
ಮಹಾರಾಷ್ಟ್ರಕ್ಕೂ ಮಾದರಿಯಾದ KSRTC; ಬೆಂಗಳೂರಿನಲ್ಲಿ ನಿಯೋಗದ ಕಸರತ್ತು
ಬೆಂಗಳೂರು: ಸಾರಿಗೆ ವ್ಯವಸ್ಥೆಯಲ್ಲಿ ಮುಂಚೂಣಿ ಸೇವೆಯ ಮೂಲಕ ಗಮನಸೆಳೆದಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಮಹಾರಾಷ್ಟ್ರ ಸರ್ಕಾರಕ್ಕೂ ಮಾದರಿಯಾದಂತಿದೆ. ಮಹಾರಾಷ್ಟ್ರ ಸರ್ಕಾರದ ಸಾರಿಗೆ ಸಚಿವ ಪ್ರತಾಪ್ ಸರ್ನಾಯಕ್ ನತೃತ್ವದ ನಿಯೋಗ ಬೆಂಗಳೂರಿನಲ್ಲಿರುವ KSRTC ಕೇಂದ್ರ ಕಚೇರಿ ಹಾಗೂ ಕಾರ್ಯಾಗಾರಕ್ಕೆ ಭೇಟಿ ನೀಡಿ ಅಧ್ಯಯನ ನಡೆಸಿದ ಬೆಳವಣಿಗೆ ಕುತೂಹಲದ ಕೇಂದ್ರಬಿಂದುವಾಯಿತು.
ಮಹಾರಾಷ್ಟ್ರ ಸಾರಿಗೆ ನಿಗಮ 'ಎಂ.ಎಸ್.ಆರ್.ಟಿ.ಸಿ' ವ್ಯವಸ್ಥಾಪಕ ನಿರ್ದೇಶಕ ಮಾಧವ್ ಕುಸೆಕರ್ ಹಾಗೂ ಅಧಿಕಾರಿಗಳ ತಂಡ ಈ ನಿಯೋಗದಲ್ಲಿತ್ತು. KSRTC ನಿಗಮದಲ್ಲಿನ ಪ್ರತಿಷ್ಠಿತ ವಾಹನಗಳ ಕಾರ್ಯಾಚರಣೆ, ಕಾರ್ಮಿಕ ಕಲ್ಯಾಣ ಉಪಕ್ರಮಗಳು, ವಾಣಿಜ್ಯ ಆದಾಯ, ಬಸ್ಸುಗಳ ಪುನಃಶ್ಚೇತನ/ ನವೀಕರಣ, ಹೆಚ್.ಆರ್.ಎಂ.ಎಸ್., ಇ-ಟೆಕೇಟಿಂಗ್, KSRTC ಆರೋಗ್ಯ ಯೋಜನೆ, ರೂ 1 ಕೋಟಿ ಅಪಘಾತ ವಿಮೆ ಹಾಗೂ ಇತರೆ ಉಪಕ್ರಮಗಳ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಂದ ಮಾಹಿತಿ ಪಡೆಯಿತು. KSRTC ಉಪಾಧ್ಯಕ್ಷ ರಿಜ್ವಾನ್ ನವಾಬ್, ರಾಜ್ಯ ಸರ್ಕಾರದ ಸಾರಿಗೆ ಇಲಾಖೆ ಕಾರ್ಯದರ್ಶಿ, KSRTC ವ್ಯವಸ್ಥಾಪಕ ನಿರ್ದೇಶಕರು ಈ...