Thursday, January 29

Tag: Sowmya Reddy

ನಾರಿ ‘ಶಕ್ತಿ’ಯ ಸಾರಥ್ಯ..! ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯ ಪದಗ್ರಹಣ;

ನಾರಿ ‘ಶಕ್ತಿ’ಯ ಸಾರಥ್ಯ..! ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯ ಪದಗ್ರಹಣ;

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಗುರುವಾರ ಪ್ರದೇಶ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ಅಧಿಕಾರ ವಹಿಸಿಕೊಂಡರು. ಪದಗ್ರಹಣ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ, ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಕಾಲಂಬಾ, ಸಚಿವರಾದ ಕೃಷ್ಣ ಬೈರೇಗೌಡ, ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕ ಹ್ಯಾರಿಸ್, ಅಲ್ಲಂ ಪ್ರಭು ಪಾಟೀಲ್, ವಿಧಾನ ಪರಿಷತ್ತಿನ ಸದಸ್ಯ ಯು.ಬಿ ವೆಂಕಟೇಶ್, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮಾಜಿ ಯುವ ಕಾಂಗ್ರಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ ಶ್ರೀನಿವಾಸ್, ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್ ಮೊದಲಾದವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಸೌಮ್ಯ ರೆಡ್ಡಿ, ಶಕ್ತಿ ಯೋಜನೆಯಿಂದ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುವ ಮಹಿಳೆ ಸ್ವಾಭಿಮಾನದಿಂದ ಬಸ್ ನಲ್ಲಿ ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾಳೆ. ಇನ್ನು ಗೃಹಲಕ್ಷ್ಮಿ ಯೋಜನೆಯಿಂದ ಗ್ರಾಮೀಣ ಭಾಗದ ಮಹಿಳೆಯರು ಹಳ್ಳಿಯಲ್ಲಿ ಗ್ರಂಥಾಲಯ ಆರಂಭಿಸಿದರೆ, ಮತ್ತೆ ಕೆಲವು ಮಗನಿಗೆ ಬೈಕ್ ಕೊಡ...
ವನಿತೆಯರ ಪರ ಧ್ವನಿಯಾದ ಸೌಮ್ಯ ರೆಡ್ಡಿ; ಜಿಲ್ಲೆ, ಬ್ಲಾಕ್ ಹಾಗೂ ಹಳ್ಳಿ ಮಟ್ಟದಲ್ಲಿ ಸೈನ್ಯ ಕಟ್ಟುವುದಾಗಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪಣ

ವನಿತೆಯರ ಪರ ಧ್ವನಿಯಾದ ಸೌಮ್ಯ ರೆಡ್ಡಿ; ಜಿಲ್ಲೆ, ಬ್ಲಾಕ್ ಹಾಗೂ ಹಳ್ಳಿ ಮಟ್ಟದಲ್ಲಿ ಸೈನ್ಯ ಕಟ್ಟುವುದಾಗಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪಣ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು; ವನಿತೆಯರ ಪರ ಧ್ವನಿಯಾದ ಮಾಜಿ ಶಾಸಕಿ ಹಾಗೂ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯ ರೆಡ್ಡಿ, ಇದೀಗ ರಾಜ್ಯದ ಜಿಲ್ಲೆ, ಬ್ಲಾಕ್ ಹಾಗೂ ಹಳ್ಳಿ ಮಟ್ಟದಲ್ಲಿ ಮಹಿಳೆಯರ ಸೈನ್ಯ ಕಟ್ಟುವುದಾಗಿ ಘೋಷಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೌಮ್ಯ ರೆಡ್ಡಿ, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಬೆಂಗಳೂರಿನಲ್ಲಿ ಮಹಿಳಾ ಕಾಂಗ್ರೆಸ್ ಸ್ಥಾಪನೆ ಮಾಡಿ ಸೆಪ್ಟೆಂಬರ್ 15ಕ್ಕೆ 40 ವರ್ಷಗಳು ಪೂರ್ಣಗೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ನಾವು ಮಹಿಳಾ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಅಭಿಯಾನ ಮಾಡುತ್ತಿದ್ದೇವೆ ಎಂದು ತಿಳಿಸಿದರು. ಜಿಲ್ಲೆ, ಬ್ಲಾಕ್ ಹಾಗೂ ಹಳ್ಳಿಗಳ ಮಟ್ಟದಲ್ಲಿ ಈ ಅಭಿಯಾನ ಮಾಡಲು ತೀರ್ಮಾನಿಸಿದ್ದೇವೆ. ರಾಜ್ಯಾದ್ಯಂತ ಮಹಿಳೆಯರು ಮಹಿಳಾ ಕಾಂಗ್ರೆಸ್ ಸೇರಿ ಕೈ ಜೋಡಿಸಬೇಕು ಎಂದು ಮನವಿ ಮಾಡುತ್ತೇನೆ ಎಂದ ಅವರು, ಕರ್ನಾಟಕ ರಾಜ್ಯದಲ್ಲಿ ಮಹಿಳೆಯರಿಗಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಗೃಹಲಕ್ಷ್ಮೀ ಯೋಜನೆ 1.21 ಕೋಟಿ ಮಹಿಳೆಯರಿಗೆ ತಲುಪಿದೆ. ಗೃಹಜ್ಯೋತಿ 1.60 ಕೋಟಿ ಮನೆಗಳನ್ನು ತಲುಪಿದೆ. ಶಕ್ತಿ ಯೋಜನೆಯಲ್ಲಿ ಮಹಿಳೆಯರು 283 ಕೋ...
ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ; ಕೈ ವನಿತೆಯರ ಪಾಳಯದಲ್ಲಿ ರಣೋತ್ಸಾಹ.‌.

ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ; ಕೈ ವನಿತೆಯರ ಪಾಳಯದಲ್ಲಿ ರಣೋತ್ಸಾಹ.‌.

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಮಾಜಿ ಶಾಸಕಿ ಸೌಮ್ಯ ರೆಡ್ಡಿ ನೇಮಕವಾಗಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಈ ಕುರಿತಂತೆ ಘೋಷಣೆ ಮಾಡುತ್ತಿದ್ದಂತೆಯೇ ಕಾಂಗ್ರೆಸ್ ವನಿತೆಯರ ಬಳಗದಲ್ಲಿ ರಣೋತ್ಸಾಹ ಕಂಡುಬಂದಿದೆ. ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಸ್ಥಾನಕ್ಕೆ ನಾಯಕಿಯರಿಂದ ಭಾರೀ ಲಾಭಿ ನಡೆದಿತ್ತಿತ್ತು. ಸ್ಥಾನದಲ್ಲಿ ಮುಂದುವರಿಯಲು ಪುಷ್ಪ ಅಮರನಾಥ್ ಅವರು ಪ್ರಯತ್ನ ನಡೆಸಿದ್ದರೆ, ಮತ್ತೊಂದೆಡೆ ಕವಿತಾ ರೆಡ್ಡಿ ಕೂಡಾ ದೆಹಲಿಯಲ್ಲಿ ಕಸರತ್ತು ನಡೆಸಿದ್ದರು. ಆದರೆ ಹೈಕಮಾಂಡ್ ಸೌಮ್ಯ ರೆಡ್ಡಿ ಅವರನ್ನು ನೇಮಕ ಮಾಡಿ ಅಚ್ಚರಿಯ ನಿರ್ಧಾರ ಪ್ರಕಟಿಸಿದೆ. ಬೆಂಗಳೂರಿನ ಆರ್‌ವಿ‌ ಕಾಲೇಜಿನಲ್ಲಿ ಕೆಮಿಕಲ್ ಇಂಜಿನಿಯರಿಂಗ್ ಪದವಿ ಪಡೆದಿರುವ ಸೌಮ್ಯ ರೆಡ್ಡಿ, ENVIRONMENT TECHNOLOGY ಯಲ್ಲಿ NEW YORK INSTITUTE OF TECHNOLOGYಯಿಂದ ಸ್ನಾತಕೋತ್ತರ ಪದವಿ ವ್ಯಾಸಾಂಗ ಮಾಡಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಸೋಲಿಲ್ಲದ ಸರದಾರ ಎಂದೇ ಗುರುತಾಗಿರುವ ಸಚಿವ ರಾಮಲಿಂಗ ರೆಡ್ಡಿ ಅವರ ಪುತ್ತಿಯಾಗಿರುವ ಸೌಮ್ಯ ರೆಡ್ಡಿ, ತಾವು ಕೂಡಾ ತಂದೆಯ ಹಾದಿಯಲ್ಲೇ ಜನಸೇವೆಯಲ್ಲಿ ತೊಡಗಿದ್ದಾ...