Wednesday, June 25

Tag: KPCC leader Ramesh Babu

ಸದನದಲ್ಲಿ ಗಲಭೆಗೆ ಪ್ರಚೋದಿಸಿದರೇ ಅಶೋಕ್? ಸ್ಪೀಕರ್’ಗೆ ಕಾಂಗ್ರೆಸ್ ದೂರು, ವಿಪಕ್ಷ ನಾಯಕರ ಅಮಾನತಿಗೆ ಆಗ್ರಹ

ಸದನದಲ್ಲಿ ಗಲಭೆಗೆ ಪ್ರಚೋದಿಸಿದರೇ ಅಶೋಕ್? ಸ್ಪೀಕರ್’ಗೆ ಕಾಂಗ್ರೆಸ್ ದೂರು, ವಿಪಕ್ಷ ನಾಯಕರ ಅಮಾನತಿಗೆ ಆಗ್ರಹ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ವಿಧಾನಸಭೆಯಲ್ಲಿ ಸದನಕ್ಕೆ ಅಗೌರವ ತೋರಿದ ಆರೋಪದಲ್ಲಿ ಬಿಜೆಪಿಯ 18 ಶಾಸಕರನ್ನು ಅಮಾನತು ಮಾಡಲಾಗಿದೆಯಾದರೂ ಆ ಅಶಿಸ್ತಿಗೆ ಪ್ರಚೋದನೆ ನೀಡಿರುವ ಪ್ರತಿ ಪಕ್ಷ ನಾಯಕ ಆರ್.ಅಶೋಕ್ ಮೇಲೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಆಡಳಿತಾರೂಢ ಕಾಂಗ್ರೆಸ್ ಗಮನಸೆಳೆದಿದೆ. ಈ ಕುರಿತಂತೆ ಕೆಪಿಸಿಸಿ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಅವರು ಸ್ಪೀಕರ್ ಯು.ಟಿ.ಖದರ್ ಅವರಿಗೆ ನೀಡಿದ್ದಾರೆ. ಸಂಸದೀಯ ವಿಶ್ಲೇಷಕರೂ, ವಕೀಲರೂ ಆಗಿರುವ ಮಾಜಿ ಶಾಸಕ ರಮೇಶ್ ಬಾಬು ಅವರು ವಿಧಾನಸಭೆಯ ಅಧಿವೇಶನದಲ್ಲಿ ಶುಕ್ರವಾರ ಸದನಕ್ಕೆ ಮತ್ತು ಸಭಾಧ್ಯಕ್ಷರಿಗೆ ಅಗೌರವ ತೋರಿದ ಮತ್ತು ಅಶಿಸ್ತಿನಿಂದ ನಡೆದುಕೊಂಡ ಸದಸ್ಯರನ್ನು ಅಮಾನತ್ತುಗೊಳಿಸುವ ಸಂದರ್ಭ ಸದನವು ಅಂಗೀಕರಿಸಿದ ಪ್ರಸ್ತಾವದ ಲೋಪ ಕುರಿತು ಸ್ಪೀಕರ್ ಅವರ ಗಮನಸೆಳೆದಿದ್ದಾರೆ. ಸದನಕ್ಕೆ ಮತ್ತು ಸಭಾಧ್ಯಕ್ಷರಿಗೆ ಅಗೌರವ ತೋರಿದ ಮತ್ತು ಅಶಿಸ್ತಿನಿಂದ ನಡೆದುಕೊಂಡ ಸದಸ್ಯರನ್ನು ಅಮಾನತ್ತುಗೊಳಿಸುವ ಸಂದರ್ಭ 21-03-2025 ರಂದು ಸದನದಲ್ಲಿ ಕಾನೂನು ಮತ್ತು ಸಂಸದೀಯ ಸಚಿವ ಹೆಚ್.ಕೆ.ಪಾಟೀಲ್ ಅವರು ಮಂಡಿಸಿದ ಪ್ರಸ್ತಾವನೆಯ ಮೇಲೆ 18 ಮಂದಿ ಬಿಜೆಪಿ ಶಾಸಕರನ್ನು 6 ...
ವಿರೋಧ ಪಕ್ಷದ ನಾಯಕ ಸ್ಥಾನ ಉಳಿಸಿಕೊಳ್ಳಲು ನವರಂಗಿ ಆಟ? ಅಶೋಕ್ ವಿರುದ್ಧ ರಮೇಶ್ ಬಾಬು ಟೀಕಾಸ್ತ್ರ

