Tuesday, June 24

ಸಿನಿಲೋಕದ ಲೈಂಗಿಕ ಹಗರಣ; ಪರಿಹಾರ ಕ್ರಮಗಳಿಗೆ ಸ್ವಾಗತ ಎಂದ ರಜನಿಕಾಂತ್

ಚೆನ್ನೈ: ಮಲಯಾಳಂ ಸಿನಿ ಲೋಕದಲ್ಲಿ ಲೈಂಗಿಕ ಕಿರುಕುಳ ಪ್ರಕರಣಗಳು ತಲ್ಲಣ ಸೃಷ್ಟಿಸಿದೆ.

ಹೇಮಾ ಸಮಿತಿ ವರದಿ ಸಲ್ಲಿಕೆ ಬಳಿಕ ಮಾಲಿವುಡ್‌ನಲ್ಲಿ ಖ್ಯಾತ ಕಲಾವಿದರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿದೆ.
ನಿರ್ದೇಶಕರಾದ ರಂಜಿತ್, ನಟರಾ ಜಯಸೂರ್ಯ, ಮುಕೇಶ್‌ ಸೇರಿದಂತೆ ಹಲವರ ವಿರುದ್ಧ ಅನುಚಿತ ವರ್ತನೆ ಹಾಗೂ ಕಿರುಕುಳದ ಆರೋಪ ಪ್ರತಿಧ್ವನಿಸಿದೆ. ಈ ಆರೋಪಗಳಿಂದಾಗಿ ಉನ್ನತ ಸ್ಥಾನದಲ್ಲಿದ್ದ ಹಲವು ನಟರು ಪದತ್ಯಾಗ ಮಾಡಿದ್ದಾರೆ.

ಇದೇ ವೇಳೆ, ಹೇಮಾ ಸಮಿತಿಯ ವರದಿಯಲ್ಲಿನ ಶಿಫಾರಸುಗಳ ಕುರಿತಂತೆ ಭಾರೀ ಚರ್ಚೆಯಾಗುತ್ತಿದೆ. ಆದರೆ ಈ ಬಗ್ಗೆ ತಾನು ಹೇಳಿಕೆಗಳನ್ನು ನೀಡಲ್ಲ ಎಂದು ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನೀಕಾಂತ್ ಹೇಳಿದ್ದಾರೆ.

ಈ ಕುರಿತಂತೆ ಪ್ರತಿಕ್ರಿಯಿಸಿರುವ ಅವರು, ಪರಿಹಾರಗಳನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ ಮತ್ತು ಬೆಂಬಲಿಸುತ್ತೇನೆ ಎಂದು ಹೇಳಿದ್ದಾರೆ.