು ದೈವಸ್ಥಾನಕ್ಕೆ ತೊಂದರೆಯಾಗದಿರಲಿ; ಎಸ್‌ಇಝೆಡ್ ಅಧಿಕಾರಿಗಳಿಗೆ ಪದ್ಮರಾಜ್ ಎಚ್ಚರಿಕೆ

ನೆಲ್ಲಿದಡಿಗುತ್ತು ದೈವಸ್ಥಾನಕ್ಕೆ ತೊಂದರೆಯಾಗದಿರಲಿ; ಎಸ್‌ಇಝೆಡ್ ಅಧಿಕಾರಿಗಳಿಗೆ ಪದ್ಮರಾಜ್ ಎಚ್ಚರಿಕೆ

Focus, ಪ್ರಮುಖ ಸುದ್ದಿ, ರಾಜ್ಯ
ಮಂಗಳೂರು: ಮಂಗಳೂರು ಹೊರ ವಲಯದ ಬಜಪೆ ಗ್ರಾಮದ ನೆಲ್ಲಿದಡಿಗುತ್ತಿನ ದೈವ ಕಾಂತೇರಿ ಜುಮಾದಿ ಸ್ಥಾನಕ್ಕೆ ತೆರಳಿ ನಿತ್ಯ ಆರಾಧನೆಗೆ ಮುಂದಿನ ದಿನಗಳಿಂದ ಅವಕಾಶ ನಿರಾಕರಿಸುವ ಮೂಲಕ ಮಂಗಳೂರು ಎಸ್‌ಇಝೆಡ್ ತುಳುನಾಡಿನ ನಂಬಿಕೆ ಮೇಲೆ ಸವಾರಿ ಮಾಡಲು ಹೊರಟಿರುವುದು ವಿಷಾದನೀಯ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಆರ್.ಪದ್ಮರಾಜ್ ವಿಷಾದ ವ್ಯಕ್ತಪಡಿಸಿದ್ದಾರೆ. ಈ ದೈವಸ್ಥಾನಕ್ಕೆ 800 ವರ್ಷಗಳ ಇತಿಹಾಸವಿದ್ದು, ಇದೀಗ ದೈವಕ್ಕೆ ಹೂವು, ನೀರು ಇಡಲು ಬಿಡುವುದಿಲ್ಲ ಎನ್ನುವ ಮೂಲಕ ಎಸ್‌ಇಝೆಡ್ ಅಧಿಕಾರಿಗಳು ನೀಡಿರುವ ಆದೇಶ ತುಳುನಾಡಿದ ನಂಬಿಕೆ ಮೇಲೆ ಮಾಡಿರುವ ಅಪಮಾನ ಎಂದವರು ಕಿಡಿಕಾರಿದ್ದಾರೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಯಾವುದೇ ಅನಾಹುತ ಸಂಭವಿಸುವುದನ್ನೂ ದೈವ ದೇವರು ಕಾಪಾಡಿಕೊಂಡು ಬಂದಿರುವುದು ನಮಗೆಲ್ಲ ತಿಳಿದ ವಿಷಯ. ನಾವು ಯಾವುದೇ ಅಭಿವೃದ್ಧಿಯ ವಿರೋಧಿಗಳಲ್ಲ. ಆದರೆ ಅನಾದಿಕಾಲದಿಂದಲೂ ನಂಬಿಕೊಂಡು ಬಂದಿರುವ ದೈವಸ್ಥಾನಗಳಿಗೆ ತೊಂದರೆಯಾಗದಂತೆ ಸೂಕ್ತ ವ್ಯವಸ್ಥೆ ಮಾಡಬೇಕಿರುವುದು ಅಧಿಕಾರಿಗಳ ಧರ್ಮ. ಅಭಿವೃದ್ಧಿಯ ನೆಪದಲ್ಲಿ ಜನರ ಭಾವನೆಗಳಿಗೆ ಧಕ್ಕೆ ತರುವ ಕೆಲಸ ಮಾಡಕೂಡದು ಎಂದವರು ಮ...
ಕರ್ನಾಟಕವನ್ನು ಪ್ರತಿನಿಧಿಸಿರುವ ನಿರ್ಮಲಾ ರಾಜ್ಯಕ್ಕೆ ಕೊಟ್ಟ ಕೊಡುಗೆ ಏನು?

ಕರ್ನಾಟಕವನ್ನು ಪ್ರತಿನಿಧಿಸಿರುವ ನಿರ್ಮಲಾ ರಾಜ್ಯಕ್ಕೆ ಕೊಟ್ಟ ಕೊಡುಗೆ ಏನು?

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕೇಂದ್ರದ ಬಜೆಟ್‌ನಲ್ಲಿ ಜನಸಾಮಾನ್ಯರ ಬದುಕು ಬದಲಾಯಿಸುವಂಥ ಯಾವುದೇ ಯೋಜನೆಗಳನ್ನು ಘೋಷಣೆ ಮಾಡಿಲ್ಲ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ವಿಶ್ಲೇಷಿಸಿದ್ದಾರೆ. ಇಂಗ್ಲಿಷ್'ನಲ್ಲೂ ಉದಯ ನ್ಯೂಸ್ ಲಭ್ಯ.. Siddaramaiah's criticism of Budget 2025 purely politically motivated: K'taka BJP ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಮಂಡಿಸಿದ ಬಜೆಟ್ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಪದ್ಮರಾಜ್ ಆರ್. ಪೂಜಾರಿ, ಉದ್ಯೋಗ ಸೃಷ್ಟಿಗೆ ಕೆಲವು ಘೋಷಣೆಗಳನ್ನು ಮಾಡಿದ್ದಾರೆ. ಕಳೆದ ಹತ್ತ ವರ್ಷಗಳಿಂದಲೂ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡಲಾಗವುದು ಎಂದು ಹೇಳುತ್ತಾ ಬಂದಿದ್ದಾರೆ. ಅದು ಘೋಷಣೆಯಾಗಿ ಮಾತ್ರ ಉಳಿದಿದೆ. ನಿರುದ್ಯೋಗ ಸಮಸ್ಯೆ ಹೆಚ್ಚುತ್ತಲೇ ಇದೆ ಎಂದಿದ್ದಾರೆ. 12 ಲಕ್ಷ ರೂ.ವರೆಗಿನ ಆದಾಯಕ್ಕೆ ಯಾವುದೇ ತೆರಿಗೆ ಇಲ್ಲ ಮತ್ತು ಕೆಲವೊಂದು ತೆರಿಗೆ ವಿನಾಯಿತಿ ಮಾಡಿರುವುದು ಮಾತ್ರ ಸ್ವಾಗತಾರ್ಹ. ಆದರೇ, ಕರ್ನಾಟಕದ ದೃಷ್ಟಿಯಿಂದ ಇದೊಂದು ನಿರಾಶದಾಯಕ ಆಯವ್ಯಯ ಎಂದು ಬಣ್ಣಿಸಿದ ಪದ್ಮರಾಜ್, ಕಳೆದ 10 ವರ್ಷ...