Tuesday, June 24

Tag: minister ramalinga reddy

BMTCಯಲ್ಲಿ ಸಾರಿಗೆ ಆಶಾಕಿರಣ ; 28100 ನೌಕರರ ಕಣ್ಣಿನ ತಪಾಸಣೆ,  ಉಚಿತ ಕನ್ನಡಕ ವಿತರಣೆ.. ಮೃತ ನೌಕರರ ಅವಲಂಬಿತರಿಗೆ ಪರಿಹಾರದ‌ ಚೆಕ್..

BMTCಯಲ್ಲಿ ಸಾರಿಗೆ ಆಶಾಕಿರಣ ; 28100 ನೌಕರರ ಕಣ್ಣಿನ ತಪಾಸಣೆ, ಉಚಿತ ಕನ್ನಡಕ ವಿತರಣೆ.. ಮೃತ ನೌಕರರ ಅವಲಂಬಿತರಿಗೆ ಪರಿಹಾರದ‌ ಚೆಕ್..

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬಿಎಂಟಿಸಿ‌ಯಲ್ಲಿ ಸಾರಿಗೆ ಆಶಾಕಿರಣ ಯೋಜನೆಯಡಿ 28100 ನೌಕರರ ಕಣ್ಣಿನ ತಪಾಸಣೆ, ಉಚಿತ ಕನ್ನಡಕ ವಿತರಣೆ ಮತ್ತು ಮೃತ ನೌಕರರ ಅವಲಂಬಿತರಿಗೆ ಪರಿಹಾರದ‌ ಚೆಕ್ ವಿತರಣೆ ಮಾಡಲಾಗಿದೆ. ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ನಡೆದಿದೆ ಎಂದು ಬಿಎಂಟಿಸಿ ತಿಳಿಸಿದೆ. BMTCಯು ಸಿ-ಕ್ಯಾಂಪ್ ಸಹಯೋಗದಲ್ಲಿ ನೌಕರರ ಆರೋಗ್ಯದ ಹಿತದೃಷ್ಟಿಯಿಂದ 50 ಘಟಕಗಳಲ್ಲಿ ಹಾಗೂ 4 ಕಾರ್ಯಾಗಾರಗಳಲ್ಲಿ ಉಚಿತ ಕಣ್ಣಿನ ತಪಾಸಣೆ ಶಿಬಿರ ಏರ್ಪಡಿಸಿದ್ದು, ರಾಮಲಿಂಗಾರೆಡ್ಡಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ತಪಾಸಣೆಗೆ ಒಳಪಡುವ ನೌಕರರಿಗೆ ಉಚಿತ ಕನ್ನಡಕ ವಿತರಣೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಅಪಘಾತದಲ್ಲಿ ಮೃತಪಟ್ಟ ಸಿಬ್ಬಂದಿಯ ಅವಲಂಬಿತರಿಗೆ 50 ಲಕ್ಷ ರೂ ಹಾಗೂ ಅಪಘಾತ ಹೊರತುಪಡಿಸಿ ಇತರೆ ಕಾರಣಗಳಿಂದಾಗಿ ಅಕಾಲಿಕ ಮರಣ ಹೊಂದಿದ ನೌಕರರ ಅವಲಂಬಿತರಿಗೆ 10 ಲಕ್ಷ ರೂ ನೀಡಲಾಗುತ್ತಿದೆ ಎಂದರು. 2024ರ ಫೆಬ್ರವರಿ–2025ರ ಏಪ್ರಿಲ್ ವರೆಗೆ 107 ನೌಕರರ ಕುಟುಂಬಗಳಿಗೆ ರೂ. 7.3 ಕೋಟಿ ಪರಿಹಾರ ಪಾವತಿ ಮಾಡಲಾಗಿದೆ ಎಂದವರು ವಿವರಿಸ...
ಮತ್ತಷ್ಟು ‘ಶಕ್ತಿ’: KSRTCಗೆ ಶೀಘ್ರವೇ 2,000 ಬಸ್ ಖರೀದಿ, ಸಚಿವ ರಾಮಲಿಂಗ ರೆಡ್ಡಿ ಘೋಷಣೆ