ವಿರೋಧ ಪಕ್ಷದ ನಾಯಕ ಸ್ಥಾನ ಉಳಿಸಿಕೊಳ್ಳಲು ನವರಂಗಿ ಆಟ? ಅಶೋಕ್ ವಿರುದ್ಧ ರಮೇಶ್ ಬಾಬು ಟೀಕಾಸ್ತ್ರ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಪ್ರತಿಪಕ್ಷ ನಾಯಕ ಸ್ಥಾನ ಉಳಿಸಿಕೊಳ್ಳಲು ಆರ್.ಅಶೋಕ್ ನವರಂಗಿ ಆಟ ಆಡುತ್ತಿದ್ದಾರೆ ಎಂದು ಮಾಜಿ ಶಾಸಕರೂ ಆದ ಕೆಪಿಸಿಸಿ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಕಟುವಾಗಿ ಟೀಕಿಸಿದ್ದಾರೆ. ಚನ್ನಪಟ್ಟಣದ ಉಪಚುನಾವಣೆಯಲ್ಲಿ ಮಾತನಾಡುವಾಗ ಆರ್ ಅಶೋಕ್ ರವರು ಕಾಂಗ್ರೆಸ್ ಪಕ್ಷದ ದುರಾಡಳಿತದ ವಿರುದ್ಧ ಉಪಚುನಾವಣೆ ನಡೆಯುತ್ತಿದೆ ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯನ್ನು ಖಂಡಿಸಿರುವ ರಮೇಶ್ ಬಾಬು, ಬಹುತೇಕ ಕಾಂಗ್ರೆಸ್ ಪಕ್ಷಕ್ಕೆ ಅಥವಾ ಕರ್ನಾಟಕದ ಕಾಂಗ್ರೆಸ್ ನಾಯಕರಿಗೆ ಉಪಚುನಾವಣೆಗಳನ್ನು ದುರಾಡಳಿತದ ಮೇಲೆ ನಡೆಸುವ ಅವಶ್ಯಕತೆ ಇಲ್ಲ. ಅಂತಹ ಅವಶ್ಯಕತೆ ಏನಾದರೂ ಇದ್ದರೆ ಅದು ಭಾರತೀಯ ಜನತಾ ಪಕ್ಷದ ನಾಯಕರಿಗೆ ಮತ್ತು ಅವರ ಪಕ್ಷಕ್ಕೆ ಇರುತ್ತದೆ ಎಂದು ಎದಿರೇಟು ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಮೇಲೆ ಆರೋಪ ಮಾಡುತ್ತಿರುವುದು ಅವರ ವಿರೋಧ ಪಕ್ಷದ ನಾಯಕ ಸ್ಥಾನವನ್ನು ಉಳಿಸಿಕೊಳ್ಳುವ ಹತಾಶ ಪ್ರಯತ್ನ. ಕರ್ನಾಟಕದ ನವರಂಗಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ರವರು ಚನ್ನಪಟ್ಟಣದ ಉಪಚುನಾವಣೆಯಲ್ಲಿ ಮಾತನಾಡುವಾಗ ಕಾಂಗ್ರೆಸ್ ಪಕ್ಷದ ದುರಳಿತದ ವಿರುದ್ಧ ಉಪಚುನಾವಣೆ ನಡೆಯುತ್ತಿದೆ ಎನ್ನುವ...