
ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಮೂಲಕ ವಿದ್ಯಾರ್ಥಿ ವೇತನ; ಸಿಎಂಗೆ ಕಾಂಗ್ರೆಸ್ ಅಭಿನಂದನೆ
ಬೆಂಗಳೂರು: ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಮೂಲಕ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಅಭಿನಂದನೆ ಸಲ್ಲಿಸಿದೆ.
ಸರ್ಕಾರದ ವಿದ್ಯಾಸಿರಿ ಯೋಜನೆಯ ಅಡಿಯಲ್ಲಿ ಪ್ರತೀ ಶೈಕ್ಷಣಿಕ ವರ್ಷದಲ್ಲಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ ವಿದ್ಯಾರ್ಥಿ ವೇತನವನ್ನು ಪಾವತಿ ಮಾಡಲಾಗುತ್ತದೆ. ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದಲ್ಲಿ ತಾಂತ್ರಿಕ ಶಿಕ್ಷಣದಲ್ಲಿ ವ್ಯಾಸಂಗ ಮಾಡುತ್ತಿರುವ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳಿಗೆ ಸುಮಾರು ಐದು ಕೋಟಿ ರೂಪಾಯಿ ವಿದ್ಯಾರ್ಥಿ ವೇತನವನ್ನು ರಾಜ್ಯ ಸರ್ಕಾರವು ಪಾವತಿ ಮಾಡಿರುತ್ತದೆ. ತಾಂತ್ರಿಕ ಕಾರಣದ ಆಧಾರದ ಮೇಲೆ ಆರ್ಥಿಕ ಇಲಾಖೆಯು ವಿದ್ಯಾರ್ಥಿ ವೇತನ ಪಾವತಿ ಮಾಡಿರಲಿಲ್ಲ. 09-09-2024 ರ ತಮ್ಮ ಪತ್ರದ ಆಧಾರದ ಮೇಲೆ ಮಾನ್ಯ ಮುಖ್ಯಮಂತ್ರಿಗಳು ಆರ್ಥಿಕ ಇಲಾಖೆಗೆ ನಿರ್ದೇಶನ ನೀಡಿ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಮೂಲಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಬಿಡುಗಡೆಗೆ ಕ್ರಮ ಕೈಗೊಂಡಿರುತ್ತಾರೆ. ಪ್ರಸಕ್ತ ಸಾಲಿನ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಿದ ರಾಜ್ಯ ಸರ್ಕಾರಕ್ಕೆ, ವಿಶ...