Wednesday, June 25

ಮಹಾರಾಷ್ಟ್ರದಲ್ಲಿ ದಾರುಣ ಘಟನೆ; ರೈಲಿನಡಿ ಸಿಲುಕಿ 10 ಮಂದಿ ಸಾವು

ಮುಂಬೈ: ಮಹಾರಾಷ್ಟ್ರದ ಜಲಗಾಂವ್ ಬಳಿ ರೈಲು ಹರಿದು 10 ಮಂದಿ ಸಾವನ್ನಪ್ಪಿದ್ದಾರೆ. ಬುಧವಾರ ಸಂಜೆ ಈ ದುರ್ಘಟನೆ ಸಂಭವಿಸಿದೆ.

ಜಲಗಾಂವ್ ಸಮೀಪದ ಪಚೋರಾ ರೈಲು ನಿಲ್ದಾಣದ ಬಳಿ ಸಂಜೆ 5 ಗಂಟೆ ಸುಮಾರಿಗೆ ಪುಷ್ಪಕ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ವದಂತಿ ಹಬ್ಬಿತು. ಭಯಭೀತರಾದ ಪ್ರಯಾಣಿಕರು ಚೈನ್ ಎಳೆದು ರೈಲನ್ನು ನಿಲ್ಲಿಸಿದ್ದರು. ಆತುರದಲ್ಲೇ ರೈಲಿನಿಂದ ಇಳಿದು ಪಕ್ಕದ ಹಳಿಮೇಲೆ ಪ್ರಯಾಣಿಕರು ಜಮಾಯಿಸಿದ್ದರು. ಅದಾಗಲೇ ಮತ್ತೊಂದು ರೈಲು ಆ ಹಳಿ ಮೇಲೆ ಬಂದಿದ್ದು, ಎಕ್ಸ್ ಪ್ರೆಸ್ ರೈಲು ಹರಿದಿದೆ. ದುರ್ಘಟನೆಯಲ್ಲಿ ಕನಿಷ್ಠ10 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.