Sunday, May 3

Tag: Praveen Kumaar Shetty- Karnataka Rakshanaa Vedike

ನಾವೆಲ್ಲಿಗೆ ಹೋಗಲಿ? ಸಾರ್ವಜನಿಕ ಸ್ಥಳಗಳಲ್ಲಿ ಸಂಘಗಳ ಕಾರ್ಯಕ್ರಮ ನಿರ್ಬಂಧಕ್ಕೆ ಕರವೇ ಆಕ್ರೋಶ; ಸಿದ್ದು ಸರ್ಕಾರಕ್ಕೆ ಪ್ರವೀಣ್ ಕುಮಾರ್ ಶೆಟ್ಟಿ ಎಚ್ಚರಿಕೆ

ನಾವೆಲ್ಲಿಗೆ ಹೋಗಲಿ? ಸಾರ್ವಜನಿಕ ಸ್ಥಳಗಳಲ್ಲಿ ಸಂಘಗಳ ಕಾರ್ಯಕ್ರಮ ನಿರ್ಬಂಧಕ್ಕೆ ಕರವೇ ಆಕ್ರೋಶ; ಸಿದ್ದು ಸರ್ಕಾರಕ್ಕೆ ಪ್ರವೀಣ್ ಕುಮಾರ್ ಶೆಟ್ಟಿ ಎಚ್ಚರಿಕೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮೇಲೆ ನಿರ್ಬಂಧ ಹೇರಲು ಮುಂದಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರವು ಪರೋಕ್ಷವಾಗಿ ಕನ್ನಡಿಗರ ಮೇಲೆ ಸವಾರಿ ಮಾಡಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಆಕ್ರೋಶ ಹೊರ ಹಾಕಿದೆ.ರಾಜ್ಯ ಸರ್ಕಾರದ ನಡೆ ಬಗ್ಗೆ ಅಸಮಾಧಾನ ಹೊರ ಹಾಕಿರುವ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ, ಸಾರ್ವಜನಿಕ ಸ್ಥಳಗಳಲ್ಲಿ ಸಂಘ ಸಂಸ್ಥೆಗಳ ಕಾರ್ಯಕ್ರಮಗಳನ್ನು ನಿರ್ಬಂಧಿಸುವ ಕ್ರಮ ಸರಿಯಲ್ಲ ಎಂದರು.ರಾಜ್ಯ ಸರ್ಕಾರದ ಕ್ರಮವು ಕೇವಲ RSS ನ್ನು ಕೇಂದ್ರೀಕೃತವಾಗಿಲ್ಲ, ಈ ಆದೇಶದಿಂದ RSS ಮೇಲೆ ಕಿಂಚಿತ್ತೂ ಪರಿಣಾಮ ಬೀರುವುದಿಲ್ಲ, ಬದಲಾಗಿ ಕನ್ನಡ ಸಂಘಟನೆಗಳ ಮೇಲೆ ಹಾಗೂ ಕನ್ನಡ ಕಾರ್ಯಕರ್ತರ ಮೇಲೆ ಪರಿಣಾಮ ಬೀರುತ್ತದೆ ಎಂದು ಪ್ರವೀಣ್ ಕುಮಾರ್ ಶೆಟ್ಟಿ ಪ್ರತಿಕ್ರಿಯಿಸಿದ್ದಾರೆ.ಕನ್ನಡ ನಾಡು ನುಡಿಗೆ ಧಕ್ಕೆಯಾದಲ್ಲಿ ನಾಡಿಗಾಗಿ ಹೋರಾಟ ನಡೆಸುವಲ್ಲಿ ಕನ್ನಡ ಪರ ಸಂಘಟನೆಗಳು ಮುಂಚೂಣಿಯಲ್ಲಿರುತ್ತವೆ. ಹೀಗಿರುವಾಗ ಸರ್ಕಾರವು ಕನ್ನಡ ಪರ ಸಂಘಟನೆಗಳ ಹಾಗೂ ಕನ್ನಡ ನಾಡು-ನುಡಿ ಹಿತಕ್ಕೆ ದುಡಿಯುವವರ ಬಗ್ಗೆ ಯೋಚನೆ ಮಾಡಬೇಕಿತ್ತು ಎಂದು ಪ್ರವೀಣ್ ...