Wednesday, June 25

Tag: ಕೂಡಲಸಂಗಮ ಧರ್ಮ ಕ್ಷೇತ್ರದ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠದ ಪ್ರಥಮ ಜಗದ್ಗುರು ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ

ಮಾಡು ಇಲ್ಲವೇ ಮಡಿ..! ಪಂಚಮಸಾಲಿ ಮೀಸಲಾತಿಗಾಗಿ ಡಿ.9ರಂದು ಸುವರ್ಣ ಸೌಧಕ್ಕೆ ಮುತ್ತಿಗೆ

ಮಾಡು ಇಲ್ಲವೇ ಮಡಿ..! ಪಂಚಮಸಾಲಿ ಮೀಸಲಾತಿಗಾಗಿ ಡಿ.9ರಂದು ಸುವರ್ಣ ಸೌಧಕ್ಕೆ ಮುತ್ತಿಗೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಪಂಚಮಸಾಲಿ ಮೀಸಲಾತಿ ಹೋರಾಟ ಇದೀಗ ನಿರ್ಣಾಯಕ ಹಂತ ತಲುಪಿದೆ. ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಡಿಸೆಂಬರ್ 9ರಂದು ಬೆಳಗಾವಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ತಯಾರಿ ನಡೆದಿದೆ. ಡಿಸೆಂಬರ್ 9 ಕ್ಕೆ ಸುವರ್ಣ ವಿಧಾನ ಸೌಧಕ್ಕೆ ಲಕ್ಷಾಂತರ ಪಂಚಮಸಾಲಿಗಳಿಂದ ಪಂಚಮಸಾಲಿ ವಕೀಲರ ನೇತೃತ್ವದಲ್ಲಿ ಹಾಗೂ ಟ್ರ್ಯಾಕ್ಟರ್ ಮೂಲಕ ಮುತ್ತಿಗೆ ಹಾಕಲಾಗುವುದು ಎಂದು ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠದ ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ. ಪಂಚಮಸಾಲಿ 2a ಹಾಗೂ ಲಿಂಗಾಯತ ಉಪಸಮಾಜಗಳ OBC ಮೀಸಲಾತಿ ನೀಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡದ ಕಾರಣ ಈ ಹೋರಾಟ ನಡೆಸಲಾಗುತ್ತಿದೆ ಎಂದು ಶ್ರೀಗಳು ತಿಳಿಸಿದ್ದಾರೆ. ಬೆಳಗಾವಿ ಸುವರ್ಣ ವಿಧಾನಸೌಧ ಅಧಿವೇಶನಕ್ಕೆ ಮುಂಚಿತವಾಗಿ ಪಂಚಮಸಾಲಿ ಮೀಸಲಾತಿ ಘೋಷಿಸಬೇಕೆಂದು ಹಕ್ಕೊತ್ತಾಯಿಸಿ ಡಿಸೆಂಬರ್ 9ರಂದು ಸೋಮವಾರ ಬೆಳಿಗ್ಗೆ 10 ಕ್ಕೆ ಬೆಳಗಾವಿಯ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಿಂದ ಮೆರವಣಿಗೆ ನಡೆಸಲಾಗುತ್ತದೆ. ವಕೀಲರ ನೇತೃತ್ವದಲ್ಲಿ ಪಂಚಮಸಾಲಿ-ಮಲೆಗೌಡ-ಗೌಡ ದೀಕ್ಷಾ ಲಿಂಗಾಯತರಿಂದ ಸುವರ್ಣ ವಿಧಾನ...