Wednesday, June 25

Tag: Nirmala Sitharaman

ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಕಂಟಕ; ಕೆಐಎಡಿಬಿ ಹಗರಣ ಬಗ್ಗೆ ಇ.ಡಿ.ಗೆ ದೂರು; ಪ್ರಧಾನಿ ಮೋದಿ, ಷಾ ಅವರಿಗೂ ಅಹವಾಲು

ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಕಂಟಕ; ಕೆಐಎಡಿಬಿ ಹಗರಣ ಬಗ್ಗೆ ಇ.ಡಿ.ಗೆ ದೂರು; ಪ್ರಧಾನಿ ಮೋದಿ, ಷಾ ಅವರಿಗೂ ಅಹವಾಲು

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿರುವ ಮುಡಾ ನಿವೇಶನ ಅಕ್ರಮ, ವಾಲ್ಮೀಕಿ ನಿಗಮದ ಕರ್ಮಕಾಂಡದ ಬೆನ್ನಲ್ಲೇ ಸಿದ್ದರಾಮಯ್ಯ ಸರ್ಕಾರಕ್ಕೆ KIADB ಬಹುಕೋಟಿ ಹಗರಣವೂ ಸಂಕಷ್ಟ ತಂದೊಡ್ಡಿದೆ. ಕುತೂಹಲಕಾರಿ ಬೆಳವಣಿಗೆಯಲ್ಲಿ 'ದೇವನಹಳ್ಳಿ KIADB ಭೂಸ್ವಾಧೀನ ಅವ್ಯವಹಾರ' ಆರೋಪ ಕುರಿತಂತೆ ಸಿಎಂ ಸಿದ್ದರಾಮಯ್ಯ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹಾಗೂ ಕೆ.ಎ.ಎಸ್ ಅಧಿಕಾರಿ ಬಾಳಪ್ಪ ಹಂದಿಗುಂದ ವಿರುದ್ಧ ಜಾರಿ ನಿರ್ದೇಶನಾಲಯ (ED)ದ ನಿರ್ದೇಶಕರಿಗೆ ದೂರು ಸಲ್ಲಿಕೆಯಾಗಿದೆ. 'ಸಿಟಿಜನ್ ರೈಟ್ಸ್ ಫೌಂಡೇಶನ್' ಈ ದೂರನ್ನು ಸಲ್ಲಿಸಿದ್ದು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ನಿರ್ದೇಶನ ಕೋರಿ ಕೇಂದ್ರ ಸರ್ಕಾರಕ್ಕೂ ದೂರು ಸಲ್ಲಿಕೆಯಾಗಿದೆ. ಕೈಗಾರಿಕೋದ್ಯಮಗಳನ್ನು ಉತ್ತೇಜಿಸಲು, ಉದ್ಯಮ ಸಂಸ್ಥೆಗಳಿಗೆ ಮೂಲಸೌಕರ್ಯ ಕಲ್ಪಿಸುವ ಸಂಬಂಧ ಸ್ಥಾಪಿಸಲಾಗಿರುವ ರಾಜ್ಯ ಸರ್ಕಾರದ ಅಧೀನದ ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ (KIADB) ಇದೀಗ ಹಗರಣಗಳ ಕೂಪವಾಗಿದ್ದು, ಒಂದೊಂದೇ ಕರ್ಮಕಾಂಡಗಳು ಬೆಳಕಿಗೆ ಬರುತ್ತಿವೆ. ಅದರಲ್ಲೂ ಸರ್ಕಾ...