Wednesday, June 25

Tag: Nikhil Kumaraswamy

ಚನ್ನಪಟ್ಟಣ ರಣಾಂಗಣ; ಹೆಚ್‌ಡಿಕೆ ಪೂಜೆಯ ವೇಳೆ ಅಚ್ಚರಿಯ ಸನ್ನಿವೇಶ; ನಿಖಿಲ್ ಗೆಲುವಿನ ಶುಭ ಸೂಚನೆ ಎಂದ ಜೆಡಿಎಸ್ ನಾಯಕರು

ಚನ್ನಪಟ್ಟಣ ರಣಾಂಗಣ; ಹೆಚ್‌ಡಿಕೆ ಪೂಜೆಯ ವೇಳೆ ಅಚ್ಚರಿಯ ಸನ್ನಿವೇಶ; ನಿಖಿಲ್ ಗೆಲುವಿನ ಶುಭ ಸೂಚನೆ ಎಂದ ಜೆಡಿಎಸ್ ನಾಯಕರು

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಹಾಸನ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯು ರಾಜಕೀಯ ಪ್ರತಿಷ್ಠೆಯ ಕಣ ಮಾತ್ರವಲ್ಲ, ನಿಖಿಲ್ ಕುಮಾರಸ್ವಾಮಿಯ ರಾಜಕೀಯ ಭವಿಷ್ಯದ ನಿರ್ಣಯವೂ ಹೌದು. ಹಾಗಾಗಿ ಎನ್‌ಡಿಎ ಮಿತ್ರ ಪಕ್ಷಗಳು ಈ ಚುನಾವಣೆಯಲ್ಲಿ ಗೆಲ್ಲಲು ರಣತಂತ್ರ ರೂಪಿಸುತ್ತಿವೆ. ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ಸಿ.ಪಿ. ಯೋಗೇಶ್ವರ್ ನಡುವೆ ನೇರ ಹಣಾಹಣಿ ಎರ್ಪಟ್ಟಿದ್ದು ಕದನ ಕೌತುಕ ಸೃಷ್ಟಿಸಿದೆ. ಈ ನಡುವೆ ಎಚ್.ಡಿ.ಕುಮಾರಸ್ವಾಮಿ ಕುಟುಂಬ ತಮ್ಮ ಪುತ್ರನ ಗೆಲುವಿಗಾಗಿ ಟೆಂಪಲ್ ರನ್ ಕೈಗೊಂಡಿದ್ದು, ಪೂಜೆಯ ವೇಳೆ ಅಚ್ಚರಿಯ ಪ್ರಸಂಗವೊಂದು ನಡೆದಿದೆ. ದೇವರ ವಿಗ್ರಹದ ಬಲಗಡೆಯಿಂದ ಹೂವು ಬಿದ್ದಿದ್ದು, ಈ ಬಗ್ಗೆ ಬಗೆಬಗೆಯ ಚರ್ಚೆ ಶುರುವಾಗಿದೆ. ಕುಮಾರಸ್ವಾಮಿಯವರು ಭಾನುವಾರ ಪತ್ನಿ ಅನಿತಾ ಹಾಗೂ ಸೊಸೆ, ಮೊಮ್ಮಗು ಜೊತೆಗೆ ಹಾಸನಾಂಬೆ ಜಾತ್ರೆಯಲ್ಲಿ ಭಾಗವಹಿಸಿದರು. ಬಳಿಕ ಸಿದ್ದೇಶ್ವರ ಸ್ವಾಮಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಪೂಜೆ ನೆರವೇರಿತ್ತಿರುವಾಗಲೇ ವಿಗ್ರಹದ ಬಲಗಡೆಯಿಂದ ಹೂ ಬಿದ್ದಿದೆ. ದೇವರ ಮೇಲಿಂದ ಹೂವು ಬಿದ್ದಾಗ ಪತ್ನಿ ಅನಿತಾ ಅವರು ಪುಳಕಿತರಾಗಿ ಪ್ರತ...
ಚನ್ನಪಟ್ಟಣ ಉಪಚುನಾವಣೆ: ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ

ಚನ್ನಪಟ್ಟಣ ಉಪಚುನಾವಣೆ: ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನು ಬಿಜೆಪಿ-ಜೆಡಿಎಸ್ ನಾಯಕರು ಘೋಷಿಸಿದ್ದಾರೆ. ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ನಿಖಿಲ್​ ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದಾರೆ. ಯಡಿಯೂರಪ್ಪ ನಿವಾಸದಲ್ಲಿ ಗುರುವಾರ ಜೆಡಿಎಸ್​​-ಬಿಜೆಪಿ ನಾಯಕರ ಸಮನ್ವಯ ಸಭೆ ಬಳಿಕ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಉಪಸ್ಥಿತಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ನಾಯಕರು ಚನ್ನಪಟ್ಟಣ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸುವ ಬಗ್ಗೆ ಘೋಷಣೆ ಮಾಡಿದರು....