Sunday, March 15

Tag: Micro Finance case

ಮೈಕ್ರೋ ಫೈನಾನ್ಸ್‌ ಹಾವಳಿಗೆ ಮತ್ತಷ್ಟು ಬಲಿ; ನ್ಯಾಯಾಂಗ ತನಿಖೆಗೆ ಬಿಜೆಪಿ ಆಗ್ರಹ

ಮೈಕ್ರೋ ಫೈನಾನ್ಸ್‌ ಹಾವಳಿಗೆ ಮತ್ತಷ್ಟು ಬಲಿ; ನ್ಯಾಯಾಂಗ ತನಿಖೆಗೆ ಬಿಜೆಪಿ ಆಗ್ರಹ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮಂಡ್ಯ: ಮೈಕ್ರೋ ಫೈನಾನ್ಸ್‌ಗಳ ಕಿರುಕುಳದಿಂದಾಗಿ ಬಡಜನರು ಸಾಯುತ್ತಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಣ್ಣು ತೆರೆದಿಲ್ಲ. ಮೈಕ್ರೋ ಫೈನಾನ್ಸ್‌ನಿಂದ ಸತ್ತವರಿಗೆ ನ್ಯಾಯ ನೀಡಲು ನ್ಯಾಯಾಂಗ ತನಿಖೆ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ.ಮಂಡ್ಯದ ಕೊನ್ನಾಪುರ ಗ್ರಾಮದಲ್ಲಿ, ಮೈಕ್ರೋ ಫೈನಾನ್ಸ್‌ನ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾದ ತಾಯಿ ಮತ್ತು ಮಗನ ಕುಟುಂಬಕ್ಕೆ ಆರ್‌.ಅಶೋಕ ಭೇಟಿ ನೀಡಿ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸುಗ್ರೀವಾಜ್ಞೆ ತರುತ್ತೇವೆಂದು ಹೇಳಿ ಒಂದು ತಿಂಗಳು ಕಳೆದಿದೆ. ಮಂಡ್ಯ ಜಿಲ್ಲೆಯಲ್ಲಿ ದಲಿತರ ಪ್ರದೇಶದಲ್ಲಿ ಆರು ಮಂದಿ ಊರು ಬಿಟ್ಟು ಹೋಗಿದ್ದಾರೆ. ರಾಜ್ಯದಲ್ಲಿ ಲಕ್ಷಾಂತರ ಜನರು ಓಡಿಹೋಗಿರಬಹುದು. ಸರ್ಕಾರ ಸುಗ್ರೀವಾಜ್ಞೆ ತರಲಿಲ್ಲ, ಸಾವುಗಳು ನಿಲ್ಲಲಿಲ್ಲ ಎಂದು ದೂರಿದರು.ಕೊನ್ನಾಪುರದಲ್ಲಿ ತಾಯಿ ಪ್ರೇಮಾ ಮತ್ತು ಮಗ ರಂಜಿತ್‌ ಮೈಕ್ರೋ ಫೈನಾನ್ಸ್‌ನ ಸಾಲ ತೀರಿಸಲಾಗದೆ ಕೊನ್ನಾಪುರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಡವರ ಪರ ಎಂದು ಹೇಳುವ ಸಿ...