Wednesday, June 25

Tag: KSRTC -NWKRTC

ಆರ್.ಅಶೋಕ್ ಸಾರಿಗೆ ಸಚಿವರಾಗಿದ್ದಾಗ 7 ಬಾರಿ ಬರೋಬ್ಬರಿ ಶೇ. 47.8 ರಷ್ಟು ಬಸ್ ಟಿಕೆಟ್ ದರ ಹೆಚ್ಚಿಸಲಾಗಿತ್ತು: ರಾಮಲಿಂಗಾ ರೆಡ್ಟಿ ಅವರಿಂದ ಪಟ್ಟಿ ಬಿಡುಗಡೆ

ಆರ್.ಅಶೋಕ್ ಸಾರಿಗೆ ಸಚಿವರಾಗಿದ್ದಾಗ 7 ಬಾರಿ ಬರೋಬ್ಬರಿ ಶೇ. 47.8 ರಷ್ಟು ಬಸ್ ಟಿಕೆಟ್ ದರ ಹೆಚ್ಚಿಸಲಾಗಿತ್ತು: ರಾಮಲಿಂಗಾ ರೆಡ್ಟಿ ಅವರಿಂದ ಪಟ್ಟಿ ಬಿಡುಗಡೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು; ಕರ್ನಾಟಕ ರಾಜ್ಯ ರಸ್ತೆ ಸಾರಿಗೆ‌ ನಿಗಮಗಳ ಬಸ್ ಟಿಕೆಟ್ ದರ ಹೆಚ್ಚಳದ ಸರ್ಕಾರದ ನಿರ್ಧಾರ ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ನಾಯಕರಿಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ತಮ್ಮದೇ ರೀತಿಯಲ್ಲಿ ಎದಿರೇಟು ನೀಡಿದ್ದಾರೆ. ಶೀಘ್ರವೇ ಕನ್ನಡದಲ್ಲೂ ಬರಲಿದೆ ದೇಶದ ಪ್ರತಿಷ್ಠಿತ ಮಾಧ್ಯಮ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅದರಲ್ಲೂ ಆರ್.ಅಶೋಕ್ ಅವರು ಸಾರಿಗೆ ಸಚಿವರಾಗಿದ್ದಾಗ ಸಾರಿಗೆ ಬಸ್‌ಗಳಲ್ಲಿನ ಪ್ರಯಾಣ ದರ ಏರಿಕೆ ಮಾಡಿರುವ ಬಗ್ಗೆ ರಾಮಲಿಂಗ ರೆಡ್ಡಿ ಅಂಕಿಅಂಶಗಳನ್ನು ಬಹಿರಂಗಪಡಿಸಿದ್ದಾರೆ. ಅಶೋಕ್ ಅವರು ಸಾರಿಗೆ ಸಚಿವರಾಗಿದ್ದಾಗ ಆಗಿನ ಬಿಜೆಪಿ ಸರ್ಕಾರವು 7 ಬಾರಿ ಟಿಕೆಟ್ ದರ ಪರಿಷ್ಕರಿತ್ತು. ಬರೋಬ್ಬರಿ ಶೇ. 47.8 ರಷ್ಟು ಬಸ್ ಟಿಕೆಟ್ ದರ ಹೆಚ್ಚಿಸಿತ್ತು ಎಂದು ರೇಟ್ ಕಾರ್ಡ್ ಬಿಡುಗಡೆ ಮಾಡಿದ್ದಾರೆ. ನಮ್ಮನ್ನು ಟೀಕಿಸುವ ಬಿಜೆಪಿಗೆ ಯಾವ ನೈತಿಕತೆಯೂ ಇಲ್ಲ, ನಾಚಿಕೆಯೂ ಇಲ್ಲ! ಎಂದು ಸಚಿವ ರಾಮಲಿಂಗ ರೆಡ್ಡಿ ಟೀಕಿಸಿದ್ದಾರೆ....
KSRTC ಟಿಕೆಟ್ ದರ ಏರಿಕೆ; ಸರ್ಕಾರದ ವಿರುದ್ಧ ದಂಗೆ ಏಳುವುದೂ ಅನಿವಾರ್ಯ ಎಂದ ಪ್ರತಿಪಕ್ಷ

KSRTC ಟಿಕೆಟ್ ದರ ಏರಿಕೆ; ಸರ್ಕಾರದ ವಿರುದ್ಧ ದಂಗೆ ಏಳುವುದೂ ಅನಿವಾರ್ಯ ಎಂದ ಪ್ರತಿಪಕ್ಷ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಪ್ರಯಾಣ ದರ ಏರಿಕೆಯ ಸರ್ಕಾರದ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ್, ಬೆಲೆ ಏರಿಕೆ ಮಾಡುವ ಮೂಲಕ ಸಿದ್ದರಾಮಯ್ಯ ಸರ್ಕಾರವು ಕನ್ನಡಿಗರ ರಕ್ತ ಹೀರುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಸಂಪುಟದ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿ ಸಾಮಾಜಿಕ ಜಾಲತಾಣ 'X'ನಲ್ಲಿ ಪೋಸ್ಟ್ ಹಾಕಿರುವ ಅಶೋಕ್, ಅಧಿಕಾರಕ್ಕೆ ಬಂದ ದಿನದಿಂದ ಬೆಲೆ ಏರಿಕೆ, ತೆರಿಗೆ ಹೆಚ್ಚಳ ಅಂತ ಒಂದಲ್ಲ ಒಂದು ರೀತಿ ಜನ ಸಾಮಾನ್ಯರ ಸುಲಿಗೆ ಮಾಡುತ್ತಿರುವ ರಾಜ್ಯದ ಕಾಂಗ್ರೆಸ್ ಸರ್ಕಾರ ಈಗ ಬಸ್ ದರ 15% ಏರಿಕೆ ಮಾಡಿದೆ ಎಂದು ಟೀಕಿಸಿದ್ದಾರೆ. ದಿನಬೆಳಗಾದರೆ ಒಂದಲ್ಲ ಒಂದು ಬೆಲೆ ಏರಿಕೆ ಮಾಡಿ ಕನ್ನಡಿಗರ ರಕ್ತ ಹೀರುತ್ತಿದ್ದೀರಲ್ಲ ನಿಮ್ಮ ಸರ್ಕಾರದ ಬಕಾಸುರ ಹೊಟ್ಟೆ ತುಂಬಿಸಲು ಕನ್ನಡಿಗರು ಇನ್ನೆಷ್ಟು ತೆರಿಗೆ, ಶುಲ್ಕ ತೆತ್ತಬೇಕು? ಎಂದು ಅಶೋಕ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ. ಅಸಮರ್ಥ ಸಿಎಂ ಸಿದ್ದರಾಮಯ್ಯ ಅವರ ದುರಾಡಳಿತದಲ್ಲಿ ಪೆಟ್ರೋಲ್ ಡೀಸೆಲ್ ದರ ಏರಿಕೆ ಅನಿವಾರ್ಯ, ಆಸ್ತಿ ತೆರಿಗೆ ಏರಿಕೆ ಅನಿವಾರ್...
KSRTCಗೆ ಮತ್ತೆ 9 ರಾಷ್ಟ್ರೀಯ ಮಟ್ಟದ ಪ್ರಶಸ್ತಿಗಳು

KSRTCಗೆ ಮತ್ತೆ 9 ರಾಷ್ಟ್ರೀಯ ಮಟ್ಟದ ಪ್ರಶಸ್ತಿಗಳು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC)ಗೆ 9 ರಾಷ್ಟ್ರ ಮಟ್ಟದ ಪ್ರಶಸ್ತಿಗಳು ಸಿಕ್ಕಿವೆ. 6 AdWorld Showdown ಚಿನ್ನದ ಪ್ರಶಸ್ತಿ, 2 Grow Care India ಹಾಗೂ 1 PRSI ರಾಷ್ಟ್ರೀಯ ಪ್ರಶಸ್ತಿ-2024ಯನ್ನು KSRTC ಪಡೆದುಕೊಂಡಿದೆ. AdWorld Showdown ಪ್ರಶಸ್ತಿಗಳು : ಅಶ್ವಮೇಧ ಕ್ಲಾಸಿಕ್ ಬಸ್ಸುಗಳ ಪರಿಚಯ- ಪರಿಣಾಮಕಾರಿ ಸಾರ್ವಜನಿಕ ಸಂಪರ್ಕ ಉಪಕ್ರಮ ಅಂಬಾರಿ ಉತ್ಸವ ಬಸ್ ಅತ್ಯುತ್ತಮ ಬ್ರಾಂಡ್ ಅನುಭವ. ಅಶ್ವಮೇಧ ಕ್ಲಾಸಿಕ್ ಬಸ್ಸುಗಳು- ಅತ್ಯುತ್ತಮ ಕಾರ್ಪೊರೇಟ್ ಸಂವಹನ ಹಾಗೂ ನಿರ್ವಹಣೆ ಪಲ್ಲಕ್ಕಿ ಬಸ್ಸುಗಳ -ಅತ್ಯುತ್ತಮ ಗ್ರಾಹಕ ಸ್ವೀಕೃತಿ ಪ್ರತಿಷ್ಠಿತ ಬಸ್ಸು ಸೇವೆಗಳ ಬ್ರಾಂಡಿಂಗ್- ಅತ್ಯುತ್ತಮ ಸಾರ್ವಜನಿಕ ಸಂಪರ್ಕ ಅಶ್ವಮೇಧ ಕ್ಲಾಸಿಕ್ ಬಸ್ಸುಗಳು- ವರ್ಷದ ಅತ್ಯುತ್ತಮ ಬ್ರ್ಯಾಂಡ್ ನಿಗಮವು ಅತ್ಯುತ್ತಮ ಪರಿಸರ ನಿರ್ವಹಣೆ ಹಾಗೂ ವಿನೂತನ ಮಾನವ ಸಂಪನ್ಮೂಲ ಯೋಜನೆಗಳ ಅನುಷ್ಟಾನಕ್ಕಾಗಿ ಗ್ರೋ ಕೇರ್ ಇಂಡಿಯಾ ಪ್ರಶಸ್ತಿ ಎರಡು ವಿಭಾಗದಲ್ಲಿ ಪಡೆದಿದೆ. PRSI ರಾಷ್ಟ್ರೀಯ ಪ್ರಶಸ್ತಿಯನ್ನು ನಿಗಮಕ್ಕೆ ಕಾರ್ಪೋರೇಟ್ ಚಿತ್ರ ವಿಭಾಗದಲ್ಲಿ ಲಭಿಸಿದೆ. ನಿ...