Monday, August 10

Tag: Yuva Nidhi

ಯುವನಿಧಿ ಯೋಜನೆ ಸ್ಥಗಿತಗೊಳಿಸುವ ಪ್ರಶ್ನೆಯೇ ಇಲ್ಲ: ಡಾ. ಶರಣ್ ಪ್ರಕಾಶ್ ಪಾಟೀಲ್

ಯುವನಿಧಿ ಯೋಜನೆ ಸ್ಥಗಿತಗೊಳಿಸುವ ಪ್ರಶ್ನೆಯೇ ಇಲ್ಲ: ಡಾ. ಶರಣ್ ಪ್ರಕಾಶ್ ಪಾಟೀಲ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ವಿಧಾನಸಭೆ ಚುನಾವಣೆಗೂ ಮುನ್ನ ಘೋಷಣೆ ಮಾಡಿದಂತೆ ಪದವಿ ಹಾಗೂ ಡಿಪ್ಲೊಮಾ ಪೂರ್ಣಗೊಳಿಸಿದ ಪದವೀಧರರಿಗೆ ಯುವನಿಧಿ ಗ್ಯಾರಂಟಿ ಯೋಜನೆಯಡಿ ನೀಡಲಾಗುತ್ತಿರುವ ಆರ್ಥಿಕ ಸಹಾಯವನ್ನು ನೀಡಲು ಸರ್ಕಾರ ಬದ್ಧವಾಗಿದ್ದು, ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವ ಪ್ರಶ್ನೆ ಉದ್ಭವಿಸುವುದಿಲ್ಲ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಸ್ಪಷ್ಟಪಡಿಸಿದ್ದಾರೆ.ಸೋಮವಾರದ ವಿಧಾನಪರಿಷತ್ ಕಲಾಪದಲ್ಲಿ ಬಿಜೆಪಿಯ ಅರುಣ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ನಾವು ಕೊಟ್ಟ ವಾಗ್ದಾನದಂತೆ ನಡೆದುಕೊಳ್ಳುತ್ತೇವೆ. ಚುನಾವಣೆಗೂ ಮುನ್ನ ಜನತೆಗೆ ಯಾವ ಭರವಸೆಯನ್ನು ಕೊಟ್ಟಿದ್ದೇವೋ ಅವೆಲ್ಲವನ್ನೂ ಈಡೇರಿಸಲು ನಾವು ಬದ್ಧರಾಗಿದ್ದೇವೆ. ಯುವನಿಧಿ ಯೋಜನೆಯನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ವದಂತಿಗಳಿಗೆ ತೆರೆ ಎಳೆದರು.ಕೆಲವು ತಾಂತ್ರಿಕ ಕಾರಣಗಳಿಂದ ಯುವನಿಧಿ ಯೋಜನೆಯಡಿ ನೀಡಲಾಗುತ್ತಿರುವ ಆರ್ಥಿಕ ನೆರವು ವಿಳಂಬವಾಗಿರಬಹುದು. ಹಾಗೆಂದು ಇದನ್ನು ಸ್ಥಗಿತ ಮಾಡುತ್ತೇವೆ ಎಂದು ಯಾರೂ ಭಾವಿಸಬೇಕಾಗಿಲ್ಲ. ಅನುದಾನದ...