Wednesday, June 25

“ನಾವು ಯಾವುದೇ ಅವಕಾಶವನ್ನು ಬಿಟ್ಟುಕೊಡುವುದಿಲ್ಲ” ಮೋದಿ ಸಂದೇಶ

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾಪಕ್ಷ ಗೆದ್ದು ಬೀಗಿದೆ. ಕಾರ್ಯಕರ್ತರ ಜಯಘೋಷ ಮುಗಿಲುಮುಟ್ಟಿದೆ. ಈ ಸನ್ನಿವೇಶದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತಮ್ಮದೇ ಶೈಲಿಯಲ್ಲಿ ಬಣ್ಣಿಸಿದ್ದಾರೆ.

ಜನಶಕ್ತಿಯೇ ಸರ್ವಶ್ರೇಷ್ಠ! ಅಭಿವೃದ್ಧಿ ಗೆಲ್ಲುತ್ತದೆ, ಉತ್ತಮ ಆಡಳಿತ ಗೆಲ್ಲುತ್ತದೆ ಎಂದವರು ಹೇಳಿದ್ದಾರೆ. ದೆಹಲಿ ಚುನಾವಣಾ ಫಲಿತಾಂಶ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿ ಪ್ರತಿಕ್ರಿಯಿಸಿರುವ ಮೋದಿ, ಬಿಜೆಪಿಗೆ ಈ ಅದ್ಭುತ ಮತ್ತು ಐತಿಹಾಸಿಕ ಜನಾದೇಶಕ್ಕಾಗಿ ದೆಹಲಿಯ ನನ್ನ ಪ್ರೀತಿಯ ಸಹೋದರ ಸಹೋದರಿಯರಿಗೆ ನಮಸ್ಕರಿಸುತ್ತೇನೆ. ಈ ಆಶೀರ್ವಾದಗಳನ್ನು ಸ್ವೀಕರಿಸಲು ನಮಗೆ ವಿನಮ್ರತೆ ಮತ್ತು ಗೌರವವಿದೆ ಎಂದಿದ್ದಾರೆ.

ದೆಹಲಿಯನ್ನು ಅಭಿವೃದ್ಧಿಪಡಿಸುವಲ್ಲಿ, ಜನರ ಒಟ್ಟಾರೆ ಜೀವನ ಮಟ್ಟವನ್ನು ಸುಧಾರಿಸುವಲ್ಲಿ ಮತ್ತು ವಿಕ್ಷಿತ ಭಾರತವನ್ನು ನಿರ್ಮಿಸುವಲ್ಲಿ ದೆಹಲಿಗೆ ಪ್ರಮುಖ ಪಾತ್ರವಿದೆ ಎಂದು ಖಚಿತಪಡಿಸಿಕೊಳ್ಳುವಲ್ಲಿ ನಾವು ಯಾವುದೇ ಅವಕಾಶವನ್ನು ಬಿಟ್ಟುಕೊಡುವುದಿಲ್ಲ ಎಂದವರು ಭರವಸೆ ನೀಡಿದ್ದಾರೆ.