Saturday, September 19

Tag: udaya news

ಆರ್.ಅಶೋಕ್ ಸಾರಿಗೆ ಸಚಿವರಾಗಿದ್ದಾಗ 7 ಬಾರಿ ಬರೋಬ್ಬರಿ ಶೇ. 47.8 ರಷ್ಟು ಬಸ್ ಟಿಕೆಟ್ ದರ ಹೆಚ್ಚಿಸಲಾಗಿತ್ತು: ರಾಮಲಿಂಗಾ ರೆಡ್ಟಿ ಅವರಿಂದ ಪಟ್ಟಿ ಬಿಡುಗಡೆ

ಆರ್.ಅಶೋಕ್ ಸಾರಿಗೆ ಸಚಿವರಾಗಿದ್ದಾಗ 7 ಬಾರಿ ಬರೋಬ್ಬರಿ ಶೇ. 47.8 ರಷ್ಟು ಬಸ್ ಟಿಕೆಟ್ ದರ ಹೆಚ್ಚಿಸಲಾಗಿತ್ತು: ರಾಮಲಿಂಗಾ ರೆಡ್ಟಿ ಅವರಿಂದ ಪಟ್ಟಿ ಬಿಡುಗಡೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು; ಕರ್ನಾಟಕ ರಾಜ್ಯ ರಸ್ತೆ ಸಾರಿಗೆ‌ ನಿಗಮಗಳ ಬಸ್ ಟಿಕೆಟ್ ದರ ಹೆಚ್ಚಳದ ಸರ್ಕಾರದ ನಿರ್ಧಾರ ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ನಾಯಕರಿಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ತಮ್ಮದೇ ರೀತಿಯಲ್ಲಿ ಎದಿರೇಟು ನೀಡಿದ್ದಾರೆ.ಶೀಘ್ರವೇ ಕನ್ನಡದಲ್ಲೂ ಬರಲಿದೆ ದೇಶದ ಪ್ರತಿಷ್ಠಿತ ಮಾಧ್ಯಮಬಿಜೆಪಿ ಸರ್ಕಾರದ ಅವಧಿಯಲ್ಲಿ ಅದರಲ್ಲೂ ಆರ್.ಅಶೋಕ್ ಅವರು ಸಾರಿಗೆ ಸಚಿವರಾಗಿದ್ದಾಗ ಸಾರಿಗೆ ಬಸ್‌ಗಳಲ್ಲಿನ ಪ್ರಯಾಣ ದರ ಏರಿಕೆ ಮಾಡಿರುವ ಬಗ್ಗೆ ರಾಮಲಿಂಗ ರೆಡ್ಡಿ ಅಂಕಿಅಂಶಗಳನ್ನು ಬಹಿರಂಗಪಡಿಸಿದ್ದಾರೆ. ಅಶೋಕ್ ಅವರು ಸಾರಿಗೆ ಸಚಿವರಾಗಿದ್ದಾಗ ಆಗಿನ ಬಿಜೆಪಿ ಸರ್ಕಾರವು 7 ಬಾರಿ ಟಿಕೆಟ್ ದರ ಪರಿಷ್ಕರಿತ್ತು. ಬರೋಬ್ಬರಿ ಶೇ. 47.8 ರಷ್ಟು ಬಸ್ ಟಿಕೆಟ್ ದರ ಹೆಚ್ಚಿಸಿತ್ತು ಎಂದು ರೇಟ್ ಕಾರ್ಡ್ ಬಿಡುಗಡೆ ಮಾಡಿದ್ದಾರೆ.ನಮ್ಮನ್ನು ಟೀಕಿಸುವ ಬಿಜೆಪಿಗೆ ಯಾವ ನೈತಿಕತೆಯೂ ಇಲ್ಲ, ನಾಚಿಕೆಯೂ ಇಲ್ಲ! ಎಂದು ಸಚಿವ ರಾಮಲಿಂಗ ರೆಡ್ಡಿ ಟೀಕಿಸಿದ್ದಾರೆ....