Wednesday, September 2

ದೇವರಾಯ’ನಾಗಿ ಕಿಚ್ಚ ಸುದೀಪ್; ಚರಿತ್ರಿಕ ಪಾತ್ರದ ಅನಾವರಣ 

ಬೆಂಗಳೂರು: ನಟ ಕಿಚ್ಚ ಸುದೀಪ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಹಲವು ಸಿನಿಮಾಗಳು ಘೋಷಣೆಯಾಗಿದ್ದು, ಅಭಿಮಾನಿಗಳ ಕುತೂಹಲ ಹೆಚ್ಚಿಸಿದೆ. ಇದೀಗ ವಿಜಯನಗರ ಸಾಮ್ರಾಜ್ಯದ ಶ್ರೇಷ್ಠ ಚಕ್ರವರ್ತಿ ಶ್ರೀ ಕೃಷ್ಣದೇವರಾಯನ ಭವ್ಯ ಇತಿಹಾಸವನ್ನು ತೆರೆಮೇಲೆ ಕಟ್ಟಿಕೊಡುವ ‘ದೇವರಾಯ’ ಚಿತ್ರ ಘೋಷಣೆಯಾಗಿದೆ.

ಸುದೀಪ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಚಿತ್ರದ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. “ವಿಶೇಷವಾದ ದಿನದಂದು ಒಂದು ಐತಿಹಾಸಿಕ ಪಾತ್ರ ಹಾಗೂ ಕಾಲವನ್ನು ಮೀರಿ ನಿಲ್ಲುವ ರಾಜನ ಪರಂಪರೆಯನ್ನು ಹಂಚಿಕೊಳ್ಳುತ್ತಿದ್ದೇನೆ. ಶ್ರೀ ಕೃಷ್ಣದೇವರಾಯನ ಈ ಪಯಣದ ಭಾಗವಾಗಲು ಹೆಮ್ಮೆ ಎನಿಸುತ್ತಿದೆ” ಎಂದು ಅವರು ಬರೆದುಕೊಂಡಿದ್ದಾರೆ.

ಚಿತ್ರದಲ್ಲಿ ಸುದೀಪ್ ಅವರು ಶ್ರೀ ಕೃಷ್ಣದೇವರಾಯನ ಗಾಂಭೀರ್ಯಭರಿತ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪೀಪಲ್ ಮೀಡಿಯಾ ಫ್ಯಾಕ್ಟರಿ ನಿರ್ಮಿಸುತ್ತಿರುವ ಈ ಪ್ಯಾನ್-ಇಂಡಿಯಾ ಬಿಗ್ ಬಜೆಟ್ ಚಿತ್ರಕ್ಕೆ ಭರ್ಜರಿ ತಯಾರಿ ನಡೆಯುತ್ತಿದೆ.

Experience the rise of Devaraaya https://t.co/8JGsoMIWJm

On a day filled with love, I share something very special. ❤️

A character rooted in history.
A king whose legacy echoes through time.
A journey I’m truly honoured to be a part of *Sri Krishna Devaraaya*

The journey… pic.twitter.com/s4y4IVX0ze

— Kichcha Sudeepa (@KicchaSudeep) September 2, 2026

‘ದೇವರಾಯ’ ಚಿತ್ರವನ್ನು 2027ರ ಡಿಸೆಂಬರ್‌ನಲ್ಲಿ ವಿಶ್ವದಾದ್ಯಂತ ಬಿಡುಗಡೆ ಮಾಡಲು ಚಿತ್ರತಂಡ ಯೋಜನೆ ರೂಪಿಸಿದೆ. ಐತಿಹಾಸಿಕ ಹಿನ್ನೆಲೆಯ ಈ ಚಿತ್ರ ಸುದೀಪ್ ಅವರ ವೃತ್ತಿಜೀವನದ ಮತ್ತೊಂದು ಮಹತ್ವಾಕಾಂಕ್ಷೆಯ ಚಿತ್ರವಾಗುವ ನಿರೀಕ್ಷೆ ಮೂಡಿಸಿದೆ.

Experience the rise of Devaraaya https://t.co/8JGsoMIWJm

On a day filled with love, I share something very special. ❤️

A character rooted in history.
A king whose legacy echoes through time.
A journey I’m truly honoured to be a part of *Sri Krishna Devaraaya*

The journey… pic.twitter.com/s4y4IVX0ze

— Kichcha Sudeepa (@KicchaSudeep) September 2, 2026