Wednesday, June 25

Tag: Yasira Khan Pathan

ಕೋವಿಡ್’ಗೆ ಬಲಿಯಾದವರ ಹೆಣಗಳ ಮೇಲೂ ಲಂಚ ಪಡೆದಿರುವ ಬೊಮ್ಮಾಯಿ? ಸಿಎಂ ಸಿದ್ದರಾಮಯ್ಯ ಆರೋಪ

ಕೋವಿಡ್’ಗೆ ಬಲಿಯಾದವರ ಹೆಣಗಳ ಮೇಲೂ ಲಂಚ ಪಡೆದಿರುವ ಬೊಮ್ಮಾಯಿ? ಸಿಎಂ ಸಿದ್ದರಾಮಯ್ಯ ಆರೋಪ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಹಾವೇರಿ: ಕೋವಿಡ್ 19 ಸೋಂಕಿನ ಸಂದರ್ಭದಲ್ಲಿ ಹೆಣಗಳಿಂದಲೂ ಬಿಜೆಪಿಯವರು ಲಂಚ ಪಡೆದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾಂವ್ ತಾಲೂಕಿನ ಹುಲಗೂರು ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರಖಾನ್ ಪಠಾಣ್ ಪರ ಮತಯಾಚನೆ ಸಭೆಯಲ್ಲಿ ಸಿಎಂ ಮಾತನಾಡಿದರು. ಹಿಂದಿನ ಬಿಜೆಪಿ ಸರ್ಕಾರದ ಬಗ್ಗೆ ಕಾಟು ಟೀಕೆ ಮಾಡಿದ ಸಿದ್ದರಾಮಯ್ಯ, ಇತಿಹಾಸದಲ್ಲಿ ಸತ್ತ ಹೆಣಗಳ ವಿಚಾರದಲ್ಲೂ ಲಂಚ ಪಡೆದ ನಾಯಕರು ಯಾರಾದರೂ ಇದ್ದರೆ ಅದು ಬಸವರಾಜ ಬೊಮ್ಮಾಯಿ ಎಂದು ವಾಗ್ದಾಳಿ ನಡೆಸಿದರು. ಸತ್ತ ಹೆಣಗಳಿಂದ ಲಂಚ ಪಡೆಡಿರುವ ಬಸವರಾಜ ಬೊಮ್ಮಾಯಿ ಮಗ ಭರತ್ ಗೆಲ್ಲಬೇಕಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು. ಕಾಂಗ್ರೆಸ್ ಅಭ್ಯರ್ಥಿ ಪಠಾಣ್ ಅವರನ್ನು ಗೆಲ್ಲಿಸುವಂತೆ ಅವರು ಮತದಾರರಲ್ಲಿ ಮನವಿ ಮಾಡಿದರು....