ಮತ್ತಷ್ಟು ‘ಶಕ್ತಿ’: KSRTCಗೆ ಶೀಘ್ರವೇ 2,000 ಬಸ್ ಖರೀದಿ, ಸಚಿವ ರಾಮಲಿಂಗ ರೆಡ್ಡಿ ಘೋಷಣೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯಸರ್ಕಾರದ 'ಶಕ್ತಿ' ಗ್ಯಾರೆಂಟಿ ಯೋಜನೆ ಮಹಿಳೆಯರ ಪಾಲಿಗೆ ವರದಾನವಾಗಿದೆ. ಇದೀಗ ಈ 'ಗ್ಯಾರೆಂಟಿ' ಯೋಜನೆಯನ್ನು ಮತ್ತಷ್ಟು ವರದಾನವಾಗಿಸುವ ನಿಟ್ಟಿನಲ್ಲಿ KSRTC ಮಹತ್ವದ ಹೆಜ್ಜೆ ಇಟ್ಟಿದೆ. ಶಕ್ತಿ ಯೋಜನೆಯ ಫಲಾನುಭವಿ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಶೀಘ್ರವೇ 2,000 ಬಸ್ ಗಳನ್ನು ಖರೀದಿ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಸಾರಿಗೆ ಸೌಲಭ್ಯ ಹೆಚ್ಚಿಸಲು ಹೊಸದಾಗಿ 2 ಸಾವಿರ ಬಸ್‌ಗಳನ್ನು ಖರೀದಿ ಮಾಡಲಾಗುತ್ತಿದೆ. ಶಕ್ತಿ ಯೋಜನೆಯ ಪರಿಣಾಮ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರ ಸಂಚಾರ ಹೆಚ್ಚಾಗಿದೆ. ಹೀಗಾಗಿ ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ಶೀಘ್ರವೇ ಬಸ್‌ಗಳ ಖರೀದಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಮಾಹಿತಿ ಹಂಚಿಕೊಂಡಿದ್ದಾರೆ. ಸಾರಿಗೆ ಸೌಲಭ್ಯ ಹೆಚ್ಚಿಸಲು ಹೊಸದಾಗಿ 2 ಸಾವಿರ ಬಸ್‌ಗಳನ್ನು ಖರೀದಿ ಮಾಡಲಾಗುತ್ತಿದೆ. ಶಕ್ತಿ ಯೋಜನೆಯ ಪರಿಣಾಮ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರ ಸಂಚಾರ ಹೆಚ್ಚಾಗಿದೆ. ಹೀಗಾಗಿ ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ಶೀಘ್ರವೇ ಬಸ್‌ಗಳ ಖರೀದಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚ...
‘ಶಕ್ತಿ’ ಗ್ಯಾರೆಂಟಿ ಜೊತೆಗೆ KSRTCಗೆ 2,000 ಹೊಸ ಬಸ್‌; ‘ನುಡಿದಂತೆ ನಡೆದ ಸಿಎಂ’ ಎಂದ ರಾಮಲಿಂಗ ರೆಡ್ಡಿ

‘ಶಕ್ತಿ’ ಗ್ಯಾರೆಂಟಿ ಜೊತೆಗೆ KSRTCಗೆ 2,000 ಹೊಸ ಬಸ್‌; ‘ನುಡಿದಂತೆ ನಡೆದ ಸಿಎಂ’ ಎಂದ ರಾಮಲಿಂಗ ರೆಡ್ಡಿ

Others
ಬೆಂಗಳೂರು: ಶಕ್ತಿ ಯೋಜನೆ ಎಂಬುದು ಮಹಿಳಾ ಸಬಲೀಕರಣದೆಡೆಗಿನ ನಮ್ಮ ಸರ್ಕಾರದ ದಿಟ್ಟ ಹೆಜ್ಜೆಯಾಗಿದ್ದು, 2,000 ಹೊಸ ಬಸ್‌ಗಳ ಖರೀದಿ ಗೆ ಸರ್ಕಾರದ ಅನುಮತಿ ಸಿಕ್ಕಿದೆ. ಜೊತೆಗೆ ಸರ್ಕಾರದಿಂದ ಅನುದಾನ ಸಿಕ್ಕಿದ್ದು ಸಿಎಂ ಸಿದ್ದರಾಮಯ್ಯ ಅವರು ನುಡಿದಂತೆ ನಡೆಡಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಬಣ್ಣಿಸಿದ್ದಾರೆ. ಶಕ್ತಿ ಯೋಜನೆಯಿಂದಾಗಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ದಿನನಿತ್ಯ ಪ್ರಯಾಣಿಸುವವರ ಸಂಖ್ಯೆ ಲಕ್ಷಗಳಿಂದ ಕೋಟಿಗೆ ದಾಟಿದೆ. ಹಿಂದಿನ ಸರ್ಕಾರದಲ್ಲಿ ಸಾರಿಗೆ ಸಂಸ್ಥೆಗಳಲ್ಲಿ ಹೊಸ ಬಸ್ಸುಗಳ ಸೇರ್ಪಡೆಯಾಗಿರಲಿಲ್ಲ. ಹೊಸ ನೇಮಕಾತಿ ಕೂಡ ಸ್ಥಗಿತಗೊಂಡಿದ್ದರಿಂದ ಸಾರಿಗೆ ಸಂಸ್ಥೆಗಳು ತತ್ತರಿಸಿ ಹೋಗಿದ್ದ ಆ ಸಮಯದಲ್ಲಿ, ಶಕ್ತಿ ಯೋಜನೆ ಅನುಷ್ಠಾನ ಸುಲಭದ ಮಾತಾಗಿರಲಿಲ್ಲ, ನಿಜಕ್ಕೂ ಸವಾಲಾಗಿತ್ತು. ಆ ಸಮಯದಲ್ಲಿ ನಮ್ಮ ಸರ್ಕಾರವು 5800 ಹೊಸ ಬಸ್ಸುಗಳ ಸೇರ್ಪಡೆಗೆ ಹಾಗೂ 9000 ಹೊಸ ನೇಮಕಾತಿಗೆ ಅನುಮತಿ ಮತ್ತು 1000 ಅನುಕಂಪದ ಆಧಾರದ ನೇಮಕಾತಿಗಳು, ಈ ಸವಾಲನ್ನು ಸಕಾರಾತ್ಮಕವಾಗಿ ಎದುರಿಸಿ, ಪ್ರಯಾಣಿಕರಿಗೆ ಉತ್ತಮ ಸಾರಿಗೆ ಸೌಲಭ್ಯ ಒದಗಿಸಲು ಸಹಕಾರಿಯಾಯಿತು ಎ...
ಕಂಡಕ್ಟರ್ ವಿರುದ್ಧ ಸುಳ್ಳು ಪೋಕ್ಸೋ ಕೇಸ್: ಸಚಿವ ರಾಮಲಿಂಗ ರೆಡ್ಡಿ ಗರಂ; KSRTC ಸಿಬ್ಬಂದಿ ರಕ್ಷಣೆಗೆ ನಾನಿದ್ದೇನೆ ಎಂದ ಸಾರಿಗೆ ಮಂತ್ರಿ..

ಕಂಡಕ್ಟರ್ ವಿರುದ್ಧ ಸುಳ್ಳು ಪೋಕ್ಸೋ ಕೇಸ್: ಸಚಿವ ರಾಮಲಿಂಗ ರೆಡ್ಡಿ ಗರಂ; KSRTC ಸಿಬ್ಬಂದಿ ರಕ್ಷಣೆಗೆ ನಾನಿದ್ದೇನೆ ಎಂದ ಸಾರಿಗೆ ಮಂತ್ರಿ..

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ (KSRTC) ಕಂಡಕ್ಟರ್ ವಿರುದ್ಧ ವಿರುದ್ಧ ದಾಖಲಾಗಿರುವ ಪ್ರಕರಣ ಸತ್ಯಕ್ಕೆ ದೂರವಾದದ್ದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. KSRTC ನೌಕರರ ಪರವಾಗಿ ನಿಂತಿರುವ ಸಚಿವರು, ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳನ್ನು ರಾಜ್ಯದಿಂದ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಬೆಳಗಾವಿಯಲ್ಲಿ KSRTC ಸಿಬ್ಬಂದಿ ಮೇಲಿನ ದಾಳಿ ಹಾಗೂ ನಿರ್ವಾಹಕರ ವಿರುದ್ಧ ದಾಖಲಾಗಿರುವ ಪ್ರಕರಣ ಬಗ್ಗೆ ಕಳವಳ ವ್ಯಕತಪಡಿಸಿರುವ ಸಚಿವ ರಾಮಲಿಂಗ ರೆಡ್ಡಿ. ಕಂಡಕ್ಟರ್ ವಿರುದ್ಧದ ಪೋಕ್ಸೊ ಆರೋಪಗಳು ಸುಳ್ಳು ಎಂದು ಹೇಳಿದರು. ಈ ಸುದ್ದಿಯನ್ನು 'UDAYA NEWS -ಇಂಗ್ಲೀಷ್' ಆವೃತ್ತಿಯಲ್ಲೂ ಓದಿ..  Case against RTC conductor is bogus: K’taka Transport Minister ಪ್ರಯಾಣಿಕರ ಗುಂಪೊಂದು ಕನ್ನಡದಲ್ಲಿ ಮಾತನಾಡಲು ಕೇಳಿದ್ದಕ್ಕಾಗಿ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿತ್ತು. ಘಟನೆಗೆ ಸಂಬಂಧಿಸಿದಂತೆ ಕಂಡಕ್ಟರ್ ಪೊಲೀಸ್ ದೂರು ದಾಖಲಿಸಿದ್ದರೆ, ಅಪ್ರಾಪ್ತ ಬಾಲಕಿ ಕಂಡಕ್ಟರ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿದ್ದರು. ಘಟನೆಯ ನಂತರ, ಅವರು...
BJPಯವರಿಂದ 5900 ಕೋ.ರೂ.ಸಾಲದ ಹೊರೆ, ಹಾಗಾಗಿ ಬಸ್ ಟಿಕೆಟ್ ದರ ಹೆಚ್ಚಳ; ರಾಮಲಿಂಗ ರೆಡ್ಡಿ ಎದಿರೇಟು

BJPಯವರಿಂದ 5900 ಕೋ.ರೂ.ಸಾಲದ ಹೊರೆ, ಹಾಗಾಗಿ ಬಸ್ ಟಿಕೆಟ್ ದರ ಹೆಚ್ಚಳ; ರಾಮಲಿಂಗ ರೆಡ್ಡಿ ಎದಿರೇಟು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬಸ್ ದರ ಹೆಚ್ಚಳ ಖಂಡಿಸಿ, ಬಿಜೆಪಿಯವರು ಪ್ರತಿಭಟನೆ ಮಾಡಿ ಬಹಳ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಜನರನ್ನು ಹಾಗೂ ಅಭಿವೃದ್ಧಿಯನ್ನು ಮರೆತಿದ್ದರು ಎಂದು ಬೊಟ್ಟು ಮಾಡಿರುವ ರಾಮಲಿಂಗಾ ರೆಡ್ಡಿ, ಕೇಂದ್ರ ಸರ್ಕಾರದಲ್ಲಿರುವ ಬಿಜೆಪಿ ಡಾಲರ್ ಬೆಲೆ ಕಡಿಮೆಯಾದರೂ ಪೆಟ್ರೋಲ್ ಡೀಸೆಲ್ ಬೆಲೆ ಕಳೆದ 9 ವರ್ಷಗಳಿಂದ ಕಡಿಮೆ ಮಾಡಿಲ್ಲ ಹಾಗೂ ಇದೇ ಬಿಜೆಪಿ ತಾನು ಆಡಳಿತದಲ್ಲಿದ್ದಾಗ 2020ರಲ್ಲಿ ಬಸ್ ದರ ಹೆಚ್ಚಳ ಮಾಡಿದ್ದರು ಎಂದು ಗಮನಸೆಳೆದಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ 'X'ನಲ್ಲಿ ಪೋಸ್ಟ್ ಹಾಕಿರುವ ರಾಮಲಿಂಗಾ ರೆಡ್ಡಿ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ದರ ಹೆಚ್ಚಳ ಮಾಡಿದಾಗ ಅವರಿಗೆ ಜನರ ತೊಂದರೆ ತಿಳಿಯಲಿಲ್ಲವೇ? ಎಂದು ಎದಿರೇಟು ನೀಡಿದ್ದಾರೆ. ಬಡಜನರ ಗ್ಯಾಸ್ ಸಬ್ಸಿಡಿಯನ್ನು ನಿಲ್ಲಿಸಿದರು ಆಗ ಬಿಜೆಪಿ ಅವರಿಗೆ ಜನರ ಕಷ್ಟ ತಿಳಿಯಲಿಲ್ಲವೆ? ಅಧಿಕಾರದಲ್ಲಿದ್ದಾಗ ಒಳ್ಳೆ ಆಡಳಿತ ನೀಡಿ ನಾಲಕ್ಕು ನಿಗಮಗಳನ್ನು ಅಭಿವೃದ್ಧಿ ಮಾಡಲು ಪ್ರಯತ್ನಿಸಿದ್ದರೆ ಈ ತೊಂದರೆ ನಮಗೆ ಬರುತ್ತ...
‘ಶಕ್ತಿ’ ಫೈಟ್..! ಸಾಮ್ರಾಟ್ ಟ್ವೀಟ್‌ಗೆ ರಾಮಲಿಂಗಾ ರೆಡ್ಡಿ ಗರಂ; ಬಹಿರಂಗ ಚರ್ಚೆಗೆ ಪಂಥಾಹ್ವಾನ..

‘ಶಕ್ತಿ’ ಫೈಟ್..! ಸಾಮ್ರಾಟ್ ಟ್ವೀಟ್‌ಗೆ ರಾಮಲಿಂಗಾ ರೆಡ್ಡಿ ಗರಂ; ಬಹಿರಂಗ ಚರ್ಚೆಗೆ ಪಂಥಾಹ್ವಾನ..

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: 'ಶಕ್ತಿ' ಗ್ಯಾರೆಂಟಿ ಯೋಜನೆ ವಿಚಾರ ಮುಂದಿಟ್ಟು ಸರ್ಕಾರದ ವಿರುದ್ದ ಪ್ರತಿಪಕ್ಷ ಬಿಜೆಪಿ ನಾಯಕರು ಟೀಕಾಸ್ತ್ರ ಪ್ರಯೋಗಿಸುತ್ತಿದ್ದಾರೆ. ಅದರಲ್ಲೂ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರು ಸಾಮಾಜಿಕ ಜಾಲತಾಣ 'X'ನಲ್ಲಿ ಹಾಕಿರುವ ಪೋಸ್ಟ್ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಕೆಂಡಾ ಮಂಡಲರಾಗಿದ್ದಾರೆ.‌ ಅಶೋಕ್ ಹೇಳಿಕೆ ಬಗ್ಗೆ ಆಕ್ರೋಶ ಹೊರಹಾಕಿರುವ ಸಚಿವ ರಾಮಲಿಂಗಾ ರೆಡ್ಡಿ, ಟ್ವೀಟ್ ಬಿಟ್ಟು ಬಹಿರಂಗ ಚರ್ಚೆಗೆ ಬರುವಂತೆ ಪಂಥಾಹ್ವಾನ ನೀಡಿದ್ದಾರೆ‌ ಈ ಕುರಿತಂತೆ ರಾಮಲಿಂಗ ರೆಡ್ಡಿ ಸಾಮಾಜಿಕ ಜಾಲತಾಣ 'X'ನಲ್ಲಿ ಎದಿರೇಟು ಎಂಬಂತೆ ಹಾಕಿರುವ ಪೋಸ್ಟ್ ಗಮನಸೆಳೆದಿದೆ. 'ಶಕ್ತಿ' ಯೋಜನೆ ಕುರಿತಂತೆ ಅಂಕಿ ಅಂಶಗಳನ್ನು ಮುಂದಿಟ್ಟಿರುವ ಅವರು, ಮೊಣಚು ಮಾತುಗಳಿಂದ ತಿವಿದಿದ್ದಾರೆ. ತಮಗೆ ಹಾಗೂ ತಮ್ಮ ಪಕ್ಷದವರಿಗೆ ಟ್ಟೀಟ್ ಮಾಡುವುದನ್ನು ಬಿಟ್ಟರೆ ಬೇರೇನೂ ಗೊತ್ತಿಲ್ಲ ಎಂಬುದನ್ನು ಜಗಜಾಹ್ಹೀರು ಮಾಡಿದ್ದೀರಿ ಎಂದು ಅಶೋಕ್ ಅವರನ್ನು ತರಾಟೆಗೆ ತೆಗೆದುಕೊಂಡಿರುವ ರಾಮಲಿಂಗ ರೆಡ್ಡಿ, ಶಕ್ತಿ ಯೋಜನೆಯು ಅಕ್ಷರಶಃ ಸಾರಿಗೆ ನಿಗಮಗಳಿಗೆ ಶಕ್ತಿಯನ್ನು ತುಂಬಿದೆ ಎಂಬುದರಲ್ಲಿ ಎಳ್ಳಷ್...
ರಾಜ್ಯದ ಮುಜರಾಯಿ ದೇಗುಲಗಳಲ್ಲಿ ‘ನಂದಿನಿ ತುಪ್ಪ’ ಮಾತ್ರ ಬಳಕೆ; ಸರ್ಕಾರದ ಕಟ್ಟಪ್ಪಣೆ

ರಾಜ್ಯದ ಮುಜರಾಯಿ ದೇಗುಲಗಳಲ್ಲಿ ‘ನಂದಿನಿ ತುಪ್ಪ’ ಮಾತ್ರ ಬಳಕೆ; ಸರ್ಕಾರದ ಕಟ್ಟಪ್ಪಣೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದ ಮುಜರಾಯಿ ದೇಗುಲಗಳಲ್ಲಿ ನಂದಿನಿ ತುಪ್ಪವನ್ನೇ ಬಳಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಅವರ ಸೂಚನೆಯಂತೆ ಮುಜರಾಯಿ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ತಿರುಪತಿ ದೇಗುಲದ ಪ್ರಸಾದದಲ್ಲಿ ನಕಲಿ ತುಪ್ಪ ಬಳಕೆ ಮಾಡಲಾಗಿತ್ತೆಂಬ ಬಗ್ಗೆ ಭಾರೀ ಚರ್ಚೆ ನಡೆದಿದೆ. ಈ ಹಿನ್ನೆಲೆಯಲ್ಲಿ ಈಗಿನ ಸರ್ಕಾರದ ಸೂಚನೆಯಂತೆ ತಿರುಪತಿ ದೇವಾಲಯವು ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟದ ಉತ್ಪನ್ನವಾಗಿರುವ 'ನಂದಿನಿ ತುಪ್ಪ'ವನ್ನು ಖರೀದಿಸುತ್ತಿದೆ. ಇದೀಗ ರಾಜ್ಯದ ಮುಜರಾಯಿ ದೇಗುಲಗಳಲ್ಲೂ ನಂದಿನಿ ತುಪ್ಪವನ್ನೇ ಬಳಸುವಂತೆ ಕರ್ನಾಟಕ ಸರ್ಕಾರ ಆದೇಶಿಸಿದೆ. ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಅಧಿಸೂಚಿತ ದೇವಾಲಯಗಳಲ್ಲಿ ಸೇವೆಗಳಿಗೆ ಪ್ರಸಾದ ತಯಾರಿಕೆಗೆ ಮತ್ತು ಶುದ್ಧ ನಂದಿನಿ ತುಪ್ಪ ವನ್ನು ಮಾತ್ರ ಬಳಸುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ.‌ ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಸೇವೆಗಳಿಗೆ, ದೀಪಗಳಿಗೆ ಮತ್ತು ಎಲ್ಲಾ ವಿಧದ ಪ್ರಸಾದ ತಯಾರಿಕೆಗೆ ...
ಆಟೋಮೇಟೆಡ್ ಟೆಸ್ಟಿಂಗ್ ಸ್ಟೇಷನ್, ವೆಹಿಕಲ್ ಲೊಕೇಶನ್ ಟ್ರ್ಯಾಕಿಂಗ್ ಸಿಸ್ಟಂ ಶೀಘ್ರ ಜಾರಿ; ಸಾರಿಗೆ ಇಲಾಖೆಯಲ್ಲಿ ತ್ವರಿತ ಕ್ರಮ

ಆಟೋಮೇಟೆಡ್ ಟೆಸ್ಟಿಂಗ್ ಸ್ಟೇಷನ್, ವೆಹಿಕಲ್ ಲೊಕೇಶನ್ ಟ್ರ್ಯಾಕಿಂಗ್ ಸಿಸ್ಟಂ ಶೀಘ್ರ ಜಾರಿ; ಸಾರಿಗೆ ಇಲಾಖೆಯಲ್ಲಿ ತ್ವರಿತ ಕ್ರಮ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯ ಸಾರಿಗೆ ಇಲಾಖೆಯು ಕ್ರಾಂತಿಕಾರಿ ಕ್ರಮಗಳಿಗೆ ಮುನ್ನುಡಿ ಬರೆದಿದೆ. ಆಟೋಮೇಟೆಡ್ ಟೆಸ್ಟಿಂಗ್ ಸ್ಟೇಷನ್‌ಗಳು ಹೊಸ ಆಯಾಮ ನೀಡಲಿದ್ದು, ಜೊತೆಗೆ ವೆಹಿಕಲ್ ಲೊಕೇಶನ್ ಟ್ರ್ಯಾಕಿಂಗ್ ಸಿಸ್ಟಂ ಶೀಘ್ರ ಜಾರಿಯಾಗಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರಿಂದು (28.08.2024) ಸಾರಿಗೆ ಆಯುಕ್ತರ ಕಛೇರಿಯಲ್ಲಿ, ಸಾರಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ, 2024-25ನೇ ಸಾಲಿನ ರಾಜಸ್ವ ಸಂಗ್ರಹಣೆ ಕುರಿತಂತೆ ಮಾಹಿತಿ ಪಡೆದ ಸಚಿವರು ರಾಜಸ್ವ ಸಂಗ್ರಹಣೆಯ ಗುರಿಯನ್ನು ಶೇಕಡ 100 ರಷ್ಟು ಸಾಧಿಸಲು ಪ್ರವರ್ತನ ಚಟುವಟಿಕೆಗಳೂ ಸೇರಿದಂತೆ ಎಲ್ಲಾ ರೀತಿಯ ಅಗತ್ಯ ಕ್ರಮಕೈಗೊಂಡು ಕಾರ್ಯನಿರ್ವಹಿಸಲು ಸೂಚಿಸಿದರು. 2024-25ನೇ ಸಾಲಿನ ರಾಜಸ್ವ ಸಂಗ್ರಹಣೆ ವಿವರ: ವಾರ್ಷಿಕ ರಾಜಸ್ವ ಗುರಿ- ರೂ.13000‌ಕೋಟಿಜುಲೈ 2024ರ ಅಂತ್ಯಕ್ಕೆ ಸಂಗ್ರಹಿಸಬೇಕಾದ ರಾಜಸ್ವ- ರೂ 4325 ಕೋಟಿ. ಜುಲೈ 2024ರ ಅಂತ್ಯಕ್ಕೆ ಸಂಗ್ರಹಿಸಿರುವ ರಾಜಸ್ವ- 3534 ಶೇಕಡಾವಾರು-82% ಸಾರಿಗೆ ಇಲಾಖೆಗೆ ಹೊಸದಾ...
‘ಬಿಜೆಪಿಯವರು ಅಜ್ಞಾನಿಗಳು.. ಆದಾಯ-ಲಾಭದ ವ್ಯತ್ಯಾಸವನ್ನೇ ತಿಳಿಯದವರು’; ರಾಮಲಿಂಗಾ ರೆಡ್ಡಿ ತರಾಟೆ

‘ಬಿಜೆಪಿಯವರು ಅಜ್ಞಾನಿಗಳು.. ಆದಾಯ-ಲಾಭದ ವ್ಯತ್ಯಾಸವನ್ನೇ ತಿಳಿಯದವರು’; ರಾಮಲಿಂಗಾ ರೆಡ್ಡಿ ತರಾಟೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬಿಎಂಟಿಸಿ ಲಾಭದಲ್ಲಿದೆ ಎಂದು ಕಾಂಗ್ರೆಸ್ ಸರ್ಕಾರ ಸುಳ್ಳು ಸುದ್ದಿ ಹಬ್ಬಿಸುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿಯ ಟ್ವೀಟ್‌ಗೆ ತಮ್ಮದೇ ದಾಟಿಯಲ್ಲಿ ಉತ್ತರ ನೀಡೊರುವ ರಾಮಲಿಂಗಾರೆಡ್ಡಿ, 'ಸಾಮಾನ್ಯ ಜ್ಞಾನವೇ ಇಲ್ಲದವರೊಂದಿಗೆ‌ ಪ್ರತಿದಿನ ಅವರು ಮಾಡುವ ಟ್ಟೀಟ್‌ಗಳಿಗೆ ಉತ್ತರ ಕೊಡಬೇಕಾಗಿದೆಯಲ್ಲ ಎಂಬುದು ದುರಂತ. ಆದರೂ ನಮ್ಮ‌ ಜವಾಬ್ದಾರಿಯಿಂದ ನಾವು ನುಳುಚಿಕೊಳ್ಳುವುದಿಲ್ಲ' ಎಂದಿದ್ದಾರೆ. ಕರ್ನಾಟಕ ಸರ್ಕಾರವು 30.09.2000ರಂದು ಹೊರಡಿಸಲಾದ ಸರ್ಕಾರದ ಆದೇಶ ಸಂಖ್ಯೆ ಹೆಚ್‌ಟಿಡಿ/85/ಟಿಆ‌ರ್ಎ/2000 ರ ಅನ್ವಯ ಕರಾರಸಾ ನಿಗಮ ಹಾಗೂ ಇತರೆ ರಾಜ್ಯ ರಸ್ತೆ ಸಾರಿಗೆ ನಿಗಮಗಳು ಡೀಸೆಲ್ ತೈಲದ ಬೆಲೆಯಲ್ಲಿ ಹೆಚ್ಚಳವಾದಾಗ ಮತ್ತು ನೌಕರರಿಗೆ ನೀಡುವ ತುಟ್ಟಿಭತ್ಯೆ ದರಗಳಲ್ಲಿ ಹೆಚ್ಚಳವಾದಾಗ ಪ್ರಯಾಣ ದರಗಳನ್ನು ಸ್ವಯಂಚಾಲಿತ ದರ ಹೊಂದಾಣಿಕೆ ನೀತಿಯಂತೆ ಪರಿಷ್ಕರಿಸಲು ಅನುಮತಿ ನೀಡಿರುತ್ತದೆ ಎಂಬ ಅರಿವು ಕೂಡ ಇವರಿಗೆ ಇಲ್ಲವಲ್ಲ ಎಂದು ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಸಾರಿಗೆ ಸಂಸ್ಥೆಗಳ‌ ಅಭಿವೃದ್ಧಿಯ ಎರಡು ...
‘ಮಾಂಗಲ್ಯ ಭಾಗ್ಯ ಯಶೋಗಾಥೆ; ಸಾಮೂಹಿಕ ಮದುವೆಗಳಿಗೆ ಉತ್ತೇಜನ; ರಾಮಲಿಂಗಾ ರೆಡ್ಡಿ ಮಾಸ್ಟರ್ ಪ್ಲಾನ್

‘ಮಾಂಗಲ್ಯ ಭಾಗ್ಯ ಯಶೋಗಾಥೆ; ಸಾಮೂಹಿಕ ಮದುವೆಗಳಿಗೆ ಉತ್ತೇಜನ; ರಾಮಲಿಂಗಾ ರೆಡ್ಡಿ ಮಾಸ್ಟರ್ ಪ್ಲಾನ್

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮಾಂಗಲ್ಯ ಭಾಗ್ಯ ಯೋಜನೆಯಡಿ ಇಂದು ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ 66 ಜೋಡಿಗಳಿಗೆ ಉಚಿತ ಸಾಮೂಹಿಕ ವಿವಾಹ ಮಹೋತ್ಸವ ಆಯೋಜಿಸಲಾಗಿತ್ತು. ಪ್ರವರ್ಗ 'ಎ' ಮತ್ತು 'ಬಿ' ಅಧಿಸೂಚಿತ ದೇವಾಲಯಗಳಲ್ಲಿ 'ಮಾಂಗಲ್ಯ ಭಾಗ್ಯ' ಯೋಜನೆ ಅಡಿ ಸಾಮೂಹಿಕ ವಿವಾಹ ಸಮಾರಂಭ ಏರ್ಪಡಿಸಲಾಯಿತು. ಈ ಕಾರ್ಯಕ್ರಮ ಮುಜರಾಯಿ ಸಚಿವರಾಮಲಿಂಗಾ ರೆಡ್ಡಿ ಅಧ್ಯಕ್ಷತೆಯಲ್ಲಿ ನಡೆದಿದ್ದು, ಶಾಸಕ ಎಂ.ಆರ್. ಮಂಜುನಾಥ್, ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೇರಿದಂತೆ ಆಧಿಕಾರಿಗಳು ಉಪಸ್ಥಿತರಿದ್ದರು.  ದೇಶಿಕೇಂದ್ರ ಮಹಾಸ್ವಾಮಿ, ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರು ಆಶೀರ್ವಚನವನ್ನು ನೀಡಿದರು. ಈ ಯೋಜನೆಯಡಿಯಲ್ಲಿ ವಧು-ವರರಿಗೆ ರೂ.55,000/-ಗಳ ಪ್ರೋತ್ಸಾಹ ಧನವನ್ನು ಆದಾಯ ಕಡಿಮೆ ಇರುವ ದೇವಾಲಯಗಳ ನಿಧಿಯಿಂದ ಬಳಸಿಕೊಳ್ಳಲಾಗುವುದು. ಆದಾಯ ಕಡಿಮೆ ಇರುವ ದೇವಾಲಯಗಳಲ್ಲಿ ರೂ.55,000/-ಗಳ ಪ್ರೋತ್ಸಾಹ ಧನವನ್ನು ಸಾಮಾನ್ಯ ಸಂಗ್ರಹಣಾ ನಿಧಿಯಿಂದ ನೀಡಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು....