Wednesday, March 18

Tag: Mangalore Car Street Vira Venkatesh temple Chaturmasa

ಮಂಗಳೂರು ಶಾರದೋತ್ಸವ ರಥೋತ್ಸವ ಹಿಂದೆಂದಿಗಿಂತ ವಿಶೇಷ.. ಹೀಗಿತ್ತು ಕೈಂಕರ್ಯ..

ಮಂಗಳೂರು ಶಾರದೋತ್ಸವ ರಥೋತ್ಸವ ಹಿಂದೆಂದಿಗಿಂತ ವಿಶೇಷ.. ಹೀಗಿತ್ತು ಕೈಂಕರ್ಯ..

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಚಿತ್ರ: ಮಂಜು ನೀರೇಶ್ವಾಲ್ಯಮಂಗಳೂರು: ಮಂಗಳೂರು ಶ್ರೀ ವೆಂಕಟರಮಣ ದೇವಾಲಯ ಆಚಾರ್ಯ ಮಠ ವಠಾರದ 102ನೇ ಶ್ರೀ ಶಾರದಾ ಮಹೋತ್ಸವ ಕಾರ್ಯಕ್ರಮ ಆಕ್ಟೋಬರ್ 8ರಿಂದ ಆರಂಭಗೊಂಡು 14 ರಂದು ಅತ್ಯಂತ ವೈಭವಯುತವಾಗಿ ನಡೆಯಿತು.2 ವರ್ಷದ ಹಿಂದಷ್ಟೇ ನೂರನೇ ವರ್ಷದ ಶಾರದಾ ಮಹೋತ್ಸವವನ್ನು ಶ್ರೀ ಶಾರದಾ ಮಹೋತ್ಸವ ಸಮಿತಿ ಅತ್ಯಂತ ವೈಭವಪೂರ್ಣವಾಗಿ ನಡೆಸಿತ್ತು. ಅದೇ ರೀತಿ ಸಂಭ್ರಮದಿಂದ ಈ ಮಹೋತ್ಸವನ್ನು ಶ್ರಧ್ಧ ಭಕ್ತಿಯಿಂದ ನಡೆಸಿಕೊಂಡು ಬರಲಾಗುತ್ತಿದೆ. ಮಂಗಳೂರು ನಗರ ಹಾಗೂ ಪರವೂರಿನ ಭಕ್ತಾದಿಗಳು ಸಹಾಯ ನೀಡಿ ಕಾರ್ಯಕ್ರಮವನ್ನು ಯಶಸ್ಸಿಗೊಳಿಸುತ್ತಿದ್ದಾರೆ.ಆ.9ರಂದು ಬೆಳಗ್ಗೆ 7 ಗಂಟೆಗೆ ಪ್ರತಿಷ್ಠಾಪನೆ ವೈದಿಕ ವಿಧಿ ವಿಧಾನಗಳೊಂದಿಗೆ ಶ್ರೀ ಮಾತೆಯ ವಿಗ್ರಹ ಪ್ರತಿಷ್ಠಾಪಿಸಲಾಯಿತು . ಆ 13ವರೆಗೆ ದೀಪಾಂಲಕಾರ ಸಹಿತ ರಂಗಪೂಜೆ ನಡೆಯಿತು . ಆ13ರಂದು ಶ್ರೀ ಕಾಳಿಕಾ ದೇವಿಯ ವಿಶೇಷ ಅಲಂಕಾರ ಮಾಡಲಾಯಿತು. ಬೆಳಗ್ಗೆ 10 ಘಂಟೆಗೆ ವಿದ್ಯಾರಂಭ ಕಾರ್ಯಕ್ರಮ ನಡೆದು, ಸಾರ್ವಜನಿಕ ಅನ್ನ ಸಂತರ್ಪಣೆಯೂ ನೆರವೇರಿತು. ಸಂಜೆ 6 ಗಂಟೆಗೆ ವಿಶೇಷ ದೀಪಾಲಂಕಾರ ಸೇವೆ ಜರಾಗಿದ್ದು ಸಹಸ್ರಾರು ಭಜಕರು ಪಾಲ್ಗೊಂಡು ಪುನೀತರಾದರು...