ಮಂಗಳೂರು ಶಾರದೋತ್ಸವ ರಥೋತ್ಸವ ಹಿಂದೆಂದಿಗಿಂತ ವಿಶೇಷ.. ಹೀಗಿತ್ತು ಕೈಂಕರ್ಯ..
ಚಿತ್ರ: ಮಂಜು ನೀರೇಶ್ವಾಲ್ಯ
ಮಂಗಳೂರು: ಮಂಗಳೂರು ಶ್ರೀ ವೆಂಕಟರಮಣ ದೇವಾಲಯ ಆಚಾರ್ಯ ಮಠ ವಠಾರದ 102ನೇ ಶ್ರೀ ಶಾರದಾ ಮಹೋತ್ಸವ ಕಾರ್ಯಕ್ರಮ ಆಕ್ಟೋಬರ್ 8ರಿಂದ ಆರಂಭಗೊಂಡು 14 ರಂದು ಅತ್ಯಂತ ವೈಭವಯುತವಾಗಿ ನಡೆಯಿತು.
2 ವರ್ಷದ ಹಿಂದಷ್ಟೇ ನೂರನೇ ವರ್ಷದ ಶಾರದಾ ಮಹೋತ್ಸವವನ್ನು ಶ್ರೀ ಶಾರದಾ ಮಹೋತ್ಸವ ಸಮಿತಿ ಅತ್ಯಂತ ವೈಭವಪೂರ್ಣವಾಗಿ ನಡೆಸಿತ್ತು. ಅದೇ ರೀತಿ ಸಂಭ್ರಮದಿಂದ ಈ ಮಹೋತ್ಸವನ್ನು ಶ್ರಧ್ಧ ಭಕ್ತಿಯಿಂದ ನಡೆಸಿಕೊಂಡು ಬರಲಾಗುತ್ತಿದೆ.
ಮಂಗಳೂರು ನಗರ ಹಾಗೂ ಪರವೂರಿನ ಭಕ್ತಾದಿಗಳು ಸಹಾಯ ನೀಡಿ ಕಾರ್ಯಕ್ರಮವನ್ನು ಯಶಸ್ಸಿಗೊಳಿಸುತ್ತಿದ್ದಾರೆ.
ಆ.9ರಂದು ಬೆಳಗ್ಗೆ 7 ಗಂಟೆಗೆ ಪ್ರತಿಷ್ಠಾಪನೆ ವೈದಿಕ ವಿಧಿ ವಿಧಾನಗಳೊಂದಿಗೆ ಶ್ರೀ ಮಾತೆಯ ವಿಗ್ರಹ ಪ್ರತಿಷ್ಠಾಪಿಸಲಾಯಿತು . ಆ 13ವರೆಗೆ ದೀಪಾಂಲಕಾರ ಸಹಿತ ರಂಗಪೂಜೆ ನಡೆಯಿತು . ಆ13ರಂದು ಶ್ರೀ ಕಾಳಿಕಾ ದೇವಿಯ ವಿಶೇಷ ಅಲಂಕಾರ ಮಾಡಲಾಯಿತು. ಬೆಳಗ್ಗೆ 10 ಘಂಟೆಗೆ ವಿದ್ಯಾರಂಭ ಕಾರ್ಯಕ್ರಮ ನಡೆದು, ಸಾರ್ವಜನಿಕ ಅನ್ನ ಸಂತರ್ಪಣೆಯೂ ನೆರವೇರಿತು. ಸಂಜೆ 6 ಗಂಟೆಗೆ ವಿಶೇಷ ದೀಪಾಲಂಕಾರ ಸೇವೆ ಜರಾಗಿದ್ದು ಸಹಸ್ರಾರು ಭಜಕರು ಪಾಲ್ಗೊಂಡು ಪುನೀತರಾದರು...