Tuesday, June 24

Tag: Wakf Amendment Bill

ವಕ್ಫ್ ತಿದ್ದುಪಡಿ ಮಸೂದೆ: ತಮ್ಮ ಹೋರಾಟ ಬೆಂಬಲಿಸಿದವರಿಗೆ ಧನ್ಯವಾದ ಸಮರ್ಪಿಸಿದ ಯತ್ನಾಳ್

ವಕ್ಫ್ ತಿದ್ದುಪಡಿ ಮಸೂದೆ: ತಮ್ಮ ಹೋರಾಟ ಬೆಂಬಲಿಸಿದವರಿಗೆ ಧನ್ಯವಾದ ಸಮರ್ಪಿಸಿದ ಯತ್ನಾಳ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ವಕ್ಫ್ ತಿದ್ದುಪಡಿ ಮಸೂದೆಯು ಸಂಸತ್ತಿನಲ್ಲಿ ಅಂಗೀಕರವಾಗಿರುವ ಬಗ್ಗೆ ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ್ ಅವರ ಪ್ರತಿಕ್ರಿಯೆ ಗಮನಸೆಳೆದಿದ್ದಾರೆ. ಅತ್ತ, ಬಿಜೆಪಿ ನಾಯಕರು ಹರ್ಷ ವ್ಯಕ್ತಪಡಿಸಿದರೆ, ಇತ್ತ, ವಕ್ಫ್ ವಿರುದ್ದದ ಹೋರಾಟ ಬೆಂಬಲಿಸಿದವರಿಗೆ ಯತ್ನಾಳ್ ಧನ್ಯವಾದ ಸಮರ್ಪಿಸಿದ್ದಾರೆ. ಲೋಕಸಭೆ ಮತ್ತು ರಾಜ್ಯಸಭೆಗಳೆರಡರಲ್ಲೂ ಅಂಗೀಕಾರಗೊಂಡಿರುವ ವಕ್ಫ್ ತಿದ್ದುಪಡಿ ಮಸೂದೆಯು ವಕ್ಫ್ ಬೋರ್ಡ್ ನ ನಿರಂಕುಶ ನಡೆಗಳಿಗೆ ಕಡಿವಾಣ ಹಾಕಲಿದೆ. ವಕ್ಫ್ ಕಾಯ್ದೆಯ ತಿದ್ದುಪಡಿಗೆ ಗೆ ಜಂಟಿ ಸಂಸತ್ ಸಮಿತಿ ರಚಿಸಿ ತಿದ್ದುಪಡಿಗೆ ಸೂಚಿಸಿದ ಕೇಂದ್ರ ಸರ್ಕಾರಕ್ಕೂ, ಜೆ.ಪಿ.ಸಿ ಅಧ್ಯಕ್ಷರಿಗೂ, ಸದಸ್ಯರಿಗೂ ಸೇರಿದಂತೆ ತಿದ್ದುಪಡಿಗೆ ಕಾರಣೀಭೂತರಾದ ಎಲ್ಲರಿಗೂ ನನ್ನ ಅನಂತ ಧನ್ಯವಾದಗಳು ಎಂದು ಶಾಸಕ ಬಸನಗೌಡ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ. ತಿದ್ದುಪಡಿಯಿಂದ ರೈತರಿಗೆ, ಮಠಗಳಿಗೆ, ದೇವಸ್ಥಾನಗಳಿಗೆ, ಸರ್ಕಾರಿ ಭೂಮಿ ಹಾಗೂ ಜನ ಸಾಮಾನ್ಯರ ಭೂಮಿಯನ್ನು ವಕ್ಫ್ ಎಂದು ಘೋಷಿಸಲು ಸಾಧ್ಯವಿಲ್ಲ ಹಾಗೂ ಜಿಲ್ಲಾಡಳಿತ ಮತ್ತು ನ್ಯಾಯಾಲಯಗಳಷ್ಟೇ ಇದನ್ನು ತೀರ್ಮಾನಿಸಬಹುದು. ನಮ್ಮ ಸಾಮ...