Tuesday, June 24

Tag: Ramalinga Reddy

2 ದಿನಗಳಲ್ಲೇ ಅಂತ್ಯಗೊಂಡ ಲಾರಿ ಮುಷ್ಕರ; ಚಾಣಕ್ಯನೆನಿಸಿದ ರಾಮಲಿಂಗಾರೆಡ್ಡಿ

2 ದಿನಗಳಲ್ಲೇ ಅಂತ್ಯಗೊಂಡ ಲಾರಿ ಮುಷ್ಕರ; ಚಾಣಕ್ಯನೆನಿಸಿದ ರಾಮಲಿಂಗಾರೆಡ್ಡಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದಲ್ಲಿ ಮೂರು ದಿನಗಳಿಂದ ನಡೆಯುತ್ತಿದ್ದ ಲಾರಿ ಮುಷ್ಕರವನ್ನು ರಾಜ್ಯ ಲಾರಿ ಮಾಲೀಕರ ಹಾಗೂ ಏಜೆಂಟರ ಸಂಘ ಗುರುವಾರ ವಾಪಸ್‌ ಪಡೆದಿದೆ. ಮೊದಲನೇ ದಿನ ಸುಮಾರು ಸ್ವಲ್ಪಮಟ್ಟಿಗೆ ಯಶಸ್ಸು ಕಂಡಿದ್ದ ಮುಷ್ಕರಕ್ಕೆ ಚೆನ್ನಾರೆಡ್ಡಿ ನೇತೃತ್ವದ ಲಾರಿ ಮಾಲೀಕರ ಮತ್ತೊಂದು ಬಣ ಮುಷ್ಕರಕ್ಕೆ ಬೆಂಬಲ ನೀಡಲಿಲ್ಲ. ಹಾಗಾಗಿ ಎರಡನೇ ದಿನಕ್ಕೆ ಮುಷ್ಕರವು ತನ್ನ ವೇಗವನ್ನು ಕಳೆದುಕೊಂಡಿತು. ಈ ನಡುವೆ, ಲಾರಿ ಮಾಲೀಕರ ಸಂಘದ ಅಧ್ಯಕ್ಷ ಜಿ.ಆರ್ ಷಣ್ಮುಖಪ್ಪರವರು ಸಾರಿಗೆ ಸಚಿವರನ್ನು ಭೇಟಿಯಾಗಿ ತಮ್ಮ ಬೇಡಿಕೆಗಳ ಬಗ್ಗೆ ಚರ್ಚಿಸಿದರು. ಹೇಗಿದ್ದರೂ ಮಾರನೆ ದಿನ ಮತ್ತಷ್ಟು ಸಹಜ ಸ್ಥಿತಿಗೆ ಬರುತ್ತಿದ್ದ ಮುಷ್ಕರವು ತಮ್ಮ ಕೈತಪ್ಪಲಿದೆ ಎಂಬುದನ್ನು ಅರಿತ ಬಹುತೇಕ ಸಂಘಟಕರು ಮಾತುಕತೆಗೆ ಮುಂದಾದರು. ಸಂಘದ ಪದಾಧಿಕಾರಿಗಳೊಂದಿಗೆ ಸಂಧಾನ ಸಭೆ ನಡೆಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅದಾಗಲೇ ಎರಡು ಬಾರಿ ಮುಖಂಡರೊಂದಿಗೆ ಚರ್ಚಿಸಿದ್ದರು. ಮುಖ್ಯಮಂತ್ರಿಗಳು ಸಹ ಒಂದು ಬಾರಿ ಸಂಧಾನ ಸಭೆ ನಡೆಸಿದ್ದರು. ಮೊದಲೆರಡು ಸಂಧಾನದಲ್ಲಿಯೇ ಅವರ ಪ್ರಮುಖ ಬೇಡಿಕೆಗಳಾದ ಡೀಸೆಲ್ ಬೆಲೆ ಇಳಿಸುವ, ಟೋಲ್ ರದ್ದು ಮಾಡುವ ಬೇಡ...
ಮಹಾರಾಷ್ಟ್ರಕ್ಕೂ ಮಾದರಿಯಾದ KSRTC; ಬೆಂಗಳೂರಿನಲ್ಲಿ ನಿಯೋಗದ ಕಸರತ್ತು

ಮಹಾರಾಷ್ಟ್ರಕ್ಕೂ ಮಾದರಿಯಾದ KSRTC; ಬೆಂಗಳೂರಿನಲ್ಲಿ ನಿಯೋಗದ ಕಸರತ್ತು

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸಾರಿಗೆ ವ್ಯವಸ್ಥೆಯಲ್ಲಿ ಮುಂಚೂಣಿ ಸೇವೆಯ ಮೂಲಕ ಗಮನಸೆಳೆದಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಮಹಾರಾಷ್ಟ್ರ ಸರ್ಕಾರಕ್ಕೂ ಮಾದರಿಯಾದಂತಿದೆ.  ಮಹಾರಾಷ್ಟ್ರ ಸರ್ಕಾರದ ಸಾರಿಗೆ ಸಚಿವ ಪ್ರತಾಪ್‌ ಸರ್‌ನಾಯಕ್‌ ನತೃತ್ವದ ನಿಯೋಗ ಬೆಂಗಳೂರಿನಲ್ಲಿರುವ KSRTC ಕೇಂದ್ರ ಕಚೇರಿ ಹಾಗೂ ಕಾರ್ಯಾಗಾರಕ್ಕೆ ಭೇಟಿ ನೀಡಿ ಅಧ್ಯಯನ ನಡೆಸಿದ ಬೆಳವಣಿಗೆ ಕುತೂಹಲದ ಕೇಂದ್ರಬಿಂದುವಾಯಿತು. ಮಹಾರಾಷ್ಟ್ರ ಸಾರಿಗೆ ನಿಗಮ 'ಎಂ.ಎಸ್.ಆರ್.ಟಿ.ಸಿ' ವ್ಯವಸ್ಥಾಪಕ ನಿರ್ದೇಶಕ ಮಾಧವ್ ಕುಸೆಕರ್ ಹಾಗೂ ಅಧಿಕಾರಿಗಳ ತಂಡ ಈ ನಿಯೋಗದಲ್ಲಿತ್ತು. KSRTC ನಿಗಮದಲ್ಲಿನ ಪ್ರತಿಷ್ಠಿತ ವಾಹನಗಳ ಕಾರ್ಯಾಚರಣೆ, ಕಾರ್ಮಿಕ ಕಲ್ಯಾಣ ಉಪಕ್ರಮಗಳು, ವಾಣಿಜ್ಯ ಆದಾಯ, ಬಸ್ಸುಗಳ ಪುನಃಶ್ಚೇತನ/ ನವೀಕರಣ, ಹೆಚ್.ಆರ್.ಎಂ.ಎಸ್., ಇ-ಟೆಕೇಟಿಂಗ್, KSRTC ಆರೋಗ್ಯ ಯೋಜನೆ, ರೂ 1 ಕೋಟಿ ಅಪಘಾತ ವಿಮೆ ಹಾಗೂ ಇತರೆ ಉಪಕ್ರಮಗಳ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಂದ ಮಾಹಿತಿ ಪಡೆಯಿತು. KSRTC ಉಪಾಧ್ಯಕ್ಷ ರಿಜ್ವಾನ್ ನವಾಬ್, ರಾಜ್ಯ ಸರ್ಕಾರದ ಸಾರಿಗೆ ಇಲಾಖೆ ಕಾರ್ಯದರ್ಶಿ, KSRTC ವ್ಯವಸ್ಥಾಪಕ ನಿರ್ದೇಶಕರು ಈ...
ಸಿಎಂ ಸ್ಥಾನಕ್ಕೆ ಅರ್ಹತೆ ಇದ್ದರೂ ಆಸೆ ಇಲ್ಲ: ರಾಮಲಿಂಗಾರೆಡ್ಡಿ

ಸಿಎಂ ಸ್ಥಾನಕ್ಕೆ ಅರ್ಹತೆ ಇದ್ದರೂ ಆಸೆ ಇಲ್ಲ: ರಾಮಲಿಂಗಾರೆಡ್ಡಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಕಾಂಗ್ರೆಸ್ ಪಕ್ಷದಲ್ಲಿ ನನ್ನ ಅನುಭವ, ಸೇವೆ ಹಾಗೂ ಹಿರಿತನದಿಂದ ಮುಖ್ಯಮಂತ್ರಿ ಸ್ಥಾನಕ್ಕೆ ಎಲ್ಲಾ ರೀತಿಯ ಅರ್ಹತೆ ನನಗಿದೆ. ಆದರೆ ಆ ಸ್ಥಾನದ ಆಕಾಂಕ್ಷಿ ನಾನಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ನಮ್ಮ ಪಕ್ಷದಲ್ಲಿ ಹೈಕಮಾಂಡ್ ಪ್ರಬಲವಾಗಿದೆ. ಯಾವುದೇ ಸಮಸ್ಯೆಗಳನ್ನೂ ಸಮರ್ಥವಾಗಿ ನಿಭಾಯಿಸಲಿದೆ. ಪ್ರತಿಯೊಬ್ಬ ರಾಜಕಾರಣಿಗೂ ರಾಜಕೀಯದಲ್ಲಿ ಮೇಲ್ಮಟ್ಟದ ಹುದ್ದೆಗಳನ್ನು ಅಲಂಕರಿಸಬೇಕೆಂಬ ಆಕಾಂಕ್ಷೆ ಇರುತ್ತದೆ ಅದು ಸಹಜ. ಆದರೆ ಅದಕ್ಕೆ ಸಮಯ ಕೂಡಿಬರಬೇಕಿದೆ. ಸದ್ಯಕ್ಕೆ ರಾಜ್ಯದಲ್ಲಿ ಸಿಎಂ ಸ್ಥಾನವೂ ಖಾಲಿ ಇಲ್ಲ, ಕೆಪಿಸಿಸಿ ಅಧ್ಯಕ್ಷ ಸ್ಥಾನವೂ ಖಾಲಿ ಇಲ್ಲ. ಹಾಗಾಗಿ ಆ ಸ್ಥಾನಗಳ ಬಗ್ಗೆ ಅಪೇಕ್ಷೆ ವ್ಯಕ್ತಪಡಿಸುವುದು ಸರಿಯಲ್ಲ. ನಮ್ಮ ಹೈಕಮಾಂಡ್ ಈ ವಿಷಯಗಳಲ್ಲಿ ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳಲಿದೆ ಎಂದರು. ನಾನಂತೂ ಯಾವುದೇ ಹುದ್ದೆಯ ಆಕಾಂಕ್ಷಿ ಅಲ್ಲ. ಪಕ್ಷದ ವಿಚಾರದಲ್ಲಿ ಏನೇ ಇದ್ದರೂ ನಾಲ್ಕು ಗೋಡೆಗಳ ಮಧ್ಯೆ ಹೇಳಬೇಕು. ಏನಾದರೂ ಇದ್ದರೆ ಸುರ್ಜೆವಾಲಾ ಅವರಿಗೆ ಹೇಳಲಿ ಎಂದು ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು. ಬಿಜೆಪಿ ಪಕ್ಷದಲ್ಲಿ ರಾಜ್ಯಾಧ್ಯಕ್ಷ ಸ್ಥಾನದ ...
KSRTC ನೌಕರರಿಗೆ ಗುಡ್ ನ್ಯೂಸ್; ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ ‘KSRTC ಆರೋಗ್ಯ’ ಕಾರ್ಯಕ್ರಮಕ್ಕೆ ಚಾಲನೆ

KSRTC ನೌಕರರಿಗೆ ಗುಡ್ ನ್ಯೂಸ್; ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ ‘KSRTC ಆರೋಗ್ಯ’ ಕಾರ್ಯಕ್ರಮಕ್ಕೆ ಚಾಲನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗೆ 'ನೌಕರರ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ - KSRTC ಆರೋಗ್ಯ ಕಾರ್ಯಕ್ರಮ' ಸೋಮಾವರ ಅನುಷ್ಠಾನಗೊಳ್ಳಲಿದೆ. ಸೋಮವಾರ (06.01.2025) ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಈ ಮಹತ್ವಾಕಾಂಕ್ಷೆಯ ಯೋಜನೆಗೆ ಚಾಲನೆ ಸಿಗಲಿದೆ. ಶೀಘ್ರವೇ ಕನ್ನಡದಲ್ಲೂ ಬರಲಿದೆ ದೇಶದ ಪ್ರತಿಷ್ಠಿತ ಮಾಧ್ಯಮ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿ ವರ್ಗಕ್ಕೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ 'KSRTC ಆರೋಗ್ಯ' ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್, ಕೆ.ಎಸ್.ಆರ್.ಟಿ.ಸಿ. ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಶಾಸಕರ ಉಪಸ್ಥಿತಿಯಲ್ಲಿ ಈ ಸಮಾರಂಭ ನಡೆಯಲಿದೆ. ಈ ಸಮಾರಂಭದಲ್ಲಿ ಸಚಿವರು, ಸಂಸದರು, ಶಾಸಕರು ಹಾಗೂ ಅಧಿಕಾರಿಗಳ ಉಪಸ್ಥಿತಿಯಲ್ಲಿ ಆಸ್ಪತ್ರೆಗಳ ಮುಖ್ಯಸ್ಥ...
‘ಶಕ್ತಿ’ ಮುನ್ನಡೆಸಲು ಕಷ್ಟವಾಗುತ್ತದೆ ಎಂದು ಯಾವ ಮಾಧ್ಯಮಗಳಿಗೂ ಹೇಳಿಕೆ ನೀಡಿಲ್ಲ; ರಾಮಲಿಂಗ ರೆಡ್ಡಿ

‘ಶಕ್ತಿ’ ಮುನ್ನಡೆಸಲು ಕಷ್ಟವಾಗುತ್ತದೆ ಎಂದು ಯಾವ ಮಾಧ್ಯಮಗಳಿಗೂ ಹೇಳಿಕೆ ನೀಡಿಲ್ಲ; ರಾಮಲಿಂಗ ರೆಡ್ಡಿ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಶಕ್ತಿ ಯೋಜನೆ ಮುನ್ನಡೆಸಲು ಸಾರಿಗೆ ಇಲಾಖೆಗೆ ಸ್ವಲ್ಪ ಕಷ್ಟವಾಗುತ್ತಿದೆ ಎಂಬ ಸುದ್ದಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಆದರೆ ಈ ಕುರಿತಂತೆ ತಾವು ಹೇಳಿಕೆಯನ್ನೇ ನೀಡಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳ ವರದಿಯನ್ನು ಉಲ್ಲೇಖಿಸಿ ರಾಮಲಿಂಗ ರೆಡ್ಡಿ ಅವರು ಈ ಸ್ಪಷ್ಟನೆ ನೀಡಿದ್ದಾರೆ.‌ 'ನಾನು ಯಾವುದೇ ಮಾಧ್ಯಮದವರಿಗೂ ಶಕ್ತಿ ಯೋಜನೆ ನಡೆಸಲು ಸಾರಿಗೆ ಇಲಾಖೆಗೆ ಸ್ವಲ್ಪ ಕಷ್ಟವಾಗುತ್ತಿದೆ ಎಂಬ ಹೇಳಿಕೆಯನ್ನೇ ನೀಡಿಲ್ಲ. ಈ ರೀತಿಯ ಹೇಳಿಕೆಗಳು ವಿನಾ ಕಾರಣ ಅತ್ಯಂತ ವ್ಯವಸ್ಥಿತವಾಗಿ ನಡೆಯುತ್ತಿರುವ ಶಕ್ತಿ ಯೋಜನೆಯ ಬಗ್ಗೆ ಗೊಂದಲ ಸೃಷ್ಟಿಸುವ ಹುನ್ನಾರವಾಗಿದೆ. ನಾನು ಮಾತನಾಡಿಯೇ ಇಲ್ಲದ ಹೇಳಿಕೆಗಳನ್ನು ಈ ರೀತಿ ಪ್ರಕಟಿಸಿರುವುದು ಸರಿಯಲ್ಲ' ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಾವು ಯಾವುದೇ ಮಾಧ್ಯಮದವರು ಈ ಬಗ್ಗೆ ಸಂರ್ಪಕಿಸಿಯೇ ಇಲ್ಲ ನಾನು ಯಾರೊಂದಿಗೂ ಮಾತನಾಡಿಯೇ ಇಲ್ಲದಿರುವುದರಿಂದ ಈ ರೀತಿಯ ಹೇಳಿಕೆಗಳನ್ನು ಮಾಧ್ಯಮದವರು ಪ್ರಕಟಿಸುವ ಮುನ್ನ ನನ್ನನ್ನು ಖುದ್ದು ಸಂರ್ಪಕಿಸಬೇಕೆಂದು ಅವರು ಸಾಮಾಜಿಕ ಜಾಲತಾಣ 'X'ನಲ್ಲಿ ಪೋಸ್ಟ್ ...