Thursday, January 29

ಕೋವಿಡ್ ಹಗರಣ ಆರೋಪ; ಆಯೋಗದ ವರದಿಯಿಂದ ಏನೂ ಆಗಲ್ಲ ಎಂದ ಮಾಜಿ ಸಿಎಂ

ಬಳ್ಳಾರಿ: ಕಾನೂನು ಚೌಕಟ್ಟಿನಲ್ಲೇ ಕೋವಿಡ್ ಸೋಂಕು ನಿರ್ವಹಣಾ ಕೆಲಸ ನಡೆದಿದ್ದು, ಯಾವುದೇ ಹಗರಣ ನಡೆದಿಲ್ಲ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಕೋವಿಡ್‌ ಅಕ್ರಮ ಕುರಿತ ಆಯೋಗದ ವರದಿ ಬಗ್ಗೆ ಕಾಂಗ್ರೆಸ್ ನಾಯಕರು ನೀಡಿರುವ ಹೇಳಿಕೆ ಕುರಿತಂತೆ ಪ್ರತಿಕ್ರಿಯಿಸಿರುವ ಯಡಿಯೂರಪ್ಪ, ವರದಿಯಿಂದ ಏನೂ ಆಗುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಉಪಚುನಾವಣೆ ಹಿನ್ನೆಲೆಯಲ್ಲಿ ಕೋವಿಡ್‌ ಅಕ್ರಮ ಕುರಿತು ಕಾಂಗ್ರೆಸ್ ನಾಯಕರು ಆರೋಪ ಮೈನಾಡುತ್ತಿದ್ದಾರೆ. ದುರುದ್ದೇಶದಿಂದ ನನ್ನ ಮತ್ತು ಮಾಜಿ ಸಚಿವ ಬಿ. ಶ್ರೀರಾಮುಲು ವಿರುದ್ಧ ಅಭಿಯೋಜನೆಗೆ ಅನುಮತಿ ನೀಡುವಂತೆ ಶಿಫಾರಸು ಮಾಡಿದ್ದಾರೆ ಎಂದ ಬಿ.ಎಸ್.ವೈ, ಇದರಿಂದ ಯಾವುದೇ ಪ್ರಯೋಜನವಾಗದು ಎಂದರು.