
ವಿಪಕ್ಷ ನಾಯಕ ಅಶೋಕ್ ಅವರಿಗೆ ‘ವಿಶೇಷ ಸ್ಥಾನಮಾನದ ನಾಮಫಲಕ’ ಒದಗಿಸಿ; ಕಾಂಗ್ರೆಸ್ ವ್ಯಂಗ್ಯ
ಬೆಂಗಳೂರು: ತಮ್ಮ ಬಗ್ಗೆ ಕಾಂಗ್ರೆಸ್ ಪಕ್ಷ ಆಕ್ಷೇಪಾರ್ಹ ವೀಡಿಯೊ ವೈರಲ್ ಮಾಡಿದೆ ಎಂದು ಪೊಲೀಸರಿಗೆ ದೂರು ನೀಡಿರುವ ವಿಪಕ್ಷ ನಾಯಕ ಆರ್.ಅಶೋಕ್, ತಮ್ಮ ಸ್ಥಾನಮಾನಕ್ಕೆ ಕಾಂಗ್ರೆಸ್ ಚ್ಯುತಿ ತರುವ ಪ್ರಯತ್ನ ಮಾಡಿದೆ ಎಂದು ಆರೋಪಿಸಿದ್ದಾರೆ. ಈ ಕುರಿತಂತೆ ಪ್ರತಿಕ್ರಿಯಿಸಿರುವ ಆಡಳಿತಾರೂಢ ಕಾಂಗ್ರೆಸ್ ಪಕ್ಷ, ವಿಪಕ್ಷ ನಾಯಕ ಅಶೋಕ್ ಅವರಿಗೆ 'ವಿಶೇಷ ಸ್ಥಾನಮಾನದ ನಾಮಫಲಕ' ಒದಗಿಸಬೇಕಿದೆ ಎಂದು ವ್ಯಂಗ್ಯವಾಡಿದೆ. ಈ ಸಂಬಂಧ ಕೆಪಿಸಿಸಿ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಅವರು ಸ್ಪೀಕರ್'ಗೆ ಬರೆದಿರುವ ಪತ್ರ ಗಮನಸೆಳೆದಿದೆ.
ಕರ್ನಾಟಕದ ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್ ಅಲಿಯಾಸ್ ಸಾಮ್ರಾಟ್ ಅಶೋಕ್ ರವರಿಗೆ ವಿಶೇಷ ಸ್ಥಾನಮಾನ ಮತ್ತು ನಾಮಫಲಕ ಒದಗಿಸಬೇಕೆಂದು ಈ ಪತ್ರದಲ್ಲಿ ರಮೇಶ್ ಬಾಬು ಉಲ್ಲೇಖಿಸಿದ್ದಾರೆ. ಕರ್ನಾಟಕದ ವಿಧಾನಸಭೆಗೆ ತನ್ನದೇ ಆದ ವಿಶೇಷವಾದ ಗೌರವವಿದೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಅನೇಕ ಹಿರಿಯರು ಇಲ್ಲಿ ಸೇವೆ ಸಲ್ಲಿಸಿದ್ದಾರೆ. ತಮ್ಮ ವಿರೋಧ ಪಕ್ಷದ ನಾಯಕರ ಸ್ಥಾನದ ಕಾರ್ಯದ ಕಾರಣಕ್ಕಾಗಿ ಗೌರವವನ್ನೂ ಪಡೆದಿರುತ್ತಾರೆ. ಹಿರಿಯ ನಾಯಕರಾದ ಏಸ್ . ಶಿವಪ್ಪನವರು ಮೊದಲ